ಬೋಜಪ್ಪ ಸುವರ್ಣ ಪ್ರಶಸ್ತಿಗೆ ವಾಸುದೇವ ಸಾಮಗ 


Team Udayavani, Feb 22, 2019, 12:30 AM IST

6.jpg

ಯಕ್ಷಗಾನ ಕಲಾಕ್ಷೇತ್ರ ಉಡುಪಿ (ರಿ.) ಇದರ ನಿಟ್ಟೂರು ಬೋಜಪ್ಪ ಸುವರ್ಣ ಪ್ರಶಸ್ತಿಗೆ ಹಿರಿಯ ಅರ್ಥದಾರಿ ಮಲ್ಪೆ ವಾಸುದೇವ ಸಾಮಗರು ಭಾಜನರಾಗುತಿದ್ದಾರೆ.ಪ್ರಶಸ್ತಿ ಪ್ರದಾನ ಫೆ.23ರಂದು ಉಡುಪಿ ಗುಂಡಿ ಬೈಲಿನಲ್ಲಿ ನೆರವೇರಲಿದೆ.ಬಳಿಕ ಮಂಡಳಿಯ ಸದಸ್ಯರಿಂದ ಯಕ್ಷಗಾನವಿದೆ. 

 ತೆಂಕು-ಬಡಗು ತಿಟ್ಟಿನ ಸವ್ಯಸಾಚಿ ಕಲಾವಿದರೆಂದು ಗುರುತಿಸಲ್ಪಟ್ಟ ವಾಸುದೇವ ಸಾಮಗರ ತಂದೆ ಮತ್ತು ದೊಡ್ಡಪ್ಪ ಆಗಿನ ಮಹಾನ್‌ ಕಲಾವಿದರು ಮತ್ತು ಹರಿದಾಸರಾದ ಕಾರಣ ಯಕ್ಷಗಾನ ಇವರನ್ನು ಕೈಬೀಸಿ ಕರೆಯಿತು.ಕೋಟ ಶ್ರೀಧರ ಹಂದೆಯವರ ಒತ್ತಾಸೆಯ ಮೇರೆಗೆ ಪ್ರಥಮ ಬಾರಿಗೆ ದೊಡ್ಡ ಕೂಟದಲ್ಲಿ ಅರ್ಥದಾರಿಯಾಗಿ ಗಮನ ಸೆಳೆದು ಅವರದ್ದೇ ಯಜಮಾನಿಕೆಯ ಅಮೃತೇಶ್ವರಿ ಮೇಳದಲ್ಲಿ ವೃತ್ತಿರಂಗಕ್ಕೆ ಕಾಲಿಟ್ಟರು. ನಾರಣಪ್ಪ ಉಪ್ಪೂರರ ಒಡನಾಟದದಲ್ಲಿ ಪರಿಪೂರ್ಣ ಕಲಾವಿದರಾಗಿ ಆ ಮೇಳದಲ್ಲಿ ಗುರುತಿಸಿಕೊಂಡರು.ಅಲ್ಲಿ ದೊಡ್ಡ ಸಾಮಗರು,ಚಿಟ್ಟಾಣಿಯವರು,ಕೋಟ ವೈಕುಂಠ,ಎಂ.ಎ.ನಾಯಕ್‌ ನಗರ ಜಗನ್ನಾಥ ಶೆಟ್ಟಿ,ಗೋಡೆ ನಾರಾಯಣ ಹೆಗಡೆಯವರಂತ ಘಟಾನುಘಟಿಗಳ ಸಾಂಗತ್ಯ ದೊರೆಯಿತು.ಆಗ ಪ್ರದರ್ಶನಗೊಳ್ಳುತ್ತಿದ್ದ ಯಕ್ಷಲೋಕ ವಿಜಯ ಪ್ರಸಂಗದ ಪ್ರದೀಪನ ಪಾತ್ರ ಅವರಿಗೆ ಅಪಾರ ಜನಮನ್ನಣೆ ಗಳಿಸಿಕೊಟ್ಟಿತು. ಧರ್ಮಸ್ಥಳ ಕದ್ರಿ,ಕರ್ನಾಟಕ ಸುರತ್ಕಲ್‌ ಮೇಳ ಬಳಿಕ ಕಾಳಿಂಗ ನಾವಡರ ಪ್ರಸಿದ್ಧಿಯ ಕಾಲದಲ್ಲಿ ಸಾಲಿಗ್ರಾಮ ಮೇಳ ಸೇರಿದ ಅವರ ಭಾನುತೇಜಸ್ವಿ ಪ್ರಸಂಗದ ಭಾನುತೇಜಸ್ವಿ ,ಚೈತ್ರಪಲ್ಲವಿಯ ಪಾತ್ರಗಳು ಪ್ರಸಿದ್ಧಿ ಪಡೆದವು.ನಾಗಶ್ರೀ ಪ್ರಸಂಗ ಶುಬ್ರಾಂಗನ ಪಾತ್ರಕ್ಕೆ ಶಿರಿಯಾರ ಮಂಜು ನಾಯ್ಕರ ನಂತರ ಹೊಸ ರೂಪವನ್ನು ನೀಡಿದ ಇವರು. ಯಕ್ಷಗಾನದಲ್ಲಿ ಪ್ರಥಮ ಬಾರಿಗೆ ಕೋರ್ಟು ಸನ್ನಿವೇಷವನ್ನು ಸೃಷ್ಟಿಸಿ ಹೊಸ ದಾಖಲೆ ಮೂಡಿಸಿದರು.ಪೆರ್ಡೂರು ಮೇಳದಲ್ಲು ಹೊಸ ಪ್ರಸಂಗಗಳಲ್ಲಿ ಸಿದ್ದಕಟ್ಟೆ ಚನ್ನಪ್ಪ ಶೆಟ್ಟಿ ಮತ್ತು ಇವರ ಜೋಡಿವೇಷಗಳು ಮಾತಿನ ಚಕಮಕಿಯಿಂದ ಹೊಸ ಹೊಸ ಪ್ರೇಕ್ಷಕರನ್ನು ಯಕ್ಷಗಾನದತ್ತ ಸೆಳೆದಿತ್ತು.ಬಳಿಕ ಬಗ್ವಾಡಿ ಸೌಕೂರು ಮುಂತಾದ ಬಯಲಾಟ ಮೇಳದಲ್ಲಿ ಬಾಗವಹಿಸಿ ಮೇಳದ ಯಜಮಾನಿಕೆಯನ್ನೂ ಮಾಡಿ ಸಿಹಿ ಕಹಿ ಉಂಡವರು.

