ಗುಳೇದಗುಡ್ಡ ತಾಲೂಕಿಗಿಲ್ಲ ಕಚೇರಿ


Team Udayavani, Nov 22, 2018, 5:21 PM IST

22-november-22.gif

ಗುಳೇದಗುಡ್ಡ: ಗುಳೇದಗುಡ್ಡ ತಾಲೂಕು ಕೇಂದ್ರವಾಗಿ ವರ್ಷ ಕಳೆಯುತ್ತ ಬಂದಿದೆ. ಆದರೆ ಇದುವರೆಗೂ ತಾಲೂಕು ಕಚೇರಿಗಳು ಆರಂಭವಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಅಧಿಕಾರಿಗಳು ತಾಲೂಕು ಕಚೇರಿಗಳ ಆರಂಭಕ್ಕೆ ಮಹೂರ್ತ ಫಿಕ್ಸ್‌ ಮಾಡುತ್ತಿಲ್ಲ.

ಗುಳೇದಗುಡ್ಡ ನೂತನ ತಾಲೂಕು ಬಾದಾಮಿ ಕ್ಷೇತ್ರದ ಶಾಸಕರಾಗಿರುವ ಸಿದ್ದರಾಮಯ್ಯನವರ ವ್ಯಾಪ್ತಿಗೆ ಬರುತ್ತದೆ. ಆದರೆ ತಾಲೂಕು ಘೋಷಣೆಯಾಗಿ ವರ್ಷ ಕಳೆಯುತ್ತ ಬಂದರೂ ಇದುವರೆಗೂ ತಾಲೂಕು ಕಚೇರಿಗಳು ಕಾರ್ಯಾರಂಭ ಮಾಡಿಲ್ಲ. ಇದರಿಂದ ನಿತ್ಯವು ಗುಳೇದಗುಡ್ಡ ಸೇರಿದಂತೆ 38 ಹಳ್ಳಿಗಳ ಜನರು ತಾಲೂಕು ಕೇಂದ್ರವಿದ್ದರೂ ಬಾದಾಮಿಗೆ ಅಲೆದಾಡುವಂತಾಗಿದೆ.

ಕಟ್ಟಡ ಹಸ್ತಾಂತರ ಸಮಸ್ಯೆ ಇತ್ಯರ್ಥ: ತಾಲೂಕು ಕಚೇರಿಗಳ ಆರಂಭಕ್ಕೆ ನೀರಾವರಿ ಇಲಾಖೆ ಕಟ್ಟಡ ಹಸ್ತಾಂತರಿಸಲು ನಿಗಮದ ಅಧಿಕಾರಿಗಳು ತಕರಾರು ತೆಗೆದಿದ್ದರು, ಆದರೆ ಈಗ ನೀರಾವರಿ ಇಲಾಖೆ ಅಧಿಕಾರಿಗಳು ಸಹ ಕಟ್ಟಡ ಹಸ್ತಾಂತರಿಸಲು ಒಪ್ಪಿಗೆ ಸೂಚಿಸಿ, ಅದಕ್ಕೆ ಬಾಡಿಗೆಯನ್ನು ನಿಗದಿಪಡಿಸಿ ಎರಡು ತಿಂಗಳು ಕಳೆದಿವೆ. ಆದರೆ ಇದುವರೆಗೂ ನೂತನ ತಾಲೂಕಿನ ಕಚೇರಿಗಳು ಆರಂಭಗೊಳ್ಳದಿರುವುದಕ್ಕೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಕಳೆದ ತಿಂಗಳು ಕಟ್ಟಡ ವೀಕ್ಷಣೆಗೆ ಬಂದಿದ್ದ ಬಾದಾಮಿ ತಹಶೀಲ್ದಾರ್‌ ಎಸ್‌.ಎಸ್‌.ಇಂಗಳೆ ಅವರು ಭೇಟಿ ನೀಡಿ, ಕಚೇರಿಗಳನ್ನು ಪರಿಶೀಲಿಸಿದ್ದರು. ನೀರಾವರಿ ಇಲಾಖೆಗೆ ಬೇರೆ ಕಚೇರಿ ವ್ಯವಸ್ಥೆ ಮಾಡಿ, ಹದಿನೈದು ದಿನಗಳಲ್ಲಿ ಕಚೇರಿ ಆರಂಭಿಸಲಾಗುವುದು ಎಂದು ಹೇಳಿದ್ದರು, ಆದರೆ ತಿಂಗಳು ಕಳೆದರೂ ಕಚೇರಿ ಆರಂಭದ ಲಕ್ಷಣಗಳು ಕಾಣುತ್ತಿಲ್ಲ. ನೂತನ ತಾಲೂಕು ಕಚೇರಿಗಳ ಕಾರ್ಯಾರಂಭ ನ.26ರಂದು ಆರಂಭಗೊಳಿಸಲು ಶಾಸಕರು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಆದರೆ ಇದುವರೆಗೂ ಕಚೇರಿ ಆರಂಭಕ್ಕೆ ಕಟ್ಟಡಗಳಲ್ಲಿ ಇನ್ನೂ ಸಮರ್ಪಕ ಸೌಲಭ್ಯಗಳಿಲ್ಲ. 

