ಜಾತಕ ಕುಂಡಲಿಯಲ್ಲಿ ಪ್ರೀತಿ, ಪ್ರೇಮದ ವಿಚಾರ


Team Udayavani, Jan 6, 2018, 12:36 PM IST

6666.jpg

ಜೀವನದಲ್ಲಿ ತಂದೆ ತಾಯಿಗಳ ಪ್ರೀತಿ ಬೇರೆ, ಅಣ್ಣ ತಮ್ಮಂದಿರ ಪ್ರೀತಿ ಬೇರೆ. ಗೆಳೆತನದ ಪ್ರೀತಿ ವಿಶ್ವಾಸ ಬೇರೆ. ಸತಿಪತಿಗಳ ವಿಚಾರದಲ್ಲಿನ ಪ್ರೀತಿಯ ಬಗೆಯೇ ಬೇರೆ. ಇಲ್ಲಿಂದಾಚೆಗೆ ಸಲ್ಲುವ ಪ್ರೀತಿಗಳೂ ಬೇರೆ ಬೇರೆ. ಮದುವೆಗಿಂತ ಮುಂಚಿನ ಸಂಬಂಧ, ಮದುವೆಯ ನಂತರದ ಸಂಬಂಧ, ಜೀವನದಲ್ಲಿ ದಾರಿ ತಪ್ಪಿ ನಡೆಯುವ ಲೈಂಗಿಕ ವಿಚಾರ ಇತ್ಯಾದಿ ಎಲ್ಲವೂ ಬಗೆಬಗೆಯ ವಿಧಾನಗಳಿಂದಾಗಿ ವಿಚಿತ್ರವಾದ ಸಂಗತಿಗಳನ್ನು ಹೊರಚೆಲ್ಲುತ್ತಿರುತ್ತವೆ. ಕೆಲವರಿಗೆ ಸಲಿಂಗ ಪ್ರೇಮವೇ ಅನನ್ಯವಾದುದು. ಉಭಯ ರೀತಿಯ ಪ್ರೇಮ ವ್ಯವಹಾರಗಳಲ್ಲಿ ತೊಡಗಿಕೊಂಡವರೂ ಇದ್ದಾರೆ.

ಯಾಕೆ ಮದುವೆಗಳು ಭದ್ರವಾಗುವುದು ಅಪರೂಪ?
ಮದುವೆ ಎನ್ನುವುದು ಮಾನವನ ಜೀವನದಲ್ಲಿ ಉದಯವಾದ ವಿಧವಿಧವಾದ ನಾಗರಿಕತೆಗಳು ಬೆಳೆದಾದ ಮೇಲೆ ಹುಟ್ಟಿಕೊಂಡ ಸಂಸ್ಕಾರ. ಒಂದು ಗಂಡು ಜೀವನದ ಸಂದರ್ಭದಲ್ಲಿ ಮಧುರವಾದ ಜೀವನವನ್ನು ಪ್ರಾರಂಭಿಸಲು ಮಂಗಲಕಾರ್ಯದ ಚೌಕಟ್ಟಿನಲ್ಲಿ ಹೆಣ್ಣುಗಂಡುಗಳನ್ನು ಅಧಿಕೃತವಾಗಿ ಒಗ್ಗೂಡಿಸುವ ವಿಧಾನವೇ ಮದುವೆ. ಇಲ್ಲಿ ಪ್ರತಿ ಹೆಣ್ಣಿನ, ಗಂಡಿನ ನಕ್ಷತ್ರರಾಶಿಗಳ ಹೊಂದಾಣಿಕೆ ಹಾಗೂ ಹೆಣ್ಣು ಗಂಡಿನ ಜಾತಕ ಕುಂಡಲಿಯಲ್ಲಿ ಕಳತ್ರ ಸ್ಥಾನಗಳ (ಬಾಳ ಸಂಗಾತಿ ಸ್ಥಾನಗಳ) ಬಲಾಬಲಗಳ ಮೇಲಿಂದ ಮದುವೆ ಎಂಬ ಬಾಳಿನ ಮಧುರ ಪಲ್ಲವಿಯನ್ನು ಪ್ರಾರಂಭಿಸಬೇಕಾಗುತ್ತದೆ. ಶುಕ್ರ ಹಾಗೂ ಕುಜರು ತಂತಮ್ಮ ಶಕ್ತಿ ಹಾಗೂ ವಿನಾಶಕ ಶಕ್ತಿಯನ್ನು ಒಬ್ಬನ ಅಥವಾ ಒಬ್ಬಳ ಜಾತಕದಲ್ಲಿ ಸಕಾರಾತ್ಮಕವಾಗಿ ಮಿಡಿಸುವಂತಾದರೆ ಮದುವೆಯ ಬಂಧಕ್ಕೆ ಅನನ್ಯತೆಯ ಸಿದ್ಧಿ ದೊರಕುತ್ತದೆ. ಆದರೆ ಕಳತ್ರ ಸ್ಥಾನದ ಶಕ್ತಿ ಒದಗುವುದು, ಕುಜ ಅಥವಾ ಶುಕ್ರರು ದೋಷಕರಾಗದೇ ಇರುವುದು, ನಕ್ಷತ್ರ ಹಾಗೂ ರಾಶಿಗಳು ಹೆಣ್ಣು ಗಂಡಿನ ಸಂಬಂಧವಾಗಿ ಮುಕ್ತವಾಗಿ ಕೂಡಿ ಬರುವುದು ಸುಲಭದ ಮಾತಲ್ಲ. ಕಷ್ಟದ ವಿಚಾರವಿದು.

