ಕೃಷ್ಣೆಯ ರೈತರಿಗೆ ನಿರಾಶೆ ತಂದ ಎಚ್‌ಡಿಕೆ 


Team Udayavani, Jan 2, 2019, 10:48 AM IST

1-january-16.jpg

ಬಾಗಲಕೋಟೆ: ರಾಜ್ಯದ ಶೇ.70 ಭೌಗೋಳಿಕ ಕ್ಷೇತ್ರ ಹೊಂದಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ನೀಡಿದ ಹೇಳಿಕೆ ಈ ಭಾಗದ ರೈತ ವಲಯದಲ್ಲಿ ತೀವ್ರ ನಿರಾಶೆ ತಂದಿದೆ.

ಹೌದು, ಎರಡು ದಿನಗಳ ಹಿಂದೆ ಜಿಲ್ಲೆಗೆ ಬಂದು, ರೈತರ ಸಾಲ ಮನ್ನಾ ಯೋಜನೆಯಡಿ ಋಣಮುಕ್ತ ಪ್ರಮಾಣ ಪತ್ರ ನೀಡುವ ಕಾರ್ಯಕ್ರಮದಲ್ಲಿ ಯುಕೆಪಿ ಕುರಿತ ಪ್ರಸ್ತಾಪಿಸಿದ ಸಿಎಂ ಎಚ್‌ಡಿಕೆ, ಯೋಜನೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂಬುದು ತಿಳಿಸಲಿಲ್ಲ. ಕನಿಷ್ಠ ಪಕ್ಷ ಯೋಜನೆ ಕುರಿತು ಬದ್ಧತೆಯೂ ತೋರಿಸಿಲ್ಲ. ಅವರಾಡಿದ ಮಾತುಗಳಿಂದ ಯುಕೆಪಿ ಯೋಜನೆ, ಇದೇ ಸರ್ಕಾರ ಪೂರ್ಣಗೊಳಿಸುತ್ತದೆ ಎಂಬ ಆಶಾಭಾವನೆಯೂ ಈ ಭಾಗದ ರೈತರಲ್ಲಿ ಬರಲಿಲ್ಲ.

ಎಚ್‌ಡಿಕೆ ಏನಂದ್ರು: ಯುಕೆಪಿ ಕುರಿತು ಸತ್ಯ ಹೇಳೆ¤àನೆ ಕೇಳಿ. ಕೃಷ್ಣಾ ನ್ಯಾಯಾಧೀಕರಣ 1ನೇ ಹಂತದಲ್ಲಿ ನೀಡಿದ ನೀರನ್ನೇ ಇನ್ನೂ ಸರಿಯಾಗಿ ಬಳಸಿಕೊಂಡಿಲ್ಲ. ಈಗ 2ನೇ ಹಂತದಲ್ಲಿ 170 ಟಿಎಂಸಿ ಅಡಿ ಲಭ್ಯವಾಗಿದೆ. ಜಲಾಶಯವನ್ನು 519.60 ಮೀಟರ್‌ ಗೆ ಎತ್ತರಿಸಿದರೆ, 20 ಹಳ್ಳಿ ಮುಳುಗುತ್ತವೆ. 1 ಲಕ್ಷಕ್ಕೂ ಹೆಚ್ಚು ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕು. ಪರಿಹಾರಕ್ಕಾಗಿಯೇ 65 ಸಾವಿರ ಕೋಟಿ ಬೇಕು.

