ಬಾಕಿ ಬಿಲ್ಗೆ ಆಗ್ರಹಿಸಿ ರೈತರ ಪ್ರತಿಭಟನೆ
Team Udayavani, Nov 1, 2018, 3:59 PM IST
ಮುಧೋಳ: ಕಬ್ಬಿನ ಬಾಕಿ ಬಿಲ್ಲ ಹಾಗೂ ಪ್ರಸಕ್ತ ಸಾಲಿನ ದರ ಘೋಷಣೆಗೆ ಆಗ್ರಹಿಸಿ ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ನಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ರೈತ ಪ್ರಮುಖರಾದ ಕೆ.ಟಿ. ಪಾಟೀಲ ಮಾತನಾಡಿ, ಕಬ್ಬು ಪೂರೈಸಿ 14 ದಿನದೊಳಗಾಗಿ ಹಣ ನೀಡಬೇಕೆಂದು ನಿಯಮವಿದ್ದರೂ ಕಾರ್ಖಾನೆಯವರು ಇದನ್ನು ಪಾಲಿಸುತ್ತಿಲ್ಲ. ಇದು ರೈತರ ಮೇಲೆ ನಡೆಯುತ್ತಿರುವ ಶೋಷಣೆಯಾಗಿದೆ ಎಂದು ಅವರು ಆರೋಪಿಸಿದರು.
2018-19ನೇ ಸಾಲಿಗೆ ಕಬ್ಬು ಪೂರೈಸುವ ರೈತರಿಗೆ ಮೊದಲ ಕಂತಾಗಿ 2500 ರೂ. ಬೆಲೆ ಘೋಷಣೆ ಮಾಡಿ ಕಾರ್ಖಾನೆ ಆರಂಭಿಸಬೇಕು. ಬೆಳಗಾವಿ ಜಿಲ್ಲೆಯ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿರುವ ಕಾರ್ಖಾನೆಗಳು ನೀಡುವ ಬೆಲೆಯನ್ನು ಬಾಗಲಕೋಟೆ-ವಿಜಯಪುರ ಜಿಲ್ಲೆಯ ರೈತರಿಗೂ ನೀಡಬೇಕು. ಎಫ್ಆರ್ಪಿ ಅಂದರೆ ಸರ್ಕಾರ ನಿಗದಿಪಡಿಸಿದ ಕನಿಷ್ಠ ಬೆಂಬಲ ಬೆಲೆಯಾಗಿದ್ದು, ಇದೆ ಅಂತಿಮವಲ್ಲ. ಆದರೆ ಕಾರ್ಖಾನೆಯವರು ಎಫ್ಆರ್ಪಿ ಬೆಲೆಯೇ ಅಂತಿಮ ಎಂದು ತಿಳಿದು ಅಷ್ಟೇ ಹಣ ನೀಡುತ್ತಿದ್ದಾರೆ. ಇದರಿಂದ ರೈತರಿಗೆ ತೀವ್ರ ಅನ್ಯಾಯವಾಗುತ್ತಿದೆ ಎಂದರು.
ಗುರುವಾರ ಸಂಜೆ ಒಳಗೆ ಸಮಸ್ಯೆ ಬಗೆಹರಿಸುವ ಭರವಸೆಯನ್ನು ಜಿಲ್ಲಾಧಿಕಾರಿಗಳು ನೀಡಿದ್ದಾರೆ. ಜಿಪಂ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ರೈತ ಸಂಘದ ಜಿಲ್ಲಾಧ್ಯಕ್ಷ ಹಣಮಂತ ಕಾಂಬಳೆ, ಸುಭಾಸ ಶಿರಬೂರ, ಸಮೀರವಾಡಿಯ ಗೋದಾವರಿ ಸಕ್ಕರೆ ಕಾರ್ಖಾನೆಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ರಾಮನಗೌಡ ಪಾಟೀಲ, ಉದಯ ಸಾರವಾಡ, ವಿಶ್ವನಾಥ ಉದಗಟ್ಟಿ ಪ್ರತಿಭಟನೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ
Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ
Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಸಾವು