ಸ್ಪಷ್ಟ ಗುರಿಯಿಂದ ಸಾಧನೆ: ಹೆಬಸೂರ


Team Udayavani, Sep 10, 2018, 4:21 PM IST

secptember-18.jpg

ಮುಧೋಳ: ಸ್ಪಷ್ಟ ಗುರಿ ಇದ್ದರೆ ಎಂತಹ ಕಷ್ಟದ ಕೆಲಸವನ್ನಾದರೂ ಸುಲಭವಾಗಿ ಸಾಧಿಸಬಹುದು ಎಂದು ರತ್ನಾ ಸಿಮೆಂಟ್ಸ್‌ನ ಜನರಲ್‌ ಮ್ಯಾನೇಜರ್‌ ಸುಜಯ ಹೆಬಸೂರ ತಿಳಿಸಿದರು.

ರತ್ನಾ ಸಿಮೆಂಟ್‌ ಕಾರ್ಖಾನೆಯಲ್ಲಿ ಮಾಜಿ ಸಚಿವ ಮುರುಗೇಶ ನಿರಾಣಿಯವರ 53ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮುರುಗೇಶ ನಿರಾಣಿಯವರು 15 ವರ್ಷಗಳ ಹಿಂದೆ ಇಟ್ಟುಕೊಂಡಿದ್ದ ಸ್ಪಷ್ಟ ಗುರಿ ಹಾಗೂ ಕನಸು ಇಂದು ಸಫಲವಾಗುತ್ತಿದೆ. ಕೇವಲ ಕಾಂಡಸರಿ ಸಕ್ಕರೆ ಕಾರ್ಖಾನೆ ಆರಂಭಿಸುವುದರ ಮೂಲಕ ಉದ್ಯಮ ಕ್ಷೇತ್ರಕ್ಕೆ ಬಂದ ಅವರು ಇಂದು 20 ಸಾವಿರ ಟಿಸಿಡಿ ಕಬ್ಬು ನುರಿಸುವ ಸಾಮರ್ಥ್ಯದ ಕಾರ್ಖಾನೆ ಕಟ್ಟಿ ಬೆಳೆಸಿದ್ದಾರೆ. ಏಷ್ಯಾ ಖಂಡದಲ್ಲಿಯೇ ನಿರಾಣಿ ಸಕ್ಕರೆ ಉದ್ಯಮ ಮಿಂಚುವಂತೆ ಮಾಡುವುದರೊಂದಿಗೆ ಸಕ್ಕರೆ ಉದ್ಯಮದಲ್ಲಿ ತಮ್ಮದೇಯಾದ ಛಾಪು ಮೂಡಿಸಿದ್ದಾರೆ. ಕೇವಲ ಉದ್ಯಮ ಕ್ಷೇತ್ರವಲ್ಲದೆ ಜನರಿಗೆ ಉತ್ತಮ ಶಿಕ್ಷಣ ಸಿಗಲಿ ಎಂಬ ದೃಷ್ಟಿಯಿಂದ ಶಿಕ್ಷಣ ಸಂಸ್ಥೆ ಪ್ರಾರಂಭಿಸಿದ್ದಾರೆ. ಆರೋಗ್ಯ ಕ್ಷೇತ್ರ ಹೀಗೆ ಹತ್ತು ಹಲವು ಜನಪರ ಕೆಲಸ ಮಾಡುತ್ತಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾರ್ಕೆಟಿಂಗ್‌ ವಿಭಾಗದ ಮ್ಯಾನೇಜರ್‌ ಮೋಹನ ಕೊಂಡ್ಲೆ ಮಾತನಾಡಿ, ನಿರಾಣಿ ಕೇವಲ ಒಬ್ಬ ವ್ಯಕ್ತಿಯಾಗಿ ಬೆಳೆಯಲಿಲ್ಲ, ನಾಡಿನ ಹಾಗೂ ಸಮಸ್ತ ಕಾರ್ಮಿಕರ ಶಕ್ತಿಯಾಗಿ ಬೆಳೆದರು. ಸಕ್ಕರೆ ಹಾಗೂ ಸಿಮೆಂಟ್‌ ಉದ್ಯಮ ಆರಂಭಿಸಿ ಸಾವಿರಾರು ನಿರುದ್ಯೋಗಿಗಳಿಗೆ ಉದ್ಯೋಗ ನೀಡುವುದರ ಮೂಲಕ ದೇಶದ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೈಜೋಡಿಸಿದ್ದಾರೆ ಎಂದರು.

ಶ್ರೀಕಾಂತ ಗೋಡಿ, ವೈ.ಕೆ. ಕಡಕೋಳ, ಎ.ವಿ. ಬಾಸೂತಕರ್‌, ಹಣಮಂತ ಕವಣಿ, ಸಿ.ಬಿ. ಮೂಡಲಗಿ, ಗಿರೀಶ ದೇಶಪಾಂಡೆ, ಆರ್‌.ಬಿ. ಕುಲಕರ್ಣಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಪ್ರಭು ಉಳ್ಳಾಗಡ್ಡಿ ಸ್ವಾಗತಿಸಿದರು. ಆರ್‌.ಎನ್‌. ಜೋಶಿ ನಿರೂಪಿಸಿದರು, ಹಣಮಂತ ಕವಣಿ ವಂದಿಸಿದರು. ಮುರುಗೇಶ ನಿರಾಣಿಯವರ ಜನ್ಮದಿನದ ನಿಮಿತ್ತ ಯಾದವಾಡದ ಮಂದಿರಗಳಲ್ಲಿ ಅಭಿಷೇಕ, ವಿಶೇಷ ಪೂಜೆ ಮಾಡಿಸಲಾಯಿತು.  ಸಿಹಿ ಹಂಚಿ ಸಂಭ್ರಮಿಸಲಾಯಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.