ಇನ್ನು ಕಾಲುವೆ ಕಾಮಗಾರಿಗೂ ಅನುದಾನಬೇಕು. ಇಷ್ಟೆಲ್ಲ ಕೈಗೊಂಡು, ಕನಿಷ್ಠ 1 ಲಕ್ಷ ಕೋಟಿ ಹಣ ಖರ್ಚು ಮಾಡಿದರೂ, ಮೊದಲು ನಮಗೆ ಬಳಸಿಕೊಳ್ಳಲು ಅವಕಾಶವಿಲ್ಲ. ನಮ್ಮ ರೈತರ ಹೊಲದಲ್ಲಿ ನೀರು ನಿಲ್ಲಿಸಿದರೂ, ಮೊದಲು ಆಂಧ್ರಪ್ರದೇಶಕ್ಕೆ ನೀರು ಬಿಡಬೇಕು. ತೀರ್ಪಿನಲ್ಲಿ ಈ ರೀತಿ ಇದೆ. ನಮ್ಮ ರೈತರ ಭೂಮಿಯಲ್ಲಿ ನೀರು ನಿಲ್ಲಿಸಿ, ಆಂಧ್ರಕ್ಕೆ ಕೊಡೋದು ಹೇಗೆ?. ಅದರಿಂದ ನಮಗೆ ಎಷ್ಟು ಲಾಭವಾಗುತ್ತದೆ ಎಂಬುದು ಈ ಭಾಗದ ರೈತರು ಅರ್ಥ ಮಾಡಿಕೊಳ್ಳಿ ಎಂಬುದು ಸಿಎಂ ಎಚ್‌ಡಿಕೆ ಭಾಷಣವಾಗಿತ್ತು.

ಪರಿಹಾರದ ಮಾತಿಲ್ಲ: ಯುಕೆಪಿ 2ನೇ ಹಂತದಲ್ಲಿ 9 ಉಪ ಯೋಜನೆಗಳಿವೆ. ಬಹುತೇಕ ಈ ಯೋಜನೆಗಳ ಹೆಡ್‌ವರ್ಕ (ಕಾಲುವೆಗಳು) ಕಾಮಗಾರಿ ಕೈಗೊಳ್ಳಲಾಗಿದೆ. ನಮ್ಮ ಭೂಮಿಗೂ ನೀರು ಬರುತ್ತದೆ ಎಂದು ರೈತರು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಆಲಮಟ್ಟಿ ಜಲಾಶಯ ಎತ್ತರಿಸಿ, ಹೆಚ್ಚುವರಿಯಾಗಿ ಹಂಚಿಕೆಯಾದ 100 ಟಿಎಂಸಿ ನೀರು ನಿಲ್ಲಿಸಿದಾಗ, ಮಾತ್ರ ಈ 9 ಉಪ ಯೋಜನೆಗಳ ಕಾಲುವೆಗೂ ನೀರು ಕೊಡಲು ಸಾಧ್ಯವಿದೆ. ಆದರೆ, ಸಿಎಂ ಈ ಹೇಳಿಕೆಯಿಂದ ಜಲಾಶಯದ ಗೇಟ್‌ ಎತ್ತರಿಸುವ, ಲಕ್ಷಾಂತರ ಭೂಮಿಗೆ ಪರಿಹಾರ ನೀಡಿ, ಸ್ವಾಧೀನಪಡಿಸಿಕೊಳ್ಳುವ, ನೀರು ನಿಲ್ಲಿಸಿ, ಸದ್ಬಳಕೆ ಮಾಡಿಕೊಳ್ಳುವ ಬದ್ಧತೆಯ ಮಾತು ಹೇಳಲಿಲ್ಲ. ಹೀಗೆ ಮುಂದುವರಿದರೆ 50 ವರ್ಷ ಕಳೆದರೂ ಈ ಯೋಜನೆ ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಸ್ವತಃ ಸಿಎಂ ಹೇಳುತ್ತಾರೆಂದರೆ, ನಮ್ಮ ಭಾಗದ ನೀರಾವರಿ ಯೋಜನೆಯ ಗತಿ ಏನು ಎಂಬುದು ಈ ಭಾಗದ ಹೋರಾಟಗಾರರ ಪ್ರಶ್ನೆ.

