ಶಿಕ್ಷಕಿ ಮುಂದುವರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ 


Team Udayavani, Sep 2, 2018, 5:10 PM IST

2-september-26.jpg

ಅಮೀನಗಡ: ಸೂಳೇಭಾವಿ ಸರ್ಕಾರಿ ಪ್ರೌಢ ಶಾಲೆಯ ಹಿಂದಿ ಶಿಕ್ಷಕಿ ಡಾ| ಎಸ್‌.ಸಿ.ರಂಜಣಗಿ ಅವರನ್ನು ಹೆಚ್ಚುವರಿ ಶಿಕ್ಷಕಿ ಎಂದು ಗುರುತಿಸಿ ವರ್ಗಾವಣೆ ಮಾಡುವ ಕ್ರಮ ಖಂಡಿಸಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಶನಿವಾರ ಪ್ರತಿಭಟನೆ ನಡೆಸಿದರು. 

ಸೂಳೇಭಾವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕಳೆದ 13 ವರ್ಷಗಳಿಂದ ಶಿಕ್ಷಕಿಯಾಗಿರುವ ಡಾ| ರಂಜಣಗಿ ಅವರನ್ನು ನಿಯಮಾನುಸಾರ ಹೆಚ್ಚುವರಿ ಶಿಕ್ಷಕಿ ಎಂದು ಗುರುತಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ನಮಗೆ ನಮ್ಮ ನೆಚ್ಚಿನ ಶಿಕ್ಷಕಿ ಎಸ್‌.ಸಿ.ರಂಜಣಗಿ ಅವರು ಬೇಕು ಎಂದು ಕಣ್ಣೀರಿಟ್ಟರು. ಅಧಿಕಾರಿಗಳು ಅವರನ್ನು ವರ್ಗಾವಣೆ ಮಾಡಬಾರದು. ಇದರಿಂದ ನಮ್ಮ ಕಲಿಕೆಗೆ ತೊಂದರೆಯಾಗುತ್ತದೆ. ಶಾಲೆಯಲ್ಲಿಯೇ ಮುಂದುವರಿಸುವಂತೆ ವಿದ್ಯಾರ್ಥಿಗಳು ಶಾಲೆಯ ಹೊರಭಾಗದಲ್ಲಿ ಕಣ್ಣೀರು ಹಾಕುತ್ತಾ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿಗಳು ಮಾತನಾಡಿ, ಡಾ| ರಂಜಣಗಿ ಅವರು ಶಿಕ್ಷಣದ ಜತೆಯಲ್ಲಿ ಸಂಸ್ಕಾರ ಕೂಡಾ ಕಲಿಸಿದ್ದಾರೆ. ಮತ್ತು ಎಲ್ಲ ವಿಷಯಗಳ ಕುರಿತು ಮಾಹಿತಿ ಕೂಡಾ ನೀಡುತ್ತಾರೆ. ಯಾವುದೇ ಕಾರಣಕ್ಕೂ ಹೆಚ್ಚುವರಿಯಾಗಿ ವರ್ಗಾವಣೆ ಮಾಡಬಾರದು ಎಂದು ಆಗ್ರಹಿಸಿದರು. ಇದೇ ವೇಳೆ ಕೆಲವು ವಿದ್ಯಾರ್ಥಿನಿಯರು ಶಿಕ್ಷಕಿ ಡಾ| ಎಸ್‌.ಸಿ.ರಂಜಣಗಿ ಅವರನ್ನು ತಬ್ಬಿ ಹಿಡಿದುಕೊಂಡು ಗೋಳಿಡುತ್ತಿದ್ದರು. ವಿದ್ಯಾರ್ಥಿಗಳ ದುಃಖಕ್ಕೆ ಶಿಕ್ಷಕಿಯೂ ದು:ಖೀಸುತ್ತಿರುವುದು, ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಮಧ್ಯೆ ಇರುವ ಭಾವನಾತ್ಮಕ ಸಂಬಂಧಕ್ಕೆ ಸಾಕ್ಷಿಯಾಗಿತ್ತು. 

ಸ್ಥಳಕ್ಕೆ ಆಗಮಿಸಿದ ಯುವ ಮುಖಂಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಿಬಿಸಿ ಉಪಾಧ್ಯಕ್ಷ ನಾಗೇಶ ಗಂಜಿಹಾಳ ಮಾತನಾಡಿ, ಡಾ| ಎಸ್‌.ಸಿ.ರಂಜಣಗಿ ಶಿಕ್ಷಕಿ ಅವರ ಹೆಚ್ಚುವರಿಯಾಗಿದ್ದು, ನಮಗೂ ಕೂಡಾ ನೋವು ಆಗಿದೆ. ಅವರನ್ನು ಹೆಚ್ಚುವರಿ ಶಿಕ್ಷಕಿಯಂದು ಬೇರೆಡೆ ವರ್ಗಾವಣೆ ಮಾಡುತ್ತಿದ್ದಾರೆ. ದಕ್ಷತೆಯಿಂದ ಸೇವೆ ಸಲ್ಲಿಸುತ್ತಿರುವ ಅವರು ಉತ್ತಮ ಪಾಠ ಮತ್ತು ವಿದ್ಯಾರ್ಥಿಗಳನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾ ಎಲ್ಲರ ಹೃದಯ ಗೆದ್ದಿದ್ದಾರೆ. ನಮ್ಮ ಶಾಲೆಯಲ್ಲಿ 466 ವಿದ್ಯಾರ್ಥಿಗಳಿದ್ದಾರೆ ಎಂಟು ವಿಭಾಗಗಳಿಗೆ 2017-18 ಸಾಲಿನ ಮಕ್ಕಳ ಅಂಕಿ ಅಂಶಗಳನ್ನು ನೋಡಿ ಇಲಾಖೆ ಹೆಚ್ಚುವರಿ ಮಾಡಿದೆ. ಆದರೆ 2018-19 ಸಾಲಿನಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿದೆ. ಇದರಿಂದ ಹೆಚ್ಚುವರಿ ಮಾಡಲು ಆಗುವುದಿಲ್ಲ. ಮಾಡಿದರೆ ಅದರಿಂದ ಮಕ್ಕಳಿಗೆ ತೊಂದರೆಯಾಗಲಿದೆ. ಇದೇ ಶಾಲೆಯಲ್ಲಿ ಉಳಿಸಲು ಶಾಸಕರ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಇಲ್ಲಿಯೇ ಉಳಿಸಲು ಪ್ರಯತ್ನ ಮಾಡುವುದಾಗಿ ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.

ಸ್ಥಳದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಮಹಾಂತಪ್ಪ ಭದ್ರಣ್ಣವರ, ಪ್ರೌಢಶಾಲೆಯ ಎಸ್‌ಡಿಎಂಸಿ ಉಪಾಧ್ಯಕ್ಷ ರಮೇಶ ದುತ್ತರಗಿ, ವಿದ್ಯಾರ್ಥಿಗಳಾದ ರಮೇಶ ಆಲೂರ, ಕಾವ್ಯ ಕಮತಗಿ,ಅಕ್ಷತಾ ಭದ್ರಿ,ವರ್ಷಾ ಪಾಟೀಲ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.