ತಾಪಂ ಸದಸ್ಯರಿಂದ ಅಧಿಕಾರಿಗಳ ತರಾಟೆ
Team Udayavani, Dec 9, 2018, 4:57 PM IST
ಮುಧೋಳ: ಸರ್ಕಾರದ ವಿವಿಧ ಯೋಜನೆಗಳನ್ನು ಫಲಾನುಭವಿಗಳಿಗೆ ವಿತರಿಸುವ ಸಂದರ್ಭದಲ್ಲಿ ನಮ್ಮ ಗಮನಕ್ಕೆ ತರುತ್ತಿಲ್ಲ ಹಾಗೂ ಸಭೆಯ ಮಾಹಿತಿ, ಅಭಿವೃದ್ಧಿ ಕಾರ್ಯಗಳ ಮಾಹಿತಿಯನ್ನು ಅಧಿಕಾರಿಗಳು ಸಮರ್ಪಕವಾಗಿ ನೀಡುತ್ತಿಲ್ಲ ಎಂದು ತಾಪಂ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಪಂ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಸದಸ್ಯರು, ಸಭೆಗೆ ಬರಲು ನಮಗೆ ನೋಟಿಸ್ ಹಾಗೂ ತಾಪಂ ಇಲಾಖೆವಾರು ಅಭಿವೃದ್ಧಿಪರ ಕಾರ್ಯಗಳ ಮಾಹಿತಿ ತಲುಪಿಲ್ಲ ಎಂದರು.
ಭಂಟನೂರ ಮತ್ತು ಚಿಕ್ಕೂರ ಶಾಲೆಯಲ್ಲಿ ಸೈಕಲ್ ವಿತರಣೆ ವೇಳೆ ನಮಗೆ ಆಹ್ವಾನಿಸದ ಮುಖ್ಯೋಪಾಧ್ಯಾಯರನ್ನು ಅಮಾನತು ಮಾಡಬೇಕು ಎಂದು ಸದಸ್ಯರು ಒತ್ತಾಯಿಸಿದರು. ಈ ಸಂಬಂಧ ಬಿಇಒ ಪರಿಶೀಲನೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ತಾಪಂ ಇಒ ಹೇಳಿದರು.
ತಾಪಂಗೆ ಒಳಪಡುವ ತಾಲೂಕಿನ ಆಸ್ತಿ ಬಗ್ಗೆ ಮಾಹಿತಿ ಕೇಳಿದ್ದರೂ ಮಾಹಿತಿ ಏಕೆ ಕೊಟ್ಟಿಲ್ಲ ಎಂದು ಸದಸ್ಯರು ಪ್ರಶ್ನಿಸಿದರು. ಈ ಕುರಿತು ಈಗಾಗಲೇ ಮಾಹಿತಿ ರವಾನಿಸಲಾಗಿದೆ, ಅದನ್ನು ಪರಿಶೀಲಿಸಿ ತಿಳಿಸಲಾಗುವುದು ಎಂದು ಇಒ ಉತ್ತರಿಸಿದರು. ವರ್ಷದಿಂದ ಖಾಲಿ ಬಿದ್ದ ಮಳಿಗೆಗೆ ಬಾಡಿಗೆ ಏಕೆ ನೀಡಿಲ್ಲ ಎಂದು ಪ್ರಶ್ನಿಸಿದರು.
ಕೃಷಿ ಇಲಾಖೆ ಅಧಿಕಾರಿಗಳು ಅನುಕೂಲಸ್ಥರಿಗೆ ಸರ್ಕಾರಿ ಯೋಜನೆಗಳ ಸವಲತ್ತು ನೀಡುತ್ತಾರೆ, ಉಳಿದವರಿಗೆ ಕ್ಯಾರೆ ಎನ್ನುತ್ತಿಲ್ಲ ಎಂದು ಸದಸ್ಯ ಶ್ರೀಶೈಲ ಆರೋಪಿಸಿದರು. ಈ ವಿಷಯವನ್ನು ಅಧ್ಯಕ್ಷರ ಸಮ್ಮುಖದಲ್ಲಿ ಬಗೆಹರಿಸಲಾಗಿದೆ ಎಂದಾಗ ಮತ್ತೆ ವಿಷಯ ವಿಕೋಪಗೊಂಡಿತು. ಸದಸ್ಯರು ಏಕವಚನದಲ್ಲಿ ಮಾತನಾಡಬೇಡಿ ಎಂದು ಅಧಿಕಾರಿ ಹೇಳಿದಾಗ ವಿಷಯ ಅಧ್ಯಕ್ಷರಿಗೂ ಮೀರಿದಾಗ ಸಭೆಯಲ್ಲಿ ಚರ್ಚೆಯಾದ ಕೆಲಸಗಳು ಅನುಷ್ಠಾನಕ್ಕೆ ಬಾರದಿದ್ದರೆ ಸಭೆ ಏಕೆ ಎಂದು ಕೋಪಗೊಂಡ ಸದಸ್ಯ ಸಭಾತ್ಯಾಗ ಮಾಡಿದರು.
ತಾಲೂಕಿನಲ್ಲಿರುವ ಬ್ಯಾರೇಜುಗಳನ್ನು ಪಡಸಲಗಿ ಬ್ಯಾರೇಜ್ ಮಾದರಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಳ್ಳಲು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಗಮನಕ್ಕೆ ಸದಸ್ಯರು ಈ ಕಾರ್ಯ ನಡೆದಿದೆ. ಸರ್ಕಾರವು ಸಮಾನಾಂತರ ಬ್ಯಾರೇಜ್ ಆರಂಭಿಸಲು ಚಿಂತನೆ ನಡೆಸಿದೆ ಎಂದರು. ತಾಪಂ ಅಧ್ಯಕ್ಷ ಟಿ.ಆರ್. ಬಟಕುರ್ಕಿ ಅಧ್ಯಕ್ಷತೆವಹಿಸಿದ್ದರು. ತಾಪಂ ಇಒ ಬಿ.ವಿ. ಅಡವಿಮಠ, ಸಾಮಾಜಿಕ ನ್ಯಾಯ ಸಮಿತಿ ರುಕ್ಮವ್ವ ಪಾಟೀಲ, ಸದಸ್ಯರಾದ ಸಂಗಪ್ಪ ಇಮ್ಮನವರ, ಯಶವಂತ ಹರಿಜನ, ಪರಪ್ಪ ಜನವಾಡ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil