ಆರ್‌ಎಂಎಸ್‌ಎ ಶಿಕ್ಷಕರಿಗಿಲ್ಲ ಯುಗಾದಿ ಸಂಭ್ರಮ!


Team Udayavani, Mar 17, 2018, 10:52 AM IST

rmsa.jpg

ಬಾಗಲಕೋಟೆ: ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಯ ಹಲವು ಶಿಕ್ಷಕರಿಗೆ ಈ ಬಾರಿಯ ಯುಗಾದಿ ಸಂಭ್ರಮ ಇಲ್ಲ!
ರಾಜ್ಯದ ಬಾಗಲಕೋಟೆ, ವಿಜಯಪುರ, ಬೀದರ, ಕಲಬುರಗಿ, ಧಾರವಾಡ, ಬೆಳಗಾವಿ ಸೇರಿದಂತೆ ರಾಜ್ಯದ 25 ಜಿಲ್ಲೆಗಳಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದಡಿ ಉನ್ನತೀಕರಿಸಿದ ಪ್ರೌಢ ಶಾಲೆಗಳ ಮುಖ್ಯಾಧ್ಯಾಪಕರು, ಶಿಕ್ಷಕರಿಗೆ ಕಳೆದ ಅಕ್ಟೋಬರ್‌ ನಿಂದ ವೇತನವೇ ಕೊಟ್ಟಿಲ್ಲ. ವೇತನಕ್ಕಾಗಿ ಶಿಕ್ಷಕರು, ಹಲವು ಪ್ರಯತ್ನ ಮಾಡಿದರೂ, ಯುಗಾದಿಗೆ ಸಂಬಳ ಬಂದಿಲ್ಲ.

ಪ್ರಾಥಮಿಕ ಶಿಕ್ಷಣಕ್ಕೆ ಇದ್ದ ಸರ್ವ ಶಿಕ್ಷಣ ಅಭಿಯಾನದಂತೆ ಪ್ರೌಢ ಶಿಕ್ಷಣಕ್ಕೂ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಎಂಬುದು ಕೇಂದ್ರ ಸರ್ಕಾರದ ಯೋಜನೆ. ಈ ಯೋಜನೆಯಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಗುರುತಿಸಿ, ಅದರಲ್ಲಿ ಅಗತ್ಯ ಇರುವೆಡೆ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಲಾಗಿತ್ತು. ಬಳಿಕ ಆರ್‌ಎಂಎಸ್‌ಎ ಯೋಜನೆಯಡಿಯೇ ಪ್ರತ್ಯೇಕ ಶಿಕ್ಷಕರ ನೇಮಕ ಮಾಡಿ ಮಕ್ಕಳಿಗೆ ಶಿಕ್ಷಣ ಕೊಡಲಾಗುತ್ತಿದೆ. ಉಳಿದ ಶಿಕ್ಷಕರಂತೆ ಈ ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ನೇರವಾಗಿ ಸಂಬಳ ಬರುವುದಿಲ್ಲ. ಆರ್‌ ಎಂಎಸ್‌ಎ ಶಿಕ್ಷಕರ ವೇತನಕ್ಕಾಗಿಯೇ (ಲೆಕ್ಕ ಶಿರ್ಷಿಕೆ :2201-00-102-0-69-001) ಎಂಬ ಶೀರ್ಷಿಕೆ ಇದೆ. ಇದರಡಿ ಈ ಶಿಕ್ಷಕರಿಗೆ ವೇತನ ಮಾಡಲಾಗುತ್ತದೆ. ಕಳೆದ ಅಕ್ಟೋಬರ್‌ನಲ್ಲಿ ಆರ್‌ ಎಂಎಸ್‌ಎ ಯೋಜನೆಯಡಿ ಕೆಲಸ ಮಾಡುವ ಶಿಕ್ಷಕರ ವರ್ಗಾವಣೆ, ಖಾಲಿ ಇದ್ದ ಹುದ್ದೆಗಳ ನೇಮಕಾತಿ ನಡೆದಿತ್ತು. ಹೀಗಾಗಿ ಹೊಸ ಹಣಕಾಸು ವರ್ಷದ ಬಳಿಕ ನಡೆದ ಈ ಪ್ರಕ್ರಿಯೆಯಿಂದ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟಿರಲಿಲ್ಲ. ಇದರಿಂದ ಅಕ್ಟೋಬರ್‌ನಿಂದ ಈವರೆಗೆ (ಆರು ತಿಂಗಳಿಂದ) ವೇತನ ನೀಡಲಾಗಿಲ್ಲ ಎಂಬುದು ಹಿರಿಯ ಅಧಿಕಾರಿಗಳ ವಿವರಣೆ.

25 ಜಿಲ್ಲೆಯಲ್ಲೂ ಇದೇ ಸಮಸ್ಯೆ: ಬಾಗಲಕೋಟೆ ಸೇರಿದಂತೆ ರಾಜ್ಯದ 25 ಜಿಲ್ಲೆಗಳಲ್ಲಿ ಈ ಸಮಸ್ಯೆ ಇದೆ. ಸರ್ಕಾರದ ಮಟ್ಟದಲ್ಲಿ ತೀವ್ರ ಒತ್ತಡದ ಬಳಿಕ ಮಾರ್ಚ್‌ವರೆಗೆ ಶಿಕ್ಷಕರ ವೇತನ ಪಾವತಿಗೆ ಪರ್ಯಾಯ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.  

ಆರ್‌ಎಂಎಸ್‌ಎ ಶಿಕ್ಷಕರ ವೇತನ ಆರು ತಿಂಗಳಿಂದ ಆಗಿಲ್ಲ. ನಾನು ನಿರಂತರವಾಗಿ ಒತ್ತಾಯ ಮಾಡುತ್ತಲೇ ಇದ್ದೇನೆ. ಈಚೆಗೆ ಶಿಕ್ಷಣ ಸಚಿವ ತನ್ವೀರ ಸೇಠ್ಠ… ಅವರನ್ನು ಭೇಟಿ ಮಾಡಿ ಮತ್ತೆ ಒತ್ತಾಯ ಮಾಡಿದ್ದೇನೆ. ಆ ಬಳಿಕ ಪರ್ಯಾಯ ವ್ಯವಸ್ಥೆಯಡಿ ವೇತನ ಪಾವತಿ ಮಾಡಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಸರ್ಕಾರದ ನಿರ್ಲಕ್ಷ್ಯದಿಂದ ಶಿಕ್ಷಕರು ವೇತನ ಇಲ್ಲದೇ ಸಮಸ್ಯೆ ಅನುಭವಿಸುವಂತಾಗಿದೆ. 
 ಅರುಣ ಶಹಾಪುರ, ವಿಧಾನ ಪರಿಷತ್‌ ಸದಸ್ಯ

ನಾನು ನವೆಂಬರ್‌ನಲ್ಲಿ ಜಿಲ್ಲೆಗೆ ಬಂದಿದ್ದು, ಆರ್‌ಎಂಎಸ್‌ಎ ಶಿಕ್ಷಕರ ವೇತನ ಆಗದೇ ಇರುವುದು ನನ್ನ ಗಮನಕ್ಕೆ ಬಂದಿತ್ತು. ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಸರ್ಕಾರದ ಗಮನಕ್ಕೆ ತರಲಾಗಿತ್ತು. ಇದಕ್ಕಾಗಿ ಪ್ರತ ವ್ಯವಹಾರವೂ ನಡೆಸಲಾಗಿದೆ. ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟರದ ಕಾರಣ ಸಮಸ್ಯೆಯಾಗಿತ್ತು. ಮುಂದಿನ ವರ್ಷದಿಂದ ಈ ರೀತಿ ಸಮಸ್ಯೆ ಆಗದಂತೆ ಈಗಲೇ ಎಚ್ಚರಿಕೆ ವಹಿಸಲಾಗಿದೆ. ಒಂದು ವಾರದಲ್ಲಿ ಪಾವತಿ ಮಾಡುತ್ತೇವೆ.
 ಎಂ.ಆರ್‌. ಕಾಮಾಕ್ಷಿ, ಉಪ ನಿರ್ದೇಶಕಿ, ಸಾರ್ವಜನಿಕ ಶಿಕ್ಷಣ ಇಲಾಖೆ

„ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.