ಹೆಣ್ಣು ಗಂಡಿನ ಹೊಂದಾಣಿಕೆ ಹಾಗೂ ಆಯ್ಕೆಗಳು ಸ್ವರ್ಗಭಾಗ್ಯ ಸಿದ್ಧಿಯೇ?
ಸಾಮಾನ್ಯವಾಗಿ ಮದುವೆಗಳು ಸ್ವರ್ಗದಲ್ಲಿ ನಿಶ್ಚಯಿಸಲ್ಪಟ್ಟಿರುತ್ತವೆ ಎಂಬ ಮಾತಿದೆ. ನಮ್ಮ ಜೀವನದಲ್ಲಿ ಈ ಮಾತು ಹೌದು ಎಂಬುದನ್ನು ಯಾರೇ ಆಗಲಿ ಒಪ್ಪಿಕೊಳ್ಳಬೇಕು. ಸಿನಿಮಾ ಜೀವನ ಯಾರಿಗೂ ಆದರ್ಶವಾಗಬಾರದು. ಆದರೂ ಉದಾಹರಣೆಗೆ ಸಿನಿಮಾರಂಗದ ವಿಚಾರವನ್ನು ನಾವು ವಿಶ್ಲೇಷಿಸಲೇಬೇಕು. ಸಿನಿಮಾ ವಲಯದಲ್ಲಿ ಯಾರು ಯಾರನ್ನೋ ಮದುವೆಯಾಗುವ ವಿಚಾರವನ್ನು ನಾವು ಕೇಳುತ್ತಿರುತ್ತೇವೆ. ಆದರೆ, ನಂಬಿದ ವಿಚಾರವೇ ಬೇರಾಗಿ, ಒಬ್ಬ ಇನ್ನೊಬ್ಬಳಾÂರನ್ನೋ, ಒಬ್ಬಳು ಇನ್ಯಾರೋ ಒಬ್ಬನನ್ನು ವರಿಸುತ್ತಾರೆ. ಇದಕ್ಕೆ ನೂರಾರು ಉದಾಹರಣೆಗಳನ್ನು ಕೊಡಬಹುದು. ತಿಳಿದದ್ದು ಬೇರೆ ಕತೆ ಇರುತ್ತದೆ. ನಿಜವಾದ ಕತೆ ಹೊಸ ತಿರುವಿಗೆ ಶೀಘ್ರವಾಗಿ ಬದಲಾಗಿ, ತಿಳಿದಿರುವ ಎರಡು ಜೀವಗಳು ಸತಿಪತಿಗಳಾಗಿ ಸಪ್ತಪದಿ ಎಣಿಸುತ್ತಾರೆ. 

ಜೇನುಗಣ್ಣಿನ ಹುಡುಗಿ ಐಶ್ವರ್ಯಾ ರೈ, ಅಭಿಷೇಕ್‌ ಬಚ್ಚನ್‌ನನ್ನು ಮದುವೆಯಾದದ್ದು
ಐಶ್ವರ್ಯಾ ಹಾಗೂ ಅಭಿಷೇಕ್‌ ಬಚ್ಚನ್‌ರ ಮದುವೆಯ ವಿಚಾರವನ್ನು ವಿವರವಾಗಿ ವಿಶ್ಲೇಷಿಸಲಾರೆ. ವೈಯಕ್ತಿಕ ವಿಚಾರಗಳು ಇಲ್ಲಿ ಕಗ್ಗಂಟಾಗಿದೆ. ಅದೇನೇ ಇರಲಿ, ಐಶ್ವರ್ಯಾ ರೈ, ಬಚ್ಚನ್‌ ಕುಟುಂಬದ ಸೊಸೆಯಾದಳು. ಕರ್ನಾಟಕದ ಐಶ್ವರ್ಯಾ ಯಾರು? ಅಲಹಾಬಾದ್‌ ಮೂಲದ ಅಭಿಷೇಕ್‌ ಬಚ್ಚನ್‌ ಯಾರು? ಎತ್ತಣಿಂದೆತ್ತ ಸಂಬಂಧವಯ್ನಾ ಎಂಬ ಅಲ್ಲಮನ ಮಾತು ಇಲ್ಲಿ ನೆನಪಾಗದಿರದು. ಯಾರು ಸೋನಿಯಾ? ಯಾರು ರಾಜೀವ್‌ ಗಾಂಧಿ? ಆದರೂ ಅವರು ಸತಿಪತಿಗಳಾದರು. ಸ್ವತಃ ಸೋದರಮಾವನ, ಸೋದರತ್ತೆಯ ಮಕ್ಕಳು ಮದುವೆಯಾಗುತ್ತಾರೆ. ಇದೂ ಚೋದ್ಯವೇ. ಅಂತೂ ಸಲ್ಮಾನ್‌ ಖಾನ್‌ ಇನ್ನೂ ಒಬ್ಬ ಮಾತ್ರ ಅಧಿಕೃತ, ಅನೇಕ ಹುಡುಗಿಯರು ಮದುವೆಯಾಗಲು ಕಾತರದಲ್ಲಿರುವ ಬೇಡಿಕೆಯ ನಟ. ಸು#ರದ್ರೂಪಿ. ವಯಸ್ಸು ಈಗಾಗಲೇ 51 ನಿಜ. ಆದರೂ ಅವನನ್ನು ಮದುವೆಯಾಗಲು ಕ್ಯೂ ನಿಂತಿರುವವರಿಗೆ ಬರವಿಲ್ಲ. ಹೆಚ್ಚೇಕೆ, ನಮ್ಮ ರಾಹುಲ್‌ ಗಾಂಧಿ ಕೂಡ ಬಹುಬೇಡಿಕೆಯಲ್ಲಿರುವ ಯುವಕನೇ. ಇವರಿಗೆ ಈಗ 42 ವಯಸ್ಸು. 54 ವಯಸ್ಸಾದಾಗ ಖ್ಯಾತಿ ಪಡೆದ ಸಲ್ಮಾನ್‌ ರಷಿª ತನಗಿಂತ 33 ವರ್ಷ ಕಿರಿಯಳಾದ ಪದ್ಮಾಲಕ್ಷಿ$¾ಯನ್ನು ಮದುವೆಯಾಗಿದ್ದರು. ವಯೋವೃದ್ಧ ಎನ್‌.ಟಿ. ರಾಮರಾವ್‌, ತಮ್ಮ ಮಗಳ ವಯಸ್ಸಿನ ಲಕ್ಷಿ$¾ ಸರಸ್ವತಿ ಎಂಬ ಹೆಣ್ಣುಮಗಳನ್ನು ಆರಾಧಿಸಿದರು. ಇನ್ನಿಷ್ಟು ಹೆಸರುಗಳು, ರಾಜ್ಯದ, ಅನ್ಯರಾಜ್ಯದ ಹೆಚ್ಚಿನ ಪ್ರಮಾಣದಲ್ಲಿ ಹಾಲೀ ಚಾಲ್ತಿಯಲ್ಲಿನ ರಾಜಕಾರಣಿಗಳು, ಕಟ್ಟಿಕೊಂಡವರನ್ನು ಬಿಟ್ಟು ಇನ್ನೆಲ್ಲಿಗೋ ದಾರಿ ಮಾಡಿಕೊಂಡ ವ್ಯಕ್ತಿಗಳು… ಇತ್ಯಾದಿ ಇತ್ಯಾದಿ ಹೇಳುತ್ತ ಹೋದರೆ ಈ ಯಾದಿ ಮುಗಿಯುವುದೇ ಇಲ್ಲ. ಮೀನಾಕುಮಾರಿ, ನರ್ಗಿಸ್‌, ರೇಖಾ, ದೀಪಿಕಾ ಪಡುಕೋಣೆ, ಕರೀನಾ, ಅಜರುದ್ದೀನ್‌, ಫ್ರಾನ್ಸ್‌ ಅಧ್ಯಕ್ಷ ಸರ್ಕೋಜಿ, ಸೈಫ್ ಅಲಿ ಖಾನ್‌, ಮಾಜಿ ಕ್ರಿಕೆಟಿಗ ಸೌರವ್‌ ಗಂಗೂಲಿ, ಇವರೆಲ್ಲ ನೀಗಿಕೊಂಡ, ಬಾಳಸಂಗಾತಿಗಳ ವಿಷಯದಲ್ಲಿನ ತಳಮಳ ಗಮನಾರ್ಹ.

