ತೇರದಾಳ ಆರೋಗ್ಯ ಕೇಂದ್ರಕ್ಕೆ ಬೇಕಿದೆ ಚಿಕಿತ್ಸೆ 


Team Udayavani, Sep 3, 2018, 3:19 PM IST

3-september-19.jpg

ತೇರದಾಳ: ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಮೂಲಸೌಕರ್ಯಗಳ ಕೊರತೆಯನ್ನು ಎದುರಿಸುತ್ತಿದೆ. ನಾಲ್ಕು ಎಕರೆ ವಿಶಾಲ ಆವರಣದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಅಧುನಿಕ ಆಸ್ಪತ್ರೆ ಕಟ್ಟಡ ನಿರ್ಮಿಸಲಾಗಿದೆ. ಆದರೆ ಹೊಸ ಕಟ್ಟಡದ ಎದುರು ಹಳೆಯ ಕಟ್ಟಡಗಳು, ಗಿಡಗಂಟಿಗಳು, ಕಲ್ಲು-ಮಣ್ಣು ತುಂಬಿಕೊಂಡಿರುವುದರಿಂದ ಆಸ್ಪತ್ರೆ ಯಾರಿಗೂ ಕಾಣಿಸುತ್ತಿಲ್ಲ. ಹೊಸ ಕಟ್ಟಡಕ್ಕೆ ಸಾರ್ವಜನಿಕರು ಸಂಚರಿಸಲು ದಾರಿ ಸರಿಯಾಗಿಲ್ಲ. ಹಳೆಯ ಕಟ್ಟಡದ ಹಾಳು ಬಿದ್ದಿರುವ ಭಾಗಗಳನ್ನು ತೆರವುಗೊಳಿಸಬೇಕಾಗಿದೆ.

ಪಟ್ಟಣದ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ತೇರದಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಸಾರ್ವಜನಿಕರಲ್ಲಿ ಸಂತಸ ತಂದಿತ್ತು. ಸಾಲದ್ದಕ್ಕೆ 24/7ಹೆರಿಗೆ ಆಸ್ಪತ್ರೆ ಎಂದು ನಾಮಫಲಕವಿದೆ. ಆದರೆ ಕಟ್ಟಡ ಮಾತ್ರವಿದೆ. ವೈದ್ಯರ, ಸಿಬ್ಬಂದಿ ಕೊರತೆ ಸೇರಿದಂತೆ ಆಸ್ಪತ್ರೆಯಲ್ಲಿ ಹಲವಾರು ಸಮಸ್ಯೆಗಳಿವೆ.

ವೈದ್ಯರು-ಸಿಬ್ಬಂದಿ ಕೊರತೆ: ಸರಕಾರಿ ಆಸ್ಪತ್ರೆಯಲ್ಲಿ ಎಂಬಿಬಿಎಸ್‌ ಹೊಂದಿದ ವೈದ್ಯಾಧಿಕಾರಿ ಹಾಗೂ ಒಬ್ಬರು ಆಯುಷ್‌ ವೈದ್ಯರು ಇರಬೇಕು. ಆದರೆ ಈಗ ಕೇವಲ ಒಬ್ಬ ಆಯುರ್ವೇದ ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ಎಂಬಿಬಿಎಸ್‌ ವೈದ್ಯರೆ ಇಲ್ಲ. ಪೂರ್ಣಪ್ರಮಾಣದ ವೈದ್ಯಾ ಧಿಕಾರಿಗಳೆ ಇಲ್ಲ. ಆರೋಗ್ಯ ಹಿರಿಯ ಸಹಾಯಕ 1, ಕಿರಿಯ 3, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ, ಫಾರ್ಮಾಸಿಸ್ಟ್‌, ಎಎನ್‌ಎಂ 5 ಸಿಬ್ಬಂದಿ ಕೊರತೆಯಿದೆ. ಕೆಲವರು ಗುತ್ತಿಗೆ ಆಧಾರದಿಂದ ಕಾರ್ಯನಿರ್ವಹಿಸುತ್ತಾರೆ. ವೈದ್ಯ ಹಾಗೂ ಸಿಬ್ಬಂದಿ ಕೊರತೆಯಿಂದ ಆಸ್ಪತ್ರೆಗೆ ಬರುವ ಪಟ್ಟಣ ಸೇರಿದಂತೆ ಗ್ರಾಮಗಳ ರೋಗಿಗಳಿಗೆ ತೀವ್ರ ತೊಂದರೆ ಆಗುತ್ತಿದೆ.