 ಎಲ್ಲಾ ರೀತಿಯ ಪಾತ್ರಗಳಿಗೂ ಸೈ, ಯಜಮಾನರಿಗೆ ಸಹಕಾರಿಯಾಗಿ ಮೇಳದ ಮೆನೇಜರ್‌ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.ಅನೇಕ ಪ್ರಸಂಗಗಳಲ್ಲಿ ನಾಯಕ ಪ್ರತಿನಾಯಕ ಹಾಸ್ಯ ಸ್ತ್ರೀವೇಷವನ್ನೂ ನಿರ್ವಹಿಸಿದ್ದಾರೆ.ವಿಭಿನ್ನ ನಿಲುವಿನ ಕೈಕೆ ದಶರಥ,ದೇವವ್ರತ-ಭೀಷ್ಮ,ಕಂಸ ಕೃಷ್ಣ, ರುಕಾ¾ಂಗದ-ಮೋಹಿನಿ ಅಂಬೆ-ಪರಶುರಾಮ ಮಂಥರೆ ಮುಂತಾದ ಪಾತ್ರಗಳನ್ನು ತನ್ನ ವೈಚಾರಿಕ ನಿಲುವಿನಿಂದ ಸಮರ್ಥಿಸಿಕೊಳ್ಳುವುದರಲ್ಲಿ ನಿಸ್ಸೀಮರು.ಉತ್ತರ ಕುಮಾರ ಅವರಿಗೆ ಆಟ ಕೂಟದಲ್ಲಿ ಅಪಾರ ಮನ್ನಣೆ ತಂದುಕೊಟ್ಟ ಪಾತ್ರ.

 ಸಂಯಮಂ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿ ತನ್ನ ಧ್ಯೇಯ ಧೋರಣೆಯಂತೆ ಸಮಯ ಮಿತಿಯ ತಾಳಮದ್ದಳೆ ಕಾರ್ಯಕ್ರಮಗಳನ್ನು ನಡೆಸಿ ಕೊಳ್ಳುತ್ತಾ ತಾಳಮದ್ದಳೆಗೆ ಹೊಸ ರೂಪ ,ಹೊಸ ಶಿಸ್ತನ್ನು ತಂದಿತ್ತ ಸಾಹಸಿ ಸಾಮಗರು. 

ಪ್ರೊ| ಎಸ್‌.ವಿ.ಉದಯ ಕುಮಾರ ಶೆಟ್ಟಿ 

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.