ಬದಲಾಗಿರುವ ಕಾಲ ಧರ್ಮ
“ಸಾವಿರ ಸುಳ್ಳು ಹೇಳಿ ಒಂದು ಲಗ್ನ ಮಾಡು’ ಎಂಬ ನಾಣ್ಣುಡಿ ನಮ್ಮಲ್ಲಿ ಚಾಲ್ತಿಯಲ್ಲಿದೆ. ಇದಕ್ಕೆ ಕಾರಣ ವಾಸ್ತವವಾಗಿ ಜಾತಕ ಕುಂಡಲಿಯನ್ನು ಹೊಂದಾಣಿಕೆ ಮಾಡಿ, ನೂರಕ್ಕೆ ನೂರು ಹೆಣ್ಣು ಗಂಡುಗಳು ಸತಿಪತಿಗಳಾಗುವಂತೆ ಜಾತಕ ಜೋಡಿಸುವುದೆಂದರೆ ನೂರರಲ್ಲಿ ಕೇವಲ 40ರಿಂದ 45 ಶೇಕಡಾ ಮಂದಿಗೆ ಮಾತ್ರ ಮದುವೆ ಯೋಗ, ಸಂಸಾರವನ್ನು ಶಾಂತಿಯುತವಾಗಿ ನಡೆಸಿಕೊಂಡು ಹೋಗುವ ಯೋಗ ಇರುತ್ತಿತ್ತು. ಉಳಿದಂತೆ ನೂರಕ್ಕೆ 55ರಿಂದ 60ರಷ್ಟು ಮಂದಿಗೆ ಹಿರಿಯರು, ದಲ್ಲಾಳಿಗಳು, ಇನ್ಯಾರೋ ಸಂಬಂಧಿಸಿದವರು ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡಲ್ಪಡುತ್ತಿತ್ತು. ನಂತರ ಅವರ ಹಣೆಬರಹ, ನಾವಂತೂ ಮಾಡಿದ್ದೇವೆ ಎಂದು ಹಿರಿಯರು ಕೈತೊಳೆದುಕೊಳ್ಳುತ್ತಿದ್ದರು.