ಶವಪರೀಕ್ಷಾ ಕೊಠಡಿ ಇಲ್ಲ: ಸರಕಾರಿ ಆಸ್ಪತ್ರೆಗಳಿಗೆ ಅವಶ್ಯಕವಾಗಿ ಇರಬೇಕಾದ ಶವ ಪರೀಕ್ಷೆಯ ಕೊಠಡಿಯಿಲ್ಲದೆ ಹೊಸ ಕಟ್ಟಡ ನಿರ್ಮಿಸಿದ್ದಾರೆ. ಪಟ್ಟಣದಲ್ಲಿ ಶವ ಪರೀಕ್ಷಾ  ಕೊಠಡಿ ಇಲ್ಲ. ಸದ್ಯಕ್ಕೆ ಶವ ಪರೀಕ್ಷೆಗೆ ಬಂದರೆ ಬನಹಟ್ಟಿ ಸಮುದಾಯ ಆಸ್ಪತ್ರೆಗೆ ಕಳುಹಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆ ಮೇಲ್ದರ್ಜೆಗೇರಿಸಲಿ: ಪ್ರಾಥಮಿಕ ಆರೋಗ್ಯ ಕೇಂದ್ರ ಪಟ್ಟಣ ಸೇರಿದಂತೆ ಸುತ್ತಲಿನ ಏಳು ಹಳ್ಳಿಗಳ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ದಿನಕ್ಕೆ 120ರಿಂದ 200ರ ವರೆಗೆ ಹೊರರೋಗಿಗಳ ತಪಾಸಣೆ ನಡೆಯುತ್ತದೆ. ಸೋಮವಾರ, ಬುಧವಾರ ಮತ್ತು ಸಂತೆಯ ದಿನವಾದ ಗುರುವಾರ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುತ್ತಾರೆ. ಮತ್ತು ತಿಂಗಳಿಗೆ 20ರಿಂದ 25ರಷ್ಟು ಹೆರಿಗೆಗಳು ಆಗುತ್ತವೆ. ಆದರೆ ಪ್ರಾಥಮಿಕ ಆರೋಗ್ಯ ಕೇಂದ್ರವಾದ್ದರಿಂದ 1.20 ಲಕ್ಷ ರೂ.ಗಳ ಅನುದಾನದಲ್ಲಿನ ಔಷಧಗಳು ಮಾತ್ರ ಬರುತ್ತವೆ. ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ಜನಸಂಖ್ಯೆ ಸೇರಿದಂತೆ ಎಲ್ಲ ಅರ್ಹತೆ ಹೊಂದಿದೆ. ಮತಕ್ಷೇತ್ರ ಹಾಗೂ ಹೋಬಳಿ ಕೇಂದ್ರವಾದ್ದರಿಂದ ಆಸ್ಪತ್ರೆ ಮೇಲ್ದರ್ಜೆಗೇರಿ ಸಮೂದಾಯ ಆರೋಗ್ಯ ಕೇಂದ್ರವಾಗಿ ಮಾರ್ಪಾಡಾಗಬೇಕಿದೆ.

ವಸತಿ ಗೃಹಗಳಿಲ್ಲ: ವೈದ್ಯಾಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ವಾಸಿಸಲು ಯೋಗ್ಯ ವಸತಿ ಗೃಹಗಳಿಲ್ಲ. ಎಲ್ಲ ಕಟ್ಟಡಗಳು ಮಳೆಗೆ ಸೋರುತ್ತವೆ. ಕೆಲ ಸಿಬ್ಬಂದಿ ಮಾತ್ರ ಹಾಳು ಬಿದ್ದಿರುವ ಮನೆಗಳಲ್ಲಿಯೇ ಜೀವನ ಸಾಗಿಸುತ್ತಿದ್ದಾರೆ. ವೈದ್ಯಾಧಿಕಾರಿಗಳು ಕೇಂದ್ರದಲ್ಲಿ ವಸತಿ ಮಾಡದೆ, ಬೇರೆ ಊರುಗಳಿಗೆ ಹೋಗುತ್ತಾರೆ. ನೀರಿನ ಅವ್ಯವಸ್ಥೆ: ಆಸ್ಪತ್ರೆಯಲ್ಲಿ ಶಾಶ್ವತ ನೀರಿನ ವ್ಯವಸ್ಥೆ ಇಲ್ಲ. ಆಸ್ಪತ್ರೆಯಲ್ಲಿ ಕೊಳವೆ ಬಾವಿ ಕೊರೆಸಿದ್ದಾರೆ. ನೀರು ಮಾತ್ರ ದೊರೆತಿಲ್ಲ. ಬೇಸಿಗೆಯಲ್ಲಿ ತೊಂದರೆಯಾಗದಂತೆ ಶಾಶ್ವತ ನೀರಿನ ವ್ಯವಸ್ಥೆ ಕಲ್ಪಿಸುವುದು ಅಗತ್ಯವಾಗಿದೆ.

