ಬಿಸಿಯೂಟ ಅವ್ಯವಹಾರದಲ್ಲಿ ಅಧಿಕಾರಿಗಳು ಶಾಮೀಲು


Team Udayavani, Sep 23, 2018, 3:12 PM IST

23-sepctember-17.jpg

ಜಮಖಂಡಿ: ಪ್ರಾಥಮಿಕ, ಪ್ರೌಢಶಾಲೆ ಮಕ್ಕಳಿಗೆ ಸರಕಾರದಿಂದ ನೀಡಲಾಗುವ ಬಿಸಿಯೂಟದಲ್ಲಿ ಅವ್ಯವಹಾರ ನಡೆದಿದೆ. ಮಕ್ಕಳ ದಾಖಲಾತಿ, ಹಾಜರಾತಿ ಹಾಗೂ ಪೂರೈಕೆಯ ಅಂಕಿ-ಅಂಶಗಳು ಸಂಪೂರ್ಣ ವ್ಯತ್ಯಾಸವಾಗಿದ್ದು ತನಿಖೆ ನಡೆಸಬೇಕು ಎಂದು ತಾಪಂ ಸದಸ್ಯರು ಒಕ್ಕೊರಲಿನಿಂದ ಆಗ್ರಹಿಸಿದರು.

ನಗರದ ತಾಪಂ ಸಭಾಭವನದಲ್ಲಿ ಶನಿವಾರ ತಾಪಂ ಅಧ್ಯಕ್ಷೆ ನಾಗವ್ವ ಕುರಣಿ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಬಿಸಿಯೂಟ ಅ ಧಿಕಾರಿ ಪ್ರಗತಿ ಪರಿಶೀಲನೆ ನಡೆಸುವ ವೇಳೆ ಅ ಧಿಕಾರಿಗಳ ಹಾಗೂ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯಿತು. ತೇರದಾಳ ಶಾಸಕ ಸಿದ್ದು ಸವದಿ ಮಧ್ಯೆ ಪ್ರವೇಶಿಸಿ ತಾಲೂಕು ಬಿಸಿಯೂಟ ಅಧಿಕಾರಿಗಳ ನೀಡಿದ ಪ್ರಗತಿ ವರದಿ ಪರಿಶೀಲಿಸಿದ ನಂತರ ಅಂಕಿ-ಅಂಶಗಳ ಪ್ರಕಾರ ಮಕ್ಕಳ ಹಾಜರಾತಿ ಕಡಿಮೆಯಿದ್ದು, ಪೂರೈಕೆಯಲ್ಲಿ ವ್ಯತ್ಯಾಸವಾಗಿದ್ದು, ಅಂದಾಜು 10 ರಿಂದ 20 ಸಾವಿರ ಮಕ್ಕಳಿಗೆ ಆಹಾರ ಪೂರೈಸದಿದ್ದರೂ ಯಾವ ಆಧಾರದ ಮೇಲೆ, ಯಾಕೆ ವೇತನ ಪಾವತಿ ಮಾಡಲಾಗಿದೆ. ಓರ್ವ ವಿದ್ಯಾರ್ಥಿಗೆ ನಿತ್ಯ 5 ರೂ.ದಂತೆ ಅಂದಾಜು 10 ರಿಂದ 20 ಸಾವಿರ ವಿದ್ಯಾರ್ಥಿಗಳ ಒಂದು ದಿನದ ವೆಚ್ಚ 50 ರಿಂದ 95 ಸಾವಿರ ರೂ. ಪೋಲಾಗಿದ್ದು ತಾಲೂಕು ಮಟ್ಟದ ಅಧಿಕಾರಿಗಳು ಗಮನಿಸುವ ಮೂಲಕ ಒಂದು ವಾರದಲ್ಲಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ತಾ.ಪಂ ಅಧ್ಯಕ್ಷೆ ನಾಗವ್ವ ಕುರಣಿ, ಉಪಾಧ್ಯಕ್ಷೆ ಸುಂದ್ರವ್ವ ಬೆಳಗಲಿ, ಸ್ಥಾಯಿ ಸಮಿತಿ ಚೇರಮನ್‌ ಗುರಪಾದಯ್ಯ ಮರಡಿಮಠ, ತಾ.ಪಂ ಇಒ ಎ.ಜಿ. ಪಾಟೀಲ ಸಹಿತ ತಾ.ಪಂ ಸದಸ್ಯರು ಇದ್ದರು. ಖಾಸಗಿ ಆಸ್ಪತ್ರೆಯ ವೈದ್ಯರು ಸುಳ್ಳು ಹೇಳುವ ಮೂಲಕ ಬೇಕಾಬಿಟ್ಟಿ ಹಣ ವಸೂಲಿಯಲ್ಲಿ ತೊಡಗಿಕೊಂಡಿದ್ದಾರೆ. ರೋಗಿಯ ಚಿಕಿತ್ಸೆ ಅರಿತು ರೋಗ ನಿರೋಧಕ ಔಷ ಧ ನೀಡದೇ ಮನಬಂದಂತೆ ಉಪಚಾರ ನೀಡುವ ಮೂಲಕ ಬಡವರ ತೊಂದರೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಉಪವಿಭಾಗ ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಕೆ.ಕೆ. ಬಣ್ಣದ ಮಾತನಾಡಿ, ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಹತೋಟಿಯಲ್ಲಿ ಇಲ್ಲ. ತಾಲೂಕು ಆರೋಗ್ಯ ಅಧಿಕಾರಿಗಳು ಸಭೆ ಕರೆದು ಎಚ್ಚರಿಕೆ ನೀಡಲಿದ್ದಾರೆ. ಅನುಮಾನ ಬಂದ ಖಾಸಗಿ ವೈದ್ಯರ ಮೇಲೆ ವಂಚನೆ ಪ್ರಕರಣ ದಾಖಲು ಮಾಡಲು ಸಾಧ್ಯವಿದ್ದು, ಆರೋಗ್ಯ ಇಲಾಖೆ ಕಾರ್ಯದರ್ಶಿಗಳಿಗೆ ಅಥವಾ ಆರೋಗ್ಯ ಇಲಾಖೆ ಸಮಿತಿ ಅಗತ್ಯ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಸರಕಾರಿ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಸರಕಾರಿ ಆಸ್ಪತ್ರೆಗೆ 5 ರಿಂದ 6 ಎಕರೆ ಜಾಗ ಲಭಿಸಿದಲ್ಲಿ ಬಿಡುಗಡೆಗೊಂಡ ಅನುದಾನ ಬಳಕೆ ಮಾಡಿಕೊಂಡು ಉತ್ತಮ ಸೇವೆ ಸಲ್ಲಿಸಲು ಸಾಧ್ಯ ಎಂದರು.

ತಾಪಂ ಅಧಿಧೀನದಲ್ಲಿರುವ ನಗರದ ಕುಡಚಿ ರಸ್ತೆಯಲ್ಲಿರುವ 6 ಬಿಎಲ್‌ಡಿಇ ಕಾಲೇಜು ಎದುರಿಗೆ 1 ಹಾಗೂ ಸಾವಳಗಿಯಲ್ಲಿ 3 ಅಂಗಡಿಕಾರರು ಕಳೆದ ವರ್ಷಗಳಿಂದ ಬಾಡಿಗೆ ತುಂಬಿರುವುದಿಲ್ಲ. ಎಸ್‌. ಎಂ. ದಳವಾಯಿ, ಎಸ್‌.ಎಂ. ಪಾಟೀಲ ಎಂಬುವರು ಕಳೆದ 10 ವರ್ಷಗಳಿಂದ ಬಾಡಿಗೆ ಹಣ ಕಟ್ಟಿರುವುದಿಲ್ಲ ಯಾಕೆ, ಅಧಿಕಾರಿಗಳು ಯಾಕೆ ಮೌನ ವಹಿಸಿದ್ದಾರೆ ಸಭೆಯಲ್ಲಿ ಬಹಿರಂಗ ಪಡಿಸಬೇಕೆಂದು ತಾ.ಪಂ ಸದಸ್ಯ ಶ್ರೀಮಂತ ಚೌರಿ ಒತ್ತಾಯಿಸಿದರು.

ತಾ.ಪಂ ಇಒ ಎ.ಜಿ.ಪಾಟೀಲ ಮಾತನಾಡಿ, ಒಂದು ವಾರದಲ್ಲಿ ಬಾಡಿಗೆ ತುಂಬುವಂತೆ ನೋಟಿಸ್‌ ನೀಡಲಾಗುವುದು. ನಂತರ ಬಾಡಿಗೆ ಪರಿಷ್ಕರಣೆ ಮಾಡಿ ಹೊಸದಾಗಿ ಬಾಡಿಗೆ ತುಂಬುವಂತೆ ಸೂಚಿಸಲಾಗುವುದು. ಕರಾರುಗಳಿಗೆ ಒಪ್ಪದಿದ್ದಲ್ಲಿ ಮೇಲಧಿಕಾರಿಗಳ ಗಮನಕ್ಕೆ ತರುವ ಮೂಲಕ ಮತ್ತೊಮ್ಮೆ ಹರಾಜು ಪ್ರಕ್ರಿಯೆ ನಡೆಸಲಾಗುವು ಎಂದರು.

ಜಿಪಂ ಸದಸ್ಯರಾದ ಶಿವಾನಂದ ಪಾಟೀಲ, ಪುಂಡಲೀಕ ಪಾಲಬಾವಿ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಪೂರೈಸುವ ಆಹಾರ ಧಾನ್ಯಗಳು ರಾತ್ರಿ ವೇಳೆಯಲ್ಲಿ ಸಾಗಾಣಿಕೆ ಮಾಡುವ ಮೂಲಕ ಅಂಗನವಾಡಿ ಕಾರ್ಯಕರ್ತೆಯರ ಮನೆಯಲ್ಲಿ ವಿತರಿಸಲಾಗುತ್ತಿದೆ. ಸರಕಾರ ಆಹಾರ ಧಾನ್ಯ ರಾತ್ರಿ ವೇಳೆಯಲ್ಲಿ ಯಾಕೆ ಪೂರೈಕೆ ಮಾಡಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.