ಬಾಲಕೃಷ್ಣ ನಾಯಕ್‌ಗೆ ಕಲ್ಕೂರ ಪ್ರಶಸ್ತಿ


Team Udayavani, Feb 15, 2019, 12:30 AM IST

1.jpg

ಉಪ್ಪೂರು ತೆಂಕಬೆಟ್ಟುವಿನ ಶ್ರೀ ವಿನಾಯಕ ಯಕ್ಷಗಾನ ಸಂಘ ಇದರ ಸ್ಥಾಪಕ ದಿ.ಯು. ಶಿವರಾಮ ಕಲ್ಕೂರ ಅವರ ಸ್ಮರಣಾರ್ಥ ಪ್ರಶಸ್ತಿಯನ್ನು ಯಕ್ಷಗಾನದ ಪ್ರಸಾದನ ಕಲೆಯಲ್ಲಿ ಪಳಗಿದ ಬ್ರಹ್ಮಾವರ ಹಂದಾಡಿಯ ಬಾಲಕೃಷ್ಣ ನಾಯಕ್‌ ಇವರಿಗೆ ಫೆ.16ರಂದು ಪ್ರದಾನ ಮಾಡಲಾಗುತ್ತಿದೆ. 

 ಕಲಾವಿದರಿಗೆ ಮೆರುಗು ನೀಡುವ ವಿವಿಧ ವೇಷಭೂಷಣಗಳನ್ನು ತಯಾರಿಸಿ ಪ್ರಸಾದನ ಕಲೆಯಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವವರು ಯಕ್ಷಗಾನ ಕ್ಷೇತ್ರದಲ್ಲಿ ಬಾಲಣ್ಣನೆಂದೇ ಖ್ಯಾತಿಯಾಗಿರುವ ಹಂದಾಡಿಯ ಬಾಲಕೃಷ್ಣ ನಾಯಕ್‌. ವೇಷಭೂಷಣ ತಯಾರಕ ಹಂದಾಡಿಯ ಸುಬ್ಬಣ್ಣ ಭಟ್‌ ಇವರ ಅಜಪುರ ಯಕ್ಷಗಾನ ಸಂಘದಲ್ಲಿ ವೇಷಭೂಷಣವನ್ನು ಕಲಿತರು. ಬಳಿಕ 1993ರಲ್ಲಿ ತಮ್ಮದೇ ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಎಂಬ ಸಂಸ್ಥೆಯನ್ನು ಸ್ಥಾಪಿಸಿ ಪ್ರಸ್ತುತ ನೂರಾರು ಸಂಘ-ಸಂಸ್ಥೆಗಳಿಗೆ ಮುಖವರ್ಣಿಕೆ, ವೇಷಭೂಷಣ ಸರಬರಾಜು ಮಾಡುತ್ತಿದ್ದಾರೆ. 

ಮಂದಲೆ, ಕರ್ಣ ಕುಂಡಲ, ಕೇದಿಗೆ, ಕೊರಳು ಅಡ್ಡಿಗೆ, ಭುಜಕೀರ್ತಿ, ಎದೆಕಟ್ಟು, ಕೈಚಿನ್ನ, ತೋಳ್‌ ಚಿನ್ನ, ವೀರ ಕಸೆ, ಕಾಲ್‌ಕಡಗ, ಗೆಜ್ಜೆ ತಾವರೆ, ತುರಾಯಿ ಹೀಗೆ ಅನೇಕ ಪರಿಕರಗಳನ್ನು ಮನೆಯಲ್ಲಿಯೇ ತಯಾರಿಸಿ ಪ್ರಸಾದನ ಕಲೆಯಿಂದ ಯಕ್ಷಗಾನವನ್ನು ಆಕರ್ಷಕವಾಗಿ ಮಾಡಿದ್ದಾರೆ. ಯಕ್ಷಗಾನದ ವೇಷಭೂಷಣಗಳಲ್ಲಿಯೂ ಇಂದು ಆಧುನಿಕತೆಯನ್ನು ಕಾಣುತ್ತಿದ್ದರೂ, ಬಣ್ಣ ಹಚ್ಚುವ ಕಲೆಯಲ್ಲಿ ಏನೂ ಬದಲಾವಣೆಯಾಗಿಲ್ಲ ಎಂದು ಹೇಳುತ್ತಾರೆ. 

ಪ್ರಸಾದನ ಕಲೆಯಲ್ಲಿ ಪಳಗಿರುವ ನಾಯಕ್‌ ಅವರು ಈ ಕಲೆಯು ತನ್ನ ಮುಂದಿನ ಪೀಳಿಗೆಗೂ ಉಳಿಯಬೇಕು ಎನ್ನುವ ಸಲುವಾಗಿ ತಮ್ಮ ಮಕ್ಕಳಾದ ನಾಗಭೂಷಣ, ಮಿಥುನ್‌ ಮತ್ತು ಜಯಂತ್‌ ಅವರಲ್ಲಿಯೂ ಯಕ್ಷಗಾನದ ಪ್ರಸಾದನ ಕಲೆಯಲ್ಲಿ ಆಸಕ್ತಿ ಮೂಡಿಸಿ ಅವರೂ ಈ ಕಲೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳುವಂತೆ ಮಾಡಿದ್ದಾರೆ.            

ರಾಘವೇಂದ್ರ ಭಟ್‌ ಮರ್ಣೆ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.