ಸಮಾಜ ಬೆಳವಣಿಗೆಯಲ್ಲಿ ಸಂಘಟನೆ ಪಾತ್ರ ದೊಡ್ಡದು


Team Udayavani, Sep 24, 2018, 5:04 PM IST

24-sepctember-22.jpg

ಜಮಖಂಡಿ: ಶಿವಸಿಂಪಿ ಸಮಾಜ ಚಿಕ್ಕದಾದರೂ ಸಂಸ್ಕೃತಿ ಆಚರಣೆಯಲ್ಲಿ ದೊಡ್ಡದಾಗಿದೆ. ಸಮಾಜದ ಬೆಳವಣಿಗೆಯಲ್ಲಿ ಸಂಘಟನೆ ಪಾತ್ರ ದೊಡ್ಡದಾಗಿದೆ. ಪ್ರತಿಯೊಬ್ಬರು ಸಂಘಟನೆಯಲ್ಲಿ ತೊಡಗಿ ಅಭಿವೃದ್ಧಿಯತ್ತ ಸಾಗಬೇಕೆಂದು ಕಾಂಗ್ರೆಸ್‌ ಧುರೀಣ ಆನಂದ ನ್ಯಾಮಗೌಡ ಹೇಳಿದರು.

ಎಸ್‌ಆರ್‌ಎ ಕ್ಲಬ್‌ ಸಭಾಭವನದಲ್ಲಿ ರವಿವಾರ ಶಿವಸಿಂಪಿ ಸಮಾಜ ಕಲ್ಯಾಣ ಸಂಘ ಹಮ್ಮಿಕೊಂಡಿದ್ದ 33ನೇ ವರ್ಷದ ಸರ್ವ ಸಾಧಾರಣ ಸಭೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಜೀವಮಾನ ಸಾಧನೆ ಕಾಯಕಯೋಗಿ ಪ್ರಶಸ್ತಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ದಿ.ಸಿದ್ದು ನ್ಯಾಮಗೌಡರಿಗೆ ಸಮಾಜದ ಬಗ್ಗೆ ಅಪಾರ ಮೆಚ್ಚುಗೆ ಇತ್ತು. ಶಾಸಕರ ಅನುದಾನದಲ್ಲಿ 12 ಲಕ್ಷ ರೂ. ಅನುದಾನ ನೀಡಿದ್ದರು. ನ್ಯಾಮಗೌಡರ ಕುಟುಂಬ ಶಿವಸಿಂಪಿ ಸಮಾಜದ ಅಭಿವೃದ್ಧಿಯಲ್ಲಿ ತಾವು ಕೈಜೋಡಿಸುವುದಾಗಿ ಭರವಸೆ ನೀಡಿದೆ ಎಂದರು.

ಶಿವದಾಸಿಮಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಮಾತನಾಡಿ, ಕಾಯಕವೇ ಶಿವಸಿಂಪಿ ಸಮಾಜದ ಉಸಿರಾಗಿದ್ದು, ಕಾಯಕದೊಂದಿಗೆ ಸಂಸ್ಕೃತಿ ಹೊಂದಿದ ಸಮಾಜವಾಗಿದೆ. ಸಣ್ಣ ಸಮಾಜವಾದರೂ ಸಾಮಾಜಿಕ, ರಾಜಕೀಯ ಕ್ಷೇತ್ರ ಹಾಗೂ ಎಲ್ಲ ಸಮುದಾಯಗಳೊಂದಿಗೆ ಗುರುತಿಸಿಕೊಂಡಿದ್ದ ಉತ್ತಮ ಬೆಳವಣಿಗೆ. ಜಿಲ್ಲೆಯಲ್ಲಿ 4 ಜನರು ನಗರಸಭೆಗಳಿಗೆ ಚುನಾಯಿತ ಸದಸ್ಯರಾಗಿದ್ದು ಹೆಮ್ಮೆಯ ಸಂಗತಿ. ಜನರೊಂದಿಗೆ ಬೆರತಾಗ ಮಾತ್ರ ಸಮುದಾಯಗಳಿಗೆ ಹೆಚ್ಚಿನ ಮಾನ್ಯತೆ ಲಭಿಸಲಿದೆ. ಅದರಲ್ಲಿ ಶಿವಸಿಂಪಿ ಸಮಾಜ ಮೂಂಚೂಣಿಯಲ್ಲಿದೆ ಎಂದರು.

ಬಿಡಿಸಿಸಿ ಬ್ಯಾಂಕ್‌ ಮಾಜಿ ಅಧ್ಯಕ್ಷ ಎಂ.ಎಂ. ಹಟ್ಟಿ, ಮುತ್ತಿನಕಂತಿಮಠದ ಶಿವಲಿಂಗ ಪಂಡಿತಾರಾಧ್ಯ ಶಿವಾಚಾರ್ಯರು ಮಾತನಾಡಿದರು. ಶಿವಶಿಂಪಿ ಸಮಾಜದ ಅಧ್ಯಕ್ಷ ಮಲ್ಲೇಶ ಆಳಗಿ ಅಧ್ಯಕ್ಷತೆ ವಹಿಸಿದ್ದರು. ಬಾಳಪ್ಪ ಮಮದಾಪುರ, ವಿನೋದ ಲೋಣಿ, ರಬಕವಿ-ಬನಹಟ್ಟಿ ನಗರಸಭೆ ಸದಸ್ಯರಾದ ಪ್ರಭಾಕರ ಮೋಳೆದ, ವಿಶ್ವನಾಥ ಪ್ರಕಾಶ, ಕೆರೂರ ಪಪಂ ಸದಸ್ಯ ವಿಜಯಕುಮಾರ ಐಹೊಳ್ಳಿ ಇದ್ದರು. ಇದೇ ಸಂದರ್ಭದಲ್ಲಿ ಸಿ.ಎಂ. ಚನ್ನಿ ದಂಪತಿಗೆ ಜೀವಮಾನ ಸಾಧನೆ ಕಾಯಕಯೋಗಿ ಪ್ರಶಸ್ತಿ ಪತ್ರ ನೀಡುವ ಮೂಲಕ ಗೌರವಿಸಲಾಯಿತು. ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಪ್ರಸಕ್ತ ಸಂಘ-ಸಂಸ್ಥೆಗಳಿಗೆ ಚುನಾಯಿತರಾದ ನೂತನ ಸದಸ್ಯರನ್ನು ಸನ್ಮಾನಿಸಲಾಯಿತು.

ಅಕ್ಷತಾ ಶಿವಣಗಿ, ಲಕ್ಷ್ಮೀ ಶಿವಸಿಂಪಿ, ಲಕ್ಷ್ಮೀ ಅರಬಳ್ಳಿ, ವೈಷ್ಣವಿ ಲೋಣಿ ಪ್ರಾರ್ಥಿಸಿದರು. ಶಿಕ್ಷಕ ಶಶಿಧರ ಕಡೆಬಾಗಿಲ ಸ್ವಾಗತಿಸಿದರು. ಪ್ರಾಚಾರ್ಯ ಎನ್‌.ವಿ. ಅಸ್ಕಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕರಾದ ಮಲ್ಲಿಕಾರ್ಜುನ ಮಮದಾಪುರ, ಶಿವಕುಮಾರ ಅರಬಳ್ಳಿ ನಿರೂಪಿಸಿದರು. ಕಾರ್ಯದರ್ಶಿ ನಿರೂಪಾದಿ ಶಿವಸಿಂಪಿ ವಂದಿಸಿದರು.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.