ನೀರಾವರಿಗಾಗಿ ಸಂಘ ಬಲಪಡಿಸಿ


Team Udayavani, Jul 22, 2019, 9:47 AM IST

hubali-tdy-2

ಹುಬ್ಬಳ್ಳಿ: ರೈತರು, ಅಧಿಕಾರಿಗಳು, ಸಂಘ-ಸಂಸ್ಥೆಗಳವರು ಶ್ರಮದಾನ ಮೂಲಕ ಕಾಲುವೆಗಳಲ್ಲಿನ ಹೂಳು, ಕಸ-ಕಡ್ಡಿ ಸ್ವಚ್ಛಗೊಳಿಸಿದರು.

ಹುಬ್ಬಳ್ಳಿ: ಸಮರ್ಪಕ ನೀರಾವರಿಗಾಗಿ ನೀರು ಬಳಕೆದಾರರ ಸಹಕಾರ ಸಂಘಗಳನ್ನು ಬಲಪಡಿಸುವುದು ಅವಶ್ಯ ವಿದೆ ಎಂದು ವಾಲ್ಮಿ ನಿರ್ದೇಶಕ ಡಾ| ರಾಜೇಂದ್ರ ಪೋದ್ದಾರ ಅಭಿಪ್ರಾಯಪಟ್ಟರು.

ನರಗುಂದ ಚಳವಳಿಯ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕರ್ನಾಟಕ ಸರಕಾರದ ಜಲ ಸಂಪನ್ಮೂಲ ಇಲಾಖೆಯ ವಾಲ್ಮಿ ಸಂಸ್ಥೆ, ಮಲಪ್ರಭಾ ಬಲದಂಡೆ ಕಾಲುವೆಯ ನರಗುಂದ ವಿಭಾಗ ಮತ್ತು ಮಲಪ್ರಭಾ ಸಹಕಾರ ಸಂಘಗಳ ಮಹಾಮಂಡಳ ಹಾಗೂ ವೀರಪ್ಪ ಕಡ್ಲೇಕೊಪ್ಪ ಹುತಾತ್ಮ ಸ್ಮಾರಕ ಸಮಿತಿ ಆಶ್ರಯದಲ್ಲಿ ಚಿಕ್ಕನರಗುಂದಲ್ಲಿ ರವಿವಾರ ಹಮ್ಮಿಕೊಂಡಿದ್ದ ನೀರು ಬಳಕೆದಾರರ ಸಹಕಾರ ಸಂಘಗಳ ಪುನಶ್ಚೇತನ ಅಭಿಯಾನ ಹಾಗೂ ಕಾಲುವೆಗಳ ಸ್ವಚ್ಛಗೊಳಿಸುವ ಶ್ರಮದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನೀರು ಬಳಕೆದಾರ ಸಹಕಾರ ಸಂಘಗಳು ಹಾಗೂ ನೀರಾವರಿ ಇಲಾಖೆ ಕೈಜೋಡಿಸಿ ಕೆಲಸ ಮಾಡಿದರೆ ರಾಜ್ಯದಲ್ಲಿ ನೀರಾವರಿ ವ್ಯವಸ್ಥೆ ಒಂದು ವರದಾನವಾಗುವುದು ಎಂದರು.

ಮಲಪ್ರಭಾ ಯೋಜನೆ ಅಧೀಕ್ಷಕ ಅಭಿಯಂತರ ರಾಜೇಶ ಮಾತನಾಡಿ, ನೀರಾವರಿ ಜಾಲ ಸುಸ್ಥಿತಿಯಲ್ಲಿಡಲು ನೀರಾವರಿ ಅಧಿಕಾರಿಗಳೊಂದಿಗೆ ಸಂಘಗಳು ಜತೆಗೂಡಿ ಕೆಲಸ ಮಾಡಬೇಕು ಎಂದರು.