ತಾಲೂಕು ಕಚೇರಿಗಳನ್ನು ಆರಂಭಿಸುವ ಕುರಿತು ಪಟ್ಟಣದ ನೀರಾವರಿ ಕಟ್ಟಡ ವೀಕ್ಷಣೆ ಮಾಡಲು ಉಪವಿಭಾಗಾಧಿ ಕಾರಿಗಳು ಶೀಘ್ರವೇ ಭೇಟಿ ನೀಡಲಿದ್ದಾರೆ. ತಾಲೂಕು ಕಚೇರಿಗೆ ಖಜಾನೆ-2 ಕೋಡ್‌ ಬಂದಿಲ್ಲ. ಕಾರಣ ಸ್ವಲ್ಪ ವಿಳಂಬವಾಗಿದೆ.  
ಎಸ್‌.ಎಸ್‌.ಇಂಗಳೆ , ತಹಶೀಲ್ದಾರ್‌, ಬಾದಾಮಿ

ಮಾಜಿ ಮುಖ್ಯಮಂತ್ರಿ, ಶಾಸಕ ಸಿದ್ದರಾಮಯ್ಯನವರು ನೂತನ ತಾಲೂಕು ಕಚೇರಿಗಳನ್ನು ನ. 26ರೊಳಗೆ ಆರಂಭಿಸಲು ಉಪವಿಭಾಗಾಧಿಕಾರಿಗಳಿಗೆ ಸೂಚಿಸಿದ್ದಾರೆ. ಉಪವಿಭಾಗಾಧಿಕಾರಿಗಳು ತಹಶೀಲ್ದಾರ್‌ಗೆ ಸೂಚಿಸಿದ್ದು, ತಾಲೂಕು ಕಚೇರಿಗಳನ್ನು ಆರಂಭಿಸಿ, ಜನರಿಗೆ ಅನುಕೂಲ ಮಾಡಿಕೊಡಲಾಗುವುದು.
ಹೊಳಬಸು ಶೆಟ್ಟರ,
ಕಾಂಗ್ರೆಸ್‌ ಮುಖಂಡ 

ತಾಲೂಕಾ ಕಚೇರಿಗಳನ್ನು ನೀರಾವರಿ ಇಲಾಖೆ ಕಟ್ಟಡದಲ್ಲಿ ಆರಂಭಿಸಬೇಕು. ತಾಲೂಕು ಕಚೇರಿಗೆ ಬೇಕಾದ ಮೂಲಭೂತ ಸೌಕರ್ಯ ಒದಗಿಸಬೇಕು.
ಅಶೋಕ ಹೆಗಡೆ, ಕಾರ್ಯದರ್ಶಿ,
ನಾಗರಿಕ ಹಿತರಕ್ಷಣಾ ವೇದಿಕೆ ಗುಳೇದಗುಡ್ಡ.

„ಮಲ್ಲಿಕಾರ್ಜುನ ಕಲಕೇರಿ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.