ನಿಷೇಧಾಜ್ಞೆ ಕರಿನೆರಳಲ್ಲೇ ಮಲ್ಲಯ್ಯನ ಜಾತ್ರೆ


Team Udayavani, Aug 31, 2018, 4:08 PM IST

31-agust-18.jpg

ಬೀಳಗಿ: ದಶಕಗಳಿಗೂ ಹೆಚ್ಚು ಕಾಲ ತಾಲೂಕಿನ ತುಮ್ಮರಮಟ್ಟಿ ಮತ್ತು ತೋಳಮಟ್ಟಿ ಗ್ರಾಮಗಳ ಮಧ್ಯೆ ವಿವಾದದಲ್ಲಿ ಸಿಲುಕಿಕೊಂಡು ನಲುಗುತ್ತಿರುವ ತಾಲೂಕಿನ ಆರಾಧ್ಯ ದೈವ ವಾರಿ ಮಲ್ಲಯ್ಯನ ಜಾತ್ರೆ ಈ ಬಾರಿಯೂ ಪ್ರತಿ ವರ್ಷದಂತೆ ನಿಷೇಧಾಜ್ಞೆ ಕರಿನೆರಳಲ್ಲಿಯೇ ನಡೆಯುತ್ತಿದ್ದು, ಭಕ್ತ ಸಮೂಹ ಭಯದ ವಾತಾವರಣದಲ್ಲಿಯೇ ಜಾತ್ರೋತ್ಸವದಲ್ಲಿ ಪಾಲ್ಗೊಳ್ಳುವುದು ಅನಿವಾರ್ಯ.

ಭೀತಿಯಲ್ಲಿಯೇ ದರ್ಶನ: ಸುಂದರ ಪ್ರಕೃತಿ ಮಡಿಲಲ್ಲಿರುವ ವಾರಿ ಮಲ್ಲಯ್ಯನ ಜಾತ್ರೆ ಸೆ. 3ರಂದು ನೆರವೇರಲಿದೆ. ದೇವಸ್ಥಾನದ ಹಕ್ಕು ಪ್ರತಿಪಾದಿಸುವ ವಿಷಯದಲ್ಲಿ ತಾಲೂಕಿನ ತೋಳಮಟ್ಟಿ ಮತ್ತು ತುಮ್ಮರಮಟ್ಟಿ ಗ್ರಾಮಗಳ ಮಧ್ಯೆ ವಿವಾದ ಉದ್ಭವಿಸಿ ದಶಕಗಳ ಕಾಲವೇ ದಾಟಿದೆ. ಆದರೆ ದೇವಸ್ಥಾನ ಯಾವ ಗ್ರಾಮಕ್ಕೆ ಸೇರಿದ್ದು ಎನ್ನುವ ವಿವಾದ ಇದುವರೆಗೂ ಇತ್ಯರ್ಥವಾಗದೆ ಇರುವ ಕಾರಣ, ಪ್ರತಿ ವರ್ಷವೂ ವಾರಿ ಮಲ್ಲಯ್ಯನ ಜಾತ್ರೆ ನಿಷೇಧಾಜ್ಞೆಯ ಭೀತಿಯಲ್ಲಿಯೇ ನಡೆಯುವಂತಾಗಿದೆ. ಜಾತ್ರೆಯ ಸಂದರ್ಭ ಹಲವು ಬಾರಿ ಎರಡೂ ಗ್ರಾಮಸ್ಥರ ಮಧ್ಯೆ ಗಲಾಟೆ ಏರ್ಪಟ್ಟಿರುವ ಪ್ರಸಂಗವೂ ನಡೆದಿದೆ. ಜಾತ್ರೆಗೆ ಆಗಮಿಸುವ ಅಸಂಖ್ಯಾತ ಭಕ್ತರು ಯಾವಾಗ ಏನು ಗಲಭೆಯಾಗುತ್ತದೆಯೋ ಎನ್ನುವ ಭೀತಿಯಲ್ಲಿಯೇ ಮಲ್ಲಯ್ಯನ ಮುಖ ದರುಶನ ಮಾಡುವಂತಾಗಿದೆ.

ತಣ್ಣಗಾಗದ ವಿವಾದ: ತಾಲೂಕಿನ ತೋಳಮಟ್ಟಿ ಹಾಗೂ ತುಮ್ಮರಮಟ್ಟಿ ಈ ಎರಡು ಗ್ರಾಮಗಳ ಸರಹದ್ದಿನಲ್ಲಿ ವಾರಿ ಮಲ್ಲಯ್ಯನ ದೇವಸ್ಥಾನವಿದೆ. ಆ ಕಾರಣಕ್ಕಾಗಿ ದಶಕಗಳಿಗೂ ಹೆಚ್ಚು ಕಾಲ ದೇವಸ್ಥಾನದ ಸೀಮೆಯ ವಿಚಾರವಾಗಿ ಉಭಯ ಗ್ರಾಮಸ್ಥರಲ್ಲಿ ಬಲವಾದ ವಿವಾದ ಹುಟ್ಟಿಕೊಂಡಿದೆ.

ದೇವಸ್ಥಾನದ ಹಕ್ಕು ಪ್ರತಿಪಾದನೆಗಾಗಿ ಉಭಯ ಗ್ರಾಮಗಳ ನಡುವೆ ಹುಟ್ಟಿಕೊಂಡ ವಿವಾದ ಇದುವರೆಗೂ ತಣ್ಣಗಾಗಿಲ್ಲ. ಕಾರಣ, ಭಕ್ತ ಸಮೂಹದ ಆತಂಕಕ್ಕೆ ಕಾರಣವಾಗಿದೆ. ಪ್ರತಿ ವರ್ಷ ನಡೆಯುವ ಜಾತ್ರೆಗೂ ಮುನ್ನ ಸುವ್ಯವಸ್ಥೆ ಉದ್ದೇಶದಿಂದ ತಾಲೂಕು ಆಡಳಿತ ಅಧಿಕಾರಿಗಳು ಉಭಯ ಗ್ರಾಮಸ್ಥರ ಶಾಂತಿ ಸಭೆ ಕರೆದು ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸುತ್ತಲೇ ಬಂದಿದ್ದಾರೆ. ಆದರೆ ಪ್ರತಿಫಲ ಮಾತ್ರ ಶೂನ್ಯ. ಇದರಿಂದ ಪ್ರತಿ ವರ್ಷ ಜಾತ್ರೆ ನಿಷೇಧಾಜ್ಞೆ ನೆರಳಿನಲ್ಲಿಯೇ ನಡೆಯುವಂತಾಗಿದೆ.

ಜಾತ್ಯತೀತ, ಧರ್ಮಾತೀತ ಹಾಗೂ ಸೀಮಾತೀತವಾಗಿ ತನ್ನ ಆಲಯಕ್ಕೆ ಬರುವ ಎಲ್ಲ ಭಕ್ತರಿಗೆ ದರ್ಶನ ಭಾಗ್ಯ ನೀಡುತ್ತ ಕುಳಿತಿರುವ ಶಾಂತಮೂರ್ತಿ ಮಲ್ಲಯ್ಯನ ಭಕ್ತರಿಗೆ ಮಾತ್ರ ನಿಷೇಧಾಜ್ಞೆಯಿಂದ ಕಿರಿ ಕಿರಿ ಉಂಟಾಗಿದೆ. ವಾರಿ ಮಲ್ಲಯ್ಯ ಯಾವ ಊರಿನವನಾದರೂ ಆಗಲಿ. ಸಡಗರ ಸಂಭ್ರಮದಿಂದ ಜಾತ್ರೆಯಲ್ಲಿ ಪಾಲ್ಗೊಳ್ಳುವಂತ ಮುಕ್ತ ವಾತಾವರಣ ನಿರ್ಮಾಣವಾಗಲಿ ಎನ್ನುವುದು ನೂರಾರು ಭಕ್ತರ ಬಲವಾದ ಆಶಯವಾಗಿದೆ.

ನಿಷೇಧಾಜ್ಞೆ ಜಾರಿ
ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೆ. 3ರಂದು ಸಿಆರ್‌ಪಿಸಿ ಕಲಂ 144 ರ ಪ್ರಕಾರ ದೇವಸ್ಥಾನದ ಪರೀದಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಭಕ್ತರು ಸಹಕರಿಸಬೇಕು.
. ಉದಯ ಕುಂಬಾರ,
ತಹಶೀಲ್ದಾರ್‌ ಬೀಳಗಿ

ರವೀಂದ್ರ ಕಣವಿ

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.