ಸಂಗೀತ ಪರಿಷತ್‌ ರಜತಪಥದ ಹೆಜ್ಜೆಗಳು


Team Udayavani, Mar 22, 2019, 12:30 AM IST

music.jpg

ಕಾಲು ಶತಮಾನದ ಹಿಂದೆ ಮಂಗಳೂರಿನಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತಕ್ಕಾಗಿಯೇ 1993ರಂದು ಹುಟ್ಟಿಕೊಂಡ ಸಂಸ್ಥೆಯೇ ಸಂಗೀತ ಪರಿಷತ್‌ (ರಿ.). ಸಾರ್ಥಕ ಸಂಭ್ರಮದ 25 ವರ್ಷಗಳನ್ನು ಈ ಬಾರಿ (2018-19ರಲ್ಲಿ) ಪೂರ್ಣಗೊಳಿಸುವುದಕ್ಕೆ ಸಜ್ಜಾಗಿ ನಿಂತಿದೆ. ಈ ರಜತ ಸಂಭ್ರಮದ ಹೆಜ್ಜೆಗಳನ್ನು ವೈಶಿಷ್ಟ್ಯಪೂರ್ಣವಾಗಿ, ಮೌಲ್ಯಯುತವಾಗಿ ಆಚರಿಸುತ್ತಾ ಬರುತ್ತಿದ್ದು, ಮಾ. 24ರಂದು ಅದರ ವಿಧ್ಯುಕ್ತ ಮಂಗಳಾಚರಣೆಯನ್ನೂ ಯೋಜಿಸುತ್ತಿದೆ. 

