ಸೌಕರ್ಯವಿಲ್ಲದೆ ಪ್ರಯಾಣಿಕರ ಪರದಾಟ


Team Udayavani, Jan 7, 2019, 9:40 AM IST

7-january-12.jpg

ಜಮಖಂಡಿ: ನಗರದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಬಸ್‌ ನಿಲ್ದಾಣ ಕಾಮಗಾರಿಯಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳ ಅಸಮರ್ಪಕ ಕಾರ್ಯನಿರ್ವಹಣೆಯಿಂದ ಮೂಲಸೌಕರ್ಯಗಳಿಗಾಗಿ ಪ್ರಯಾಣಿಕರು ಪರದಾಡುವಂತಾಗಿದೆ.

ದಿ| ಸಿದ್ದು ನ್ಯಾಮಗೌಡರ ಪ್ರಯತ್ನದ ಫಲವಾಗಿ 4 ಕೋಟಿ ವೆಚ್ಚದಲ್ಲಿ 4.04 ಎಕರೆ ಜಾಗದಲ್ಲಿ ನಿರ್ಮಾಣಗೊಳ್ಳುತ್ತಿರುವ ಬಸ್‌ ನಿಲ್ದಾಣ ಕಾಮಗಾರಿ ಶೇ. 70 ಮುಕ್ತಾಯಗೊಂಡಿದೆ. ಇನ್ನುಳಿದ ಶೆ. 30 ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂಬ ಅನುಮಾನ ಮೂಡಿದೆ.

ಬಸ್‌ ನಿಲ್ದಾಣದಲ್ಲಿ ಈಗಾಗಲೇ 16 ಪ್ಲಾಟ್ ಫಾರಂ ನಿರ್ಮಾಣವಾಗಿದ್ದರೂ ಬಸ್‌ಗಳು ಮಾತ್ರ ಯದ್ವಾತದ್ವಾ ನಿಲ್ಲುತ್ತವೆ. ಕಾರಣ ಫ್ಲಾಟ್ಫಾರಂಗಳ ಸಂಖ್ಯೆ ನಮೂದಿಸಿಲ್ಲ. ನಗರದ ಬಸ್‌ ನಿಲ್ದಾಣಕ್ಕೆ ಸ್ಥಳೀಯ ಡಿಪೋ ಸಹಿತ ಹೊರಗಡೆಯಿಂದ ಪ್ರತಿನಿತ್ಯ ಒಟ್ಟು 754 ಬಸ್‌ ಸಂಚರಿಸುತ್ತಿವೆ. ಆದರೆ, ಎಲ್ಲ ಬಸ್‌ಗಳು ಬೇಕಾಬಿಟ್ಟಿಯಾಗಿ ನಿಲ್ಲುವುದರಿಂದ ಪ್ರಯಾಣಿಕರಿಗೆ ಯಾವ ಬಸ್‌ ಎಲ್ಲಿಗೆ ನಿಲುತ್ತದೆ ಎಲ್ಲಿಗೆ ಹೋಗುತ್ತದೆ ಎಂಬುದು ಗೊತ್ತಾಗುತ್ತಿಲ್ಲ. ಬಸ್‌ ನಿಲುಗಡೆ ಮಾಡುವ ಫ್ಲಾಟ್ಫಾರಂ ನಿಗದಿಪಡಿಸಿಲ್ಲ. ಇದರಿಂದ ಪ್ರಯಾಣಿಕರು ಎಲ್ಲ ಫ್ಲಾಟ್ಫಾರಂಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ.

ಬಸ್‌ ನಿಲ್ದಾಣದಲ್ಲಿ ಡಾಂಬರೀಕರಣ ಹಾಗೂ ಸಿಸಿ ರಸ್ತೆ ಕೈಗೊಳ್ಳದ್ದರಿಂದ ಧೂಳು ಹಾರುತ್ತಿದ್ದು, ಪ್ರಯಾಣಿಕರು ಮೂಗು ಮುಚ್ಚಿ ಕೊಳ್ಳುವಂತಾಗಿದೆ. ಶುದ್ಧ ಕುಡಿಯುವ ನೀರಿನ ಸೌಕರ್ಯ, ವಿದ್ಯುತ್‌ ಸಂಪರ್ಕವಿಲ್ಲ, ಇಂದಿರಾ ಕ್ಯಾಂಟಿನ್‌ ಕೆಲಸ ನಡೆದಿದೆ. ಪ್ರಯಾಣಿಕರಿಗೆ ಸಮರ್ಪಕ ರೀತಿಯಲ್ಲಿ ಆಸನ ವ್ಯವಸ್ಥೆಗಳಿಲ್ಲ.