ಇಂದು ಕಾಲ ಬದಲಾಗಿದೆ. ಸತಿಪತಿಯರಾದ ಮೇಲೆ ಬಹಳಷ್ಟು ದಾಂಪತ್ಯಗಳು ವಿಚ್ಛೇದನದಲ್ಲಿ ಅಂತ್ಯ ಕಾಣುತ್ತಿವೆ. ಸಾಮಾನ್ಯವಾಗಿ ಜಾತಕ ಕುಂಡಲಿಯಲ್ಲಿ ಬಾಳಸಂಗಾತಿಯ ಮನೆಯ ಅಧಿಪತಿ ಅಂದರೆ ಜಾತಕದಲ್ಲಿನ ಏಳನೇ ಮನೆ ಅಧಿಪತಿಯು ಪ್ರತಿಯೊಬ್ಬರ ಜಾತಕದಲ್ಲಿಯೂ ಮಾರಕ ಶಕ್ತಿ ಪಡೆದಿರುತ್ತಾನೆ. ಈ ಮಾರಕ ಶಕ್ತಿಯು ವಿಕೃತ ಸ್ವರೂಪಕ್ಕೆ ಸಂಬಂಧಿಸಿದ ವಿಚಾರ ಹೆಚ್ಚು ಬಲ ಪಡೆದಾಗ ದಾಂಪತ್ಯ ಕುಸಿಯುವ ಮಟ್ಟಕ್ಕೆ ಹೋಗುತ್ತಿರುತ್ತದೆ. ಹಿಂದಿನ ಸಮಾಜ ಹೆಣ್ಣನ್ನು ಅಬಲೆ ಎಂದು ಕರೆಯಿತು. ಇಂದು ಅಬಲೆ ಎಂಬ ವಿಚಾರ ನಿಧಾನವಾಗಿ ತನ್ನ ಅರ್ಥದ ವ್ಯಾಪ್ತಿಯನ್ನು ಮೀರಿ, ಸ್ವತಂತ್ರವಾಗಿ ತನ್ನನ್ನು ತಾನೇ ರಕ್ಷಿಸಿಕೊಳ್ಳುವ ವಿಚಾರಕ್ಕೆ ಕಾಲಿರಿಸಿದೆ. ಜಾತಕ ಕುಂಡಲಿಯಲ್ಲಿನ ಪ್ರೀತಿ, ಪ್ರೇಮದ, ಸತ್ಪತಿಗಳ ಸಂಬಂಧದ ಮಗ್ಗುಲುಗಳು ಹೊಸತೊಂದು ಆಯಾಮ ಸೃಷ್ಟಿಗೆ ಮುಂದಾಗಿವೆ. ಬದಲಾಗುತ್ತಿರುವ ಸಂಸ್ಕೃತಿಯ ಚೌಕಟ್ಟು ಸಂಸ್ಕಾರದ, ಉತ್ತಮ ಕುಟುಂಬ ವ್ಯವಸ್ತೆಯ ಬೇರುಗಳನ್ನು ಕಿತ್ತೆಸೆದಿದೆ. ಈಗಲೂ ಜಾತಕ ಕುಂಡಲಿಗಳ  ಸಂಯೋಜನೆ ಬೇರೆ ಬೇರೆ ಅಂಶಗಳ ನೆಲೆಯಲ್ಲಿ ಸಂಭವಿಸುವಂತಾದರೆ ಮುರಿದು ಬೀಳುತ್ತಿರುವ ಸಂಸಾರದ, ಕುಟುಂಬ ವ್ಯವಸ್ಥೆಯನ್ನು ಸರಿಪಡಿಸಬಹುದು. ಸಾವಿರ ಸುಳ್ಳುಗಳನ್ನು ಹೇಳಿ ಮದುವೆ ಮಾಡಬೇಕಾಗಿಲ್ಲ. ಮನಸ್ಸುಗಳ ಹೊಂದಾಣಿಕೆ ಮಾಡಲು ಜನ್ಮಕುಂಡಲಿಗಳ ಜೋಡಣೆಯೇ ರಾಮಬಾಣ. ಆದರೆ ಸರಿಯಾಗಿ ಆಗಬೇಕು. 

 ಅನಂತ ಶಾಸ್ತ್ರಿ 

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುದೆಸೆ ಯಾವಾಗ ಆರಂಭವಾಗಲಿದೆ…

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುಬಲ ಯಾವಾಗ ಆರಂಭವಾಗಲಿದೆ…

jjhgfd

ಮಾರಕಾಧಿಪತಿ, ಭಾದಕಾಧಿಪತಿ: ಅಕಾಲಿಕ ಮರಣದ ಬಗ್ಗೆ “ಅಷ್ಠಮ ಸ್ಥಾನ” ಮುನ್ಸೂಚನೆ ಕೊಡುತ್ತದೆಯೇ?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.