ಮಲಪ್ರಭಾ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಳದ ಅಧ್ಯಕ್ಷ ಬಿ.ವೈ. ಕಾಡಪ್ಪನವರ ಮಾತನಾಡಿ, ಜನ ಸಮುದಾಯಗಳಿಗೆ ಸಂಕಷ್ಟ ಬಂದಾಗ ಚಳವಳಿ ಮೂಲಕ ರೈತರ ಸಮಸ್ಯೆಗಳನ್ನು ಪರಿಹರಿಸಿದ ಇತಿಹಾಸ ನರಗುಂದ ರೈತ ಚಳವಳಿಗಿದೆ. ಪ್ರಸ್ತುತ ಜಲ ಸಂಕಷ್ಟದ ಸಂದರ್ಭದಲ್ಲಿ ರೈತ ಸಂಘಟನೆಗಳು ನೀರಾವರಿ ಇಲಾಖೆಯೊಂದಿಗೆ ಕೈಜೋಡಿಸಿ ಹೊಸ ಮಾದರಿಗಳನ್ನು ನಿರ್ಮಿಸಬಲ್ಲವು ಎಂದರು.

ಮುಂಬರುವ ದಿನಗಳಲಿ ಪ್ರತಿ 15 ದಿನಗಳಿಗೊಮ್ಮೆ ತಮ್ಮ ಗ್ರಾಮದ ಕಾಲುವೆಗಳನ್ನು ಸ್ವಚ್ಛಗೊಳಿಸುವುದಾಗಿ ಇದೇ ಸಂದರ್ಭದಲ್ಲಿ ರೈತರು ಸ್ವಯಂಪ್ರೇರಣೆಯಿಂದ ಪ್ರತಿಜ್ಞೆ ಮಾಡಿದರು.

ಮಲಪ್ರಭಾ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಳದ ಮಾಜಿ ಅಧ್ಯಕ್ಷ ಸದುಗೌಡ ಪಾಟೀಲ, ಖುದ್ದಣ್ಣನವರ, ಶೇಖಪ್ಪ ತಿರ್ಲಾಪುರ, ಜಿ.ಆರ್‌. ತಿಮ್ಮಾರೆಡ್ಡಿ, ಎಚ್.ಎನ್‌. ಹಳಕಟ್ಟಿ, ಶಂಕ್ರಣ್ಣ ಯರಗಟ್ಟಿ, ಬಿ.ಎಂ. ರಾಯರೆಡ್ಡಿ, ನರಗುಂದ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ ಎಸ್‌.ಎಲ್. ಪಾಟೀಲ, ಮೋನಿ ಪಾಟೀಲ ಹಾಗೂ ಮಲಪ್ರಭಾ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಳದ ಉಪಾಧ್ಯಕ್ಷರು, ನಿರ್ದೇಶಕರು, ಹಾಳಕುಸುಗಲ್, ಅಳಗವಾಡಿ, ಚಿಕ್ಕನರಗುಂದ ಮತ್ತು ಸುತ್ತಮುತ್ತಲಿನ ಗ್ರಾಮದ ನೀರು ಬಳಕೆದಾರರು ಪಾಲ್ಗೊಂಡಿದ್ದರು.

ಮಲಪ್ರಭಾ ಬಲದಂಡೆ ಕಾಲುವೆ ನರಗುಂದ ಉಪಕಾಲುವೆ 23ನೇ ಹಂಚುಕಾಲುವೆ 2ಆರ್‌ ಕಾಲುವೆ ಅಡಿಯಲ್ಲಿ ಬರುವ ಕಾಲುವೆಗಳನ್ನು ಸ್ವಚ್ಛಗೊಳಿಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ರೈತರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ನೀರಾವರಿ ಇಲಾಖೆ ಮತ್ತು ವಾಲ್ಮಿ ಸಂಸ್ಥೆ ಅಧಿಕಾರಿಗಳು ಕಾಲುವೆಯಲ್ಲಿ ತುಂಬಿದ್ದ ಹೂಳು, ಕಸಕಡ್ಡಿ, ಕಂಟಿಗಳನ್ನು ತೆರವುಗೊಳಿಸಿ ಕಾಲುವೆ ಸ್ವಚ್ಛಗೊಳಿಸಿದರು.

ವಾಲ್ಮಿಯ ಸಹಾಯಕ ಅಭಿಯಂತ ಮಹದೇವಗೌಡ ಹುತ್ತನಗೌಡರ ಪ್ರಾಸ್ತಾವಿಕ ಮಾತನಾಡಿದರು. ಸಹ ಪ್ರಾಧ್ಯಾಪಕ ಕೃಷ್ಣಾಜಿರಾವ್‌ ವಂದಿಸಿದರು.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.