ಮಂಗಳೂರಿನ ಡಾ| ಸಿ.ಆರ್‌. ಬಲ್ಲಾಳರ ಸಾರಥ್ಯದಲ್ಲಿ ಉದ್ಘಾಟನೆಗೊಂಡು ಈ ಸಂಗೀತ ಸಂಸ್ಥೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳ ಬಗ್ಗೆ ಹೆಚ್ಚು ಚಿಂತಿಸದೆ, ಕಲಾಮಾತೆಯ ಅನುಗ್ರಹ, ಸಾರ್ವಜನಿಕ ಮಹಾಶಯರ ಬೆಂಬಲ, ಪ್ರೀತಿ, ವಿಶ್ವಾಸಗಳನ್ನೇ ಆಧರಿಸಿ, ನಮ್ಮ ಪ್ರದೇಶದ ಸಂಗೀತ ಕಲಿಕಾ ವಿದ್ಯಾರ್ಥಿಗಳಿಗೆ, ಗುರುಗಳಿಗೆ, ಕಲಾವಿದರಿಗೆ ಹಾಗೂ ರಸಿಕರಿಗೆ ಅತ್ಯುತ್ತಮ ಮಟ್ಟದ ಸಂಗೀತ ಕೇಳ್ಮೆ, ವೇದಿಕೆ ಹಾಗೂ ಕಲಿಕೆಗಳನ್ನು ಶಾಸ್ತ್ರೀಯ ಚೌಕಟ್ಟಿನಲ್ಲೇ ಒದಗಿಸಿಕೊಡಲು ನೆರವಾಗುವ ಸದುದ್ದೇಶದಿಂದ, ಯಾವುದೇ ಶುಲ್ಕವಿಲ್ಲದೆ, ನಿಸ್ಪೃಹತೆಯಿಂದ ನಿರಾಂತಕವಾಗಿ ನಡೆದು ಬಂದಿದೆ. ಹಲವು ಪ್ರತಿಷ್ಠಿತ ವಿದ್ವಾಂಸರುಗಳಿಂದ, ಯುವ ಪ್ರತಿಭೆಗಳಿಂದ ಗಾಯನ, ವಾದನ ಕಛೇರಿಗಳು, ವೈವಿಧ್ಯಮಯ ಹಿಮ್ಮೇಳ ಕಲಾವಿದರ ಸಾಥ್‌, ವಿದ್ಯಾರ್ಥಿಗಳಿಗಾಗಿ 2 ಹಂತದ ಶಾಸ್ತ್ರೀಯ ಸಂಗೀತ ಸ್ಪರ್ಧೆಗಳು, ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಹಿಗ್ಗಿಸಲು ಅನುಭವಿ ಕಲಾವಿದರುಗಳಿಂದ ಸಂಗೀತ ಶಿಬಿರಗಳು, ಶೈಕ್ಷಣಿಕ ಕಾರ್ಯಕ್ರಮಗಳಾಗಿ ಶಾಲೆಗಳಲ್ಲಿ ರಾಗಜ್ಞಾನ ಸೌರಭ, ಅಲ್ಲದೆ ಕಲಾವಿದರಿಗೆ ಸರಳ ಸಮ್ಮಾನಗಳು, ಸಂಗೀತ ಕೇಳ್ಮೆಗೆ ಹಿತವೆನಿಸುವ ಸಭಾಂಗಣ, ಧ್ವನಿಬೆಳಕಿನ ವ್ಯವಸ್ಥೆಗಳು, ಭರ್ಜರಿ ಭೋಜನ, ಉಪಹಾರಗಳು, ನಿಸ್ವಾರ್ಥ ಸೇವೆಗೈಯುವ ಆತ್ಮೀಯ ಸ್ವಯಂಸೇವಕರ ದಂಡು, ಸಭೆಯಲ್ಲೇ ಕುಳಿತು ಕಾರ್ಯಕ್ರಮದ ಒಪ್ಪ ಓರಣವನ್ನು ವಿಶ್ಲೇಷಿಸುತ್ತಾ ತಿಳಿಹೇಳುವ ಅಧ್ಯಕ್ಷರ ಮೇಲ್ವಿಚಾರಣೆ, ಪಾರದರ್ಶಕವಾಗಿ ಎಲ್ಲಾ ಸದಸ್ಯರುಗಳಿಗೂ ತಲುಪಿಸುತ್ತಿರುವ ಸಂಸ್ಥೆಯ ಹಣದ ವಹಿವಾಟಿನ ಪರಿಚಯ, ಪ್ರಾಯೋಜಕತ್ವ ವಹಿಸಿದ ವಿತ್ತೀಯ ಸಂಸ್ಥೆಗಳ, ದಾನಿಗಳ ಸಂಪೂರ್ಣನೆರವು, ಸಂಗೀತ ಶ್ರವಣ ಸುಖಕ್ಕಾಗಿಯೇ ಧಾವಿಸಿ ಬರುವ ರಸಿಕಗಡಣ-ಇವೆಲ್ಲವೂ ಈ ಸಂಸ್ಥೆ ಕಳೆದ 24 ವರ್ಷಗಳಿಂದ ಈ ಕ್ಷೇತ್ರದಲ್ಲಿ ಊರಿದ ಗಟ್ಟಿಯಾದ ಹೆಜ್ಜೆಗಳಾಗಿದ್ದು ಈ ರಜತಪಥದಲ್ಲಿ ಇದರೊಂದಿಗೆ ಇನ್ನಿತರ ಕೆಲವು ನವೀನ ಸಾಧ್ಯತೆಗಳೂ ಕಾಣಿಸಿಕೊಂಡದ್ದು ಈ ಸಂಸ್ಥೆಯ ತ್ರಿವಿಕ್ರಮ ಬೆಳವಣಿಗೆಯ ಒಂದು ಚೋದ್ಯ. ಈ ರಜತ ಸಂಭ್ರಮದ ಕಿರೀಟಕ್ಕೆ ಬೆಂಗಳೂರಿನ ಲಲಿತಕಲಾ ಮಂದಿರ ಲಲಿತಕಲಾ ಕುಸುಮ ಬಿರುದನ್ನು ಬೆಳ್ಳಿಗರಿಯೋಪಾದಿಯಲ್ಲಿ ಪ್ರದಾನ ಮಾಡಿದೆ ಎಂಬುದು ಸಂತೋಷದ ಸಂಗತಿ. 

– ವಿ. ಪ್ರತಿಭಾ ಎಂ.ಎಲ್‌. ಸಾಮಗ 
 

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.