ಅನೈತಿಕ ಚಟುವಟಿಕೆಗಳು:ಆಸ್ಪತ್ರೆಯ ಆವರಣದಲ್ಲಿ ಗಿಡಗಂಟಿಗಳು ಬೆಳೆದಿದ್ದರಿಂದ ಹಾಗೂ ಹಾಳಾದ ಕಟ್ಟಡಗಳು ಇರುವುದರಿಂದ ಜೂಜಾಟ, ಪಾನಪ್ರಿಯರು ಸೇರಿದಂತೆ ವಿವಿಧ ರೀತಿಯ ಅನೈತಿಕ ಚಟುವಟಿಕೆ ನಡೆಯುತ್ತವೆ ಎಂದು ಸಾರ್ವಜನಿಕ ಆರೋಪವಾಗಿದೆ.

ತೇರದಾಳ ಆರೋಗ್ಯ ಕೇಂದ್ರವನ್ನು ಶೀಘ್ರ ಮೇಲ್ದರ್ಜೆಗೇರಿಸಿ ಸರಕಾರ ಆದೇಶ ಹೊರಡಿಸಲಿದೆ. ರೋಗಿಗಳ ಸಂಖ್ಯೆಗನುಗುಣವಾಗಿ ಇಲಾಖೆಯು ಔಷಧ ಪೂರೈಸುತ್ತದೆ. ಮೇಲಧಿಕಾರಿಗಳ ಆದೇಶ ಬಂದ ಬಳಿಕ ಹಳೆಯ ಕಟ್ಟಡ ತೆರವುಗೊಳಿಸಲಾಗುವುದು.
ಡಾ| ಜಿ.ಎಸ್‌. ಗಲಗಲಿ,
ತಾಲೂಕಾ ಆರೋಗ್ಯಾಧಿಕಾರಿ ಜಮಖಂಡಿ.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಬರಿದಾಗುತ್ತಿದೆ ಕೃಷ್ಣೆ; ಭೀಕರ ಬರದ ಆತಂಕ

ಬಾಗಲಕೋಟೆ: ಬರಿದಾಗುತ್ತಿದೆ ಕೃಷ್ಣೆ; ಭೀಕರ ಬರದ ಆತಂಕ

Rabkavi Banhatti; ಬರಿದಾಗುತ್ತಿರುವ ಕೃಷ್ಣೆ; ಭೀಕರ ಬರದ ಆತಂಕ..!

Rabkavi Banhatti; ಬರಿದಾಗುತ್ತಿರುವ ಕೃಷ್ಣೆ; ಭೀಕರ ಬರದ ಆತಂಕ..!

ಮುಧೋಳ: ಯುಪಿಐ ಪೇಮೆಂಟ್‌ನಲ್ಲಿ ಮುಧೋಳ ಮಹತ್ತರ ಸಾಧನೆ

ಮುಧೋಳ: ಯುಪಿಐ ಪೇಮೆಂಟ್‌ನಲ್ಲಿ ಮುಧೋಳ ಮಹತ್ತರ ಸಾಧನೆ

Rabkavi Banhatti; ನೀರಿನ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳಿ: ಶಾಸಕ ಸಿದ್ದು ಸವದಿ

Rabkavi Banhatti; ನೀರಿನ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳಿ: ಶಾಸಕ ಸಿದ್ದು ಸವದಿ

ಮುಧೋಳ-ದೇಶಸೇವೆಗಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ: ಹಲಗಲಿ

ಮುಧೋಳ-ದೇಶಸೇವೆಗಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ: ಹಲಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.