ರಾಜ್ಯದ ಬಹುದೊಡ್ಡ ಯೋಜನೆ: ಯುಕೆಪಿ, ಇದು ಬಹುದೊಡ್ಡ ನೀರಾವರಿ ಯೋಜನೆ. ಕೃಷ್ಣಾ-ಕಾವೇರಿಗೆ ಹೋಲಿಸಿದರೆ, ರಾಜ್ಯದ ಶೇ.70ರಷ್ಟು ಭೌಗೋಳಿಕ ಕ್ಷೇತ್ರ ಯುಕೆಪಿ ಹೊಂದಿದೆ. ಕೃಷ್ಣಾ ನದಿಯಲ್ಲಿ ವಾರ್ಷಿಕ 2786 ಟಿಎಂಸಿ ಅಡಿ ನೀರು ಹರಿದರೆ ಅದರಲ್ಲಿ ಮಹಾರಾಷ್ಟ್ರಕ್ಕೆ 666 ಟಿಎಂಸಿ, ಕರ್ನಾಟಕಕ್ಕೆ 907 ಟಿಎಂಸಿ ಹಾಗೂ ಆಂಧ್ರಕ್ಕೆ 1005 ಟಿಎಂಸಿ ಅಡಿ ನೀರು ಬಳಸಿಕೊಳ್ಳಲು ಕೃಷ್ಣಾ ನ್ಯಾಯಾಧೀಕರಣದ ಐತೀರ್ಪಿನಲ್ಲಿ ಅವಕಾಶ ಕಲ್ಪಿಸಲಾಗಿದೆ.

ಕೃಷ್ಣಾ ನದಿಯ ಒಟ್ಟು ಉದ್ದ 2.57 ಚದರ ಕಿ.ಮೀ ಇದ್ದು, ಇದರಲ್ಲಿ ನಮ್ಮ ರಾಜ್ಯದಲ್ಲೇ ಅತಿಹೆಚ್ಚುಉದ್ದ ಹರಿದಿದೆ. ಮಹಾರಾಷ್ಟ್ರದಲ್ಲಿ 68,800 ಚ.ಕಿ.ಮೀ, ಕರ್ನಾಟಕದಲ್ಲಿ 1,12,600 ಚ.ಕಿ.ಮೀ ಹಾಗೂ ಆಂಧ್ರಪ್ರದೇಶದಲ್ಲಿ 75,600 ಚ.ಕಿ.ಮೀ ಉದ್ದ ಹರಿದಿದೆ. ಮೂರು ರಾಜ್ಯಗಳಲ್ಲಿ ಸಂಚರಿಸಿ, ಸಮುದ್ರ ಸೇರುವ ಕೃಷ್ಣೆಯ ನೀರಿನ ಸದ್ಭಳಕೆಗೆ ಈ ವರೆಗಿನ ಯಾವ ಸರ್ಕಾರವೂ ಬದ್ಧತೆಯಿಂದ ಕೆಲಸ ಮಾಡುತ್ತಿಲ್ಲ ಎಂಬ ಅಸಮಾಧಾನ ಜನರಲ್ಲಿದೆ.

ಸಂತ್ರಸ್ತರ ಗೋಳು ಕೇಳ್ತಿಲ್ಲ
ಯಾವ ಸರ್ಕಾರ ಅಧಿಕಾರಕ್ಕೆ ಬಂದರೂ ಸಂತ್ರಸ್ತರ ಸಮಸ್ಯೆ ಆಲಿಸುತ್ತಿಲ್ಲ. ಈಗಾಗಲೇ ಸಾವಿರಾರು ಎಕರೆ ಭೂಮಿ ಸ್ವಾಧೀನಪಡಿಸಿಕೊಂಡರೂ ಅವರಿಗೆ ಸರಿಯಾದ ಪರಿಹಾರ ಸಿಕ್ಕಿಲ್ಲ. ಈಗ ಮತ್ತೆ 1.23 ಲಕ್ಷ ಎಕರೆ ಭೂಮಿ ಯುಕೆಪಿ 2ನೇ ಹಂತಕ್ಕೆ ಹೋಗುತ್ತದೆ. ಭೂಮಿ ಕಳೆದುಕೊಳ್ಳುವ ರೈತರಿಗೆ ಏಕ ರೂಪದ ಬೆಲೆ ನಿಗದಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ. ಈಗಿನ ಮೈತ್ರಿ ಸರ್ಕಾರ ಯುಕೆಪಿಯನ್ನು ನಿರ್ಲಕ್ಷ್ಯ  ವಹಿಸಿದೆ.
. ಪ್ರಕಾಶ ಅಂತರಗೊಂಡ,
ಸಂತ್ರಸ್ತ ರೈತ ಮುಖಂಡ

ಶ್ರೀಶೈಲ ಕೆ. ಬಿರಾದಾರ 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.