ಬಾದಾಮಿಯಲ್ಲಿ ಸಿದ್ದುಗೆ ಮನೆ


Team Udayavani, May 18, 2018, 10:41 AM IST

gul-3.jpg

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಬಾದಾಮಿಯ ಶಾಸಕರು. ಕ್ಷೇತ್ರದ ಸಾರ್ವಜನಿಕರ ಸಂಪರ್ಕಕ್ಕಾಗಿ ಬಾದಾಮಿಯಲ್ಲೇ ಹೊಸದಾಗಿ ಮನೆಯೊಂದನ್ನು ಹುಡುಕಲು ತಮ್ಮ ಆಪ್ತರಿಗೆ ಸೂಚನೆ ಕೊಟ್ಟಿದ್ದಾರೆ. ಸದ್ಯ ರಾಜ್ಯ ರಾಜಕೀಯ ವಿದ್ಯಮಾನ ಪೂರ್ಣಗೊಂಡ ಬಳಿಕ ಬಾದಾಮಿಗೆ ಆಗಮಿಸಿ ಮತದಾರರಿಗೆ ಕೃತಜ್ಞತೆ ಸಭೆಯೊಂದನ್ನು ಮಾಡುವ ಜತೆಗೆ ಸಾಧ್ಯವಾದರೆ ಅದೇ ವೇಳೆ ಹೊಸ ಮನೆಯಲ್ಲಿ ಪೂಜೆ ಕೂಡ ನಡೆಸಲಿದ್ದಾರೆ.

ಗುರುವಾರವಷ್ಟೇ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಹಾಗೂ ಗುಳೇದಗುಡ್ಡ ಕಾಂಗ್ರೆಸ್‌ ಮುಖಂಡ ಹೊಳೆಬಸು ಶೆಟ್ಟರಗೆ ದೂರವಾಣಿ ಮೂಲಕ ಮಾತನಾಡಿ, ಬಾದಾಮಿಯಲ್ಲಿ ಮನೆ ನೋಡು. 

ರಾಜಕೀಯ ಬೆಳವಣಿಗೆ ಮುಗಿದ ತಕ್ಷಣ ಬಾದಾಮಿಗೆ ಬರುತ್ತೇನೆ. ಹೆಡ್‌ಕ್ವಾರ್ಟರ್‌ (ಬಾದಾಮಿ ಕೇಂದ್ರ ಸ್ಥಾನ)ದಲ್ಲಿ ಒಂದು ಸಭೆ ಏರ್ಪಡಿಸಿ. ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಭೆ ನಡೆಸೋಣ. ಜನರ ಸಂಪರ್ಕಕ್ಕೆ ಅನುಕೂಲವಾಗಲು ಸುಸಜ್ಜಿತ ಮನೆಯೊಂದನ್ನು ಬಾಡಿಗೆಗೆ ನೋಡು ಎಂದು
ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ತಿಂಗಳಲ್ಲಿ ನಾಲ್ಕೈದು ದಿನ: ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದು, ಬಾದಾಮಿಯಲ್ಲಿ ಅಲ್ಪ ಮತಗಳಿಂದ ಗೆದ್ದಿದ್ದಾರೆ. ಸದ್ಯ ಅವರು ಜಿಲ್ಲೆಯ ಬಾದಾಮಿ ಶಾಸಕರು. ಇನ್ಮುಂದೆ ಪ್ರತಿಯೊಂದು ದೊಡ್ಡ, ಸಣ್ಣ ಕಾರ್ಯಕ್ರಮಕ್ಕೂ ಶಿಷ್ಟಾಚಾರದ ಪ್ರಕಾರ ಅವರು ಹೆಸರು ನಿತ್ಯವೂ ಇರಲಿವೆ. ಬಾದಾಮಿ ಕ್ಷೇತ್ರ ಹಾಗೂ ಜಿಲ್ಲೆಯ ಮಹತ್ವದ ಸಭೆ, ಸಮಾರಂಭಗಳಿಗೆ ಅವರು ಆಗಮಿಸಲಿದ್ದಾರೆ ಎನ್ನಲಾಗಿದೆ.

ತಿಂಗಳಲ್ಲಿ ನಾಲ್ಕು ದಿನ ಬಾದಾಮಿಯಲ್ಲೇ ವಾಸ್ತವ್ಯ ಮಾಡಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಅದಕ್ಕಾಗಿಯೇ ಒಂದು ಮನೆ ನೋಡಲು ಹೇಳಿದ್ದಾರೆ. ಸರ್ಕಾರದ ವತಿಯಿಂದ ತಾಪಂ ಕಚೇರಿ ಕಟ್ಟಡದಲ್ಲಿ ಒಂದು ಕಟ್ಟಡ ನೀಡಲಿದ್ದು, ಅದರ ಹೊರತಾಗಿ ಮನೆ ಇದ್ದರೆ ಎಲ್ಲ ಮುಖಂಡರು, ಕಾರ್ಯಕರ್ತರು, ಜನರು ಭೇಟಿ ಮಾಡಲು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ಪ್ರಮಾಣ ಪತ್ರವೂ ಪಡೆದಿಲ್ಲ: ವಿಧಾನಸಭೆ ಚುನಾವಣೆ ಬಾದಾಮಿ ಕ್ಷೇತ್ರದಿಂದ ಆಯ್ಕೆಯಾದ ಬಳಿಕ ಚುನಾವಣಾಧಿಕಾರಿಯಿಂದ ಅಧಿಕೃತವಾಗಿ ನೀಡುವ ಪ್ರಮಾಣ ಪತ್ರ ಪಡೆದಿಲ್ಲ. ಗೆದ್ದ ಅಭ್ಯರ್ಥಿ ಇಲ್ಲವೇ ಅವರ ಮತ ಎಣಿಕೆ ಏಜೆಂಟರು ಪ್ರಮಾಣ ಪತ್ರ ಪಡೆಯಲು ಅವಕಾಶವಿದೆ. ಹೀಗಾಗಿ ಬಾದಾಮಿ ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಅವರ ಪುತ್ರ ಭೀಮಸೇನ ಚಿಮ್ಮನಕಟ್ಟಿ ಮತ್ತು ಹೊಳೆಬಸು ಶೆಟ್ಟರ ಈ ಪ್ರಮಾಣ ಪತ್ರ ಪಡೆದಿದ್ದಾರೆ.

ಬಾದಾಮಿಯಲ್ಲಿ ಮನೆ ಹಾಗೂ ಅದಕ್ಕೆ ಬೇಕಾಗುವ ಸಿಬ್ಬಂದಿ ನೋಡಲು ಸಿದ್ದರಾಮಯ್ಯ ಹೇಳಿದ್ದಾರೆ. ತಿಂಗಳಲ್ಲಿ 3ರಿಂದ 4 ದಿನ ಬಾದಾಮಿಯಲ್ಲೇ ವಾಸ್ತವ್ಯ ಮಾಡಲಿದ್ದಾರೆ. ಅವರಿಗೆ ಸೂಕ್ತವಾಗಲಿರುವ ಮನೆ ಹುಡುಕುತ್ತಿದ್ದೇವೆ.
ಅಡುಗೆಯವರು, ಕಂಪ್ಯೂಟರ್‌ ಆಪರೇಟರ್‌ ಮುಂತಾದ ಸಿಬ್ಬಂದಿಯನ್ನೂ ನೋಡುತ್ತಿದ್ದೇವೆ.  ಹೊಳೆಬಸು ಶೆಟ್ಟರ, ಕಾಂಗ್ರೆಸ್‌ ಮುಖಂಡ 

„ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.