ಖಾಸಗಿನವರಿಗೆ ನೀಡಿದ ಕ್ಯಾಂಟಿನ್‌ ಹಾಗೂ ಇತರೆ ವಾಣಿಜ್ಯ ಮಳಿಗೆಗಳು ಟೆಂಡರ್‌ ಆದರೂ ಈವರೆಗೂ ಅಂಗಡಿಗಳನ್ನು ನೀಡಿಲ್ಲ. ವರ್ಷದೊಳಗೆ ಕಟ್ಟಡ ಪೂರ್ಣಗೊಳಿಸಬೇಕಾಗಿದ್ದ ಗುತ್ತಿಗೆದಾರರು ಆಮೆಗತಿಯಲ್ಲಿ ಕಾಮಗಾರಿ ಕೈಗೊಂಡಿದ್ದಾರೆ.

1964ರಲ್ಲಿ ಅಂದಿನ ಮುಖ್ಯಮಂತ್ರಿ ತಾಲೂಕಿನ ಸಾವಳಗಿ ಗ್ರಾಮದವರೇ ಆಗಿದ್ದ ದಿ| ಬಿ. ಡಿ.ಜತ್ತಿ ಸ್ಥಾಪಿಸಿದ ಓಬೇರಾಯನ ಕಾಲದ ಬಸ್‌ ನಿಲ್ದಾಣವನ್ನು ಸಿದ್ದು ನ್ಯಾಮಗೌಡ ಅವರು ಸಿಂಗಾಪುರ ಮಾದರಿಯಲ್ಲಿ ನಿರ್ಮಿಸಲು ಉದ್ದೇಶದಿಂದ ನೂತನ ಬಸ್‌ ಕಾಮಗಾರಿಗೆ ಅನುದಾನ ಮಂಜೂರು ಮಾಡಿಸಿದ್ದರು. ಹಿಂದಿನ ಸಚಿವ ಈಶ್ವರ ಖಂಡ್ರೆ ಅವರಿಂದ ಉದ್ಘಾಟನೆಗೊಂಡಿದ್ದರೂ ಬಸ್‌ ನಿಲ್ದಾಣ ಪ್ರಯಾಣಿಕರಿಗೆ ಅನುಕೂಲವಾಗುತ್ತಿಲ್ಲ.

ನೂತನ ಬಸ್‌ ನಿಲ್ದಾಣವನ್ನು 15-20 ದಿನಗಳಲ್ಲಿ ಜನರ ಸೇವೆಗೆ ಸಿದ್ಧಗೊಳಿಸಲಾಗುವುದು. ಅಪೂರ್ಣಗೊಂಡ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಕ್ತಾಯಗೊಳಿಸುವಂತೆ ಗುತ್ತಿಗೆದಾರನಿಗೆ ನೋಟಿಸ್‌ ನೀಡಲಾಗಿದೆ. ಬಸ್‌ ನಿಲ್ದಾಣವನ್ನು ವ್ಯವಸ್ಥಿತವಾಗಿ ಪೂರ್ಣಗೊಳಿಸಿದ ನಂತರ ಅಚ್ಚುಕಟ್ಟಾಗಿ ನಿರ್ವಹಣೆ ನಡೆಯಲಿದೆ. ಈಗಾಗಲೇ ಸುಮಾರು 50 ಲಕ್ಷ ವೆಚ್ಚದಲ್ಲಿ ಬಸ್‌ ನಿಲ್ದಾಣದ ಸುಮಾರು 2800 ಸ್ವೇರ್‌ ಮೀಟರ್‌ ರಸ್ತೆ ಡಾಂಬರೀಕರಣ ಕಾಮಗಾರಿಗೆ ಟೆಂಡರ್‌ ಕರೆಯಲಾಗಿದೆ. 
•ಪಿ.ವಿ. ಮೇತ್ರಿ 
ವಿಭಾಗೀಯ ಸಾರಿಗೆ ಅಧಿಕಾರಿ ಬಾಗಲಕೋಟೆ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.