ಜಿಲ್ಲೆಯಲ್ಲಿ ಗಾಂಧಿ-ಶಾಸ್ತ್ರೀ ಜಯಂತಿ ಆಚರಣೆ
Team Udayavani, Oct 3, 2018, 4:18 PM IST
ಬಾಗಲಕೋಟೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಂಗಳವಾರ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ ಶಾಸ್ತ್ರೀ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಕೆ.ಜಿ. ಶಾಂತಾರಾಮ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಂಗೂಬಾಯಿ ಮಾನಕರ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಜಿಪಂ ಉಪಕಾರ್ಯದರ್ಶಿ ಅಮರೇಶ ನಾಯಕ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಗಾಂಧಿ ಹಾಗೂ ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು.
ವಿವಿಧ ಧರ್ಮದ ಗುರುಗಳಾದ ಸಂಸ್ಕೃತ ಪಂಡಿತ ಬಿಂಧುಮಾಧವಾಚಾರ್ಯ ನಾಗಸಂಪಗಿ ಭಗವದ್ಗೀತಾ, ಸೇಂಟ್ ಮೇರಿಸ್ ಚರ್ಚನ ಫಾದರ ಪೀಟರ ಆರ್ಶೀವಾದ ಬೈಬಲ್ ಹಾಗೂ ಆಶೀಫ್ ಮುದಗಲ್ಲ ಅವರು ಕುರಾನ್ ಕುರಿತು ಧರ್ಮ ಪಠಣ ಮಾಡಿದರು. ಶಾಲಾ ಮಕ್ಕಳು ಧರಿಸಿದ್ದ ಗಾಂಧಿಧೀ ಮತ್ತು ಶಾಸ್ತ್ರೀ ವೇಷಧಾರಿ ಎಲ್ಲರನ್ನು ಆಕರ್ಷಿಸಿತು. ವೇಷಧಾರಿಗಳಿಗೆ ಜಿಲ್ಲಾಧಿಕಾರಿಗಳು ನೂಲಿನ ಹಾರ ಹಾಕಿ ಗೌರವಿಸಿದರು. ಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್ರೊ| ಸಿದ್ದರಾಮ ಮಠಪತಿ ಹಾಗೂ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಮತ್ತು ವೈಷ್ಣವ ಜನತೋತನೆ, ರಘುಪತಿ ರಾಘವ ರಾಜಾರಾಮ ಗೀತೆ ಹಾಡಿದರು.
ಇದೇ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದ ವಿಶೇಷ ಜನಪದ ಸಂಚಿಕೆ ಮತ್ತು ಪಾಪು ಗಾಂಧಿ ಬಾಪು ಆದ ಕಥೆ ಕಿರು ಹೊತ್ತಿಗೆ ಬಿಡುಗಡೆ ಮಾಡಲಾಯಿತು. ನಂತರ ಗಾಂಧಿಧೀಜಿ ಜೀವನ ಕುರಿತು ಕಿರು ಸಾಕ್ಷ್ಯ ಚಿತ್ರವನ್ನು ಹಾಗೂ ಗಾಂಧಿಧೀಜಿಯವರ ಅಪರೂಪದ ಛಾಯಾಚಿತ್ರಗಳನ್ನು ಸಹ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಶಾಲಾ ಮಕ್ಕಳು ವೀಕ್ಷಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ಶಿಕ್ಷಕರು ಹಾಗೂ ಶಾಲಾ ಮಕ್ಕಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು