ಸಂಶೋಧನೆಗೆ ಅಧ್ಯಯನ ಅಗತ್ಯ


Team Udayavani, Sep 12, 2018, 3:44 PM IST

12-sepctember-18.jpg

ಬಾಗಲಕೋಟೆ: ಸಂಶೋಧನೆಯು ಶಿಕ್ಷಣದಲ್ಲಿ ಕೌಶಲ್ಯ-ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಸಂಶೋಧಕನು ಸಂಶೋಧನೆಯಲ್ಲಿ ತೊಡಗಿಸಿಕೊಂಡು ತನ್ನ ಜ್ಞಾನದ ಸಂಪತ್ತನ್ನು ಸೃಷ್ಟಿಸಿಕೊಳ್ಳಬೇಕು ಎಂದು ಪ್ರೊ| ಸಿ.ಎಚ್‌.ಭೋಸಲೆ ಹೇಳಿದರು. ಬಾಗಲಕೋಟೆಯ ಬಿವಿವಿ ಸಂಘದ ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಯುಜಿಸಿ-ಸಿಪಿಇ ಅಡಿಯಲ್ಲಿ ಹಮ್ಮಿಕೊಂಡ ಎರಡು ದಿನಗಳ ಸಂಶೋಧನಾ ವಿಧಾನ ವಿಷಯ ಕುರಿತ ನಡೆದ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಅವರು, ಸಂಶೋಧನೆ ಕೈಗೊಳ್ಳಲು ವಿಷಯದ ಆಳವಾದ ಅಧ್ಯಯನ ಅಗತ್ಯ ಮತ್ತು ವಿಷಯದ ಪರಿಪೂರ್ಣ ಮಾಹಿತಿ ಸಂಗ್ರಹವಾಗಬೇಕು ಎಂದರು.

ಸಂಶೋಧನೆಯು ನಿರಂತರ ಮತ್ತು ಹೊಸ- ಹೊಸ ವಿಧಾನಗಳನ್ನು ಅನುಸರಿಸಿ, ಸಂಶೋಧನೆ ಅಭಿವೃದ್ಧಿಯಾಗಬೇಕು. ಅಧ್ಯಾಪಕನ ಜೀವನಕ್ಕೆ ಸಂಶೋಧನೆಯು ಮಹತ್ತರವಾದ ಮೈಲುಗಲ್ಲಾಗಿದೆ. ಸಂಶೋಧಕನು ಉನ್ನತ ಶಿಕ್ಷಣದಲ್ಲಿ ಪ್ರಗತಿ ಸೃಜನಶೀಲತೆಯೊಂದಿಗೆ ಜ್ಞಾನ ಸೃಷ್ಟಿಸಿಕೊಂಡು, ಹೊಸ-ಹೊಸ ವಿಚಾರಗಳನ್ನು ಈ ಜಗತ್ತಿಗೆ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಶುದ್ಧ ವಿಜ್ಞಾನಗಳ ಮೂಲಭೂತ ಕಲ್ಪನೆಗಳ ಸ್ಪಷ್ಟ ಅರಿವು ಮೂಡಿಸುವುದು ಅತ್ಯಂತ ಅವಶ್ಯವಿದೆ. ಅಲ್ಲದೆ ಮುಂದಿನ ಪೀಳಿಗೆಗೆ ಸಂಶೋಧನೆಯ ಸೃಜನಶೀಲತೆ, ಹೊಸ ಆವಿಷ್ಕಾರ ಮುಖ್ಯ ಹಾಗೂ ಸ್ವಯಂ ಪ್ರೇರಣೆಯಿಂದ ನಮ್ಮನ್ನು ನಾವು ಸಂಶೋಧನೆಯಲ್ಲಿ ತೋಡಗಿಸಿಕೊಳ್ಳಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ| ಎಸ್‌.ಆರ್‌. ಕಂದಗಲ್‌ ಮಾತನಾಡಿ, ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ತಮ್ಮ ಜ್ಞಾನದ ಸಂಪತ್ತನ್ನು ವಿಸ್ತರಿಸಿಕೊಂಡು ಸಂಶೋಧನೆಯತ್ತ ಒಲವು ಬೆಳೆಸಿಕೊಳ್ಳಬೇಕು. ಪ್ರಾಮಾಣಿಕವಾಗಿ ಪರಿಶ್ರಮಪಟ್ಟು ಸಂಶೋಧನೆಯಲ್ಲಿ ಸಾಧನೆ ಮಾಡಿದರೆ ಮುಂದಿನ ಪೀಳಿಗೆಗೆ ಸೃಜನಶೀಲತೆ ಹಾಗೂ ಹೊಸ-ಹೊಸ ಆವಿಷ್ಕಾರಗಳು ಮುಖ್ಯ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕ ಡಾ|ಬಿ.ಎನ್‌.ಕಿರಸೂರ ಸ್ವಾಗತಿಸಿದರು. ಸಂಚಾಲಕ ಡಾ| ದೇವಪ್ಪ ಲಮಾಣಿ ಎರಡು ದಿನಗಳ ಕಾರ್ಯಗಾರದ ಮುಖ್ಯ ಉದ್ದೇಶವನ್ನು ವಿವರಿಸಿದರು. ಡಾ| ಆರ್‌.ಎಸ್‌.ಮಠದ ಮತ್ತು ಕಾಲೇಜಿನ ಪ್ರಾಧ್ಯಾಪಕರು, ಸ್ನಾತಕೋತ್ತರ ವಿಭಾಗದ ಎಲ್ಲ ವಿದ್ಯಾರ್ಥಿ -ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಸೌಭಾಗ್ಯ ಬದ್ನೂರ ನಿರೂಪಿಸಿದರು. ಡಾ| ಟಿ.ಎಂ. ಗಿರೀಶ ವಂದಿಸಿದರು.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.