ಚಿಕ್ಕಸಂಗಮದಲ್ಲಿ ಗ್ರಾಮೀಣ ಸುಗ್ಗಿ-ಹುಗ್ಗಿ


Team Udayavani, Jan 19, 2019, 10:19 AM IST

19-january-15.jpg

ಬಾಗಲಕೋಟೆ: ಉತ್ತರ ಕರ್ನಾಟಕದ ಅದರಲ್ಲೂ ಗ್ರಾಮೀಣ ಕಲೆ, ಸಂಸ್ಕೃತಿ ಹಾಗೂ ಪರಂಪರೆಗೆ ಪ್ರೇರಣೆ ನೀಡುವ ಉದ್ದೇಶದೊಂದಿಗೆ ಮುಧೋಳದ ಸಪ್ತಸ್ವರ ಸಂಗೀತ, ನೃತ್ಯ, ಸಾಂಸ್ಕೃತಿಕ ಸಂಸ್ಥೆಯಿಂದ ಬೀಳಗಿ ತಾಲೂಕಿನ ಚಿಕ್ಕಸಂಗಮದಲ್ಲಿ ಜ.20ರಂದು ಒಂದು ದಿನ ಸುಗ್ಗಿ-ಹುಗ್ಗಿ ಎಂಬ ಗ್ರಾಮೀಣ ಸಾಂಸ್ಕೃತಿಕ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷೆ ಜ್ಯೋತಿ ಪಾಟೀಲ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಧೋಳದಲ್ಲಿ ಸ್ಥಾಪನೆಗೊಂಡ ಸಪ್ತಸ್ವರ ಸಂಗೀತ, ನೃತ್ಯ, ಸಾಂಸ್ಕೃತಿಕ ಸಂಸ್ಥೆ ಕಳೆದ ಹಲವು ವರ್ಷಗಳಿಂದ ನಮ್ಮ ಭಾರತೀಯ ಸಂಸ್ಕೃತಿ-ಪರಂಪರೆ ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ನಡೆಸಿದೆ. ಅದರಲ್ಲೂ ನಮ್ಮ ಉತ್ತರ ಕರ್ನಾಟಕದ ಪರಂಪರೆಗೆ ಹೆಚ್ಚು ಒತ್ತು ನೀಡಲಾಗಿದೆ ಎಂದರು.

ಉತ್ತರ ಕರ್ನಾಟಕದಲ್ಲಿ ಕೃಷಿ ಕುಟುಂಬದ ಪರಂಪರೆ, ಈ ಭಾಗದ ಗ್ರಾಮೀಣ ಜನರ ಬದುಕು, ಅಡುಗೆ, ಸಂಸ್ಕೃತಿ, ಉತ್ಸವ ಎಲ್ಲವೂ ಇಂದು ಮರೆಯಾಗುತ್ತಿದೆ. ಹೀಗಾಗಿ ಈ ಪರಂಪರೆಯನ್ನು ಮುಂದುವರೆಸುವ, ಇಂದಿನ ಯುವತಿಯರಿಗೆ ಪರಿಚಯಿಸುವ ಉದ್ದೇಶ ನಮ್ಮದಾಗಿದೆ. ಹೀಗಾಗಿ ಪ್ರತಿವರ್ಷ ಸಂಕ್ರಾಂತಿಗೆ ಸುಗ್ಗಿ-ಹುಗ್ಗಿ ಎಂಬ ಗ್ರಾಮೀಣ ಉತ್ಸವ ನಡೆಸಲಾಗುತ್ತಿದ್ದು, ಈ ಬಾರಿ ಜ.20ರಂದು ಬೆಳಗ್ಗೆ 8ರಿಂದ ಸಂಜೆ 6ರ ವರೆಗೆ ಹಲವು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ಇಳಕಲ್ಲ ಸೀರೆಯುಟ್ಟವರಿಗೆ ಪ್ರವೇಶ: ಬೀಳಗಿ ತಾಲೂಕಿನ ಚಿಕ್ಕಸಂಗಮ (ಘಟಪ್ರಭಾ-ಕೃಷ್ಣೆಯ ಸಂಗಮ ಸ್ಥಳ)ದಲ್ಲಿ ಒಂದು ಇಡೀ ದಿನ ಕಾರ್ಯಕ್ರಮ ನಡೆಯಲಿವೆ. ಸುಮಾರು 1 ಸಾವಿರಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಲಿದ್ದು, ಎಲ್ಲ ಮಹಿಳೆಯರೂ ಇಳಕಲ್ಲ ಸೀರೆಯುಟ್ಟು, ನಮ್ಮ ಗ್ರಾಮೀಣ ಸೊಗಡಿನ ಮಹಿಳೆಯ ವೇಷದಲ್ಲಿ ಭಾಗವಹಿಸಲಿದ್ದಾರೆ. ಫ್ಯಾನ್ಸಿ, ಚೂಡಿದಾರ ಮುಂತಾದ ಬಟ್ಟೆ ಧರಿಸಿ, ಆಗಮಿಸುವ ಮಹಿಳೆಯರಿಗೆ ಅವಕಾಶ ಇರುವುದಿಲ್ಲ. ಪ್ರೇಕ್ಷಕರಾಗಿ ಬರುವವರೂ ಇದೇ ಬಟ್ಟೆ ಧರಿಸಿರಬೇಕು ಎಂಬುದನ್ನು ನಾವು ಕಡ್ಡಾಯ ಮಾಡಿಕೊಂಡಿದ್ದೇವೆ. ಇದಕ್ಕೆ ಭಾಗವಹಿಸುವ ಎಲ್ಲ ಮಹಿಳೆಯರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಅಂದು ಬೆಳಗ್ಗೆ 8ಕ್ಕೆ ವಿವಿಧ ಕಾರ್ಯಕ್ರಮ ಆರಂಭಗೊಳ್ಳಲಿವೆ. ಸಂಕ್ರಮಣ ವಿಶೇಷ ಗಂಗಾಪೂಜೆ, ಎಳ್ಳು ಹಚ್ಚಿ ನದಿಯ ಸ್ನಾನ, ಶ್ರೀ ಸಂಗಮೇಶ್ವರ ದೇವರಿಗೆ ಮಹಾಪೂಜೆ, ಮಂಗಳಾರತಿ ನಡೆಯಲಿದೆ. ಎಳ್ಳು-ಬೆಲ್ಲ ಸಹಿತ ಸುಗ್ಗಿಯ ಎಲ್ಲ ತರಹದ ಕಾಳು-ಕಬ್ಬು ಸಹಿತ ವಿಶೇಷ ನೈವೇದ್ಯ ಅರ್ಪಿಸಲಾಗುವುದು ಎಂದರು.

ಚಕ್ಕಡಿಯಲ್ಲಿ ಆಗಮನ: ಮಹಿಳೆಯರಿಂದ, ಮಹಿಳೆಯರಿಗಾಗಿ ನಡೆಯುವ ಈ ಸುಗ್ಗಿ-ಹುಗ್ಗಿ ಗ್ರಾಮೀಣ ಸಂಸ್ಕೃತಿ ಉತ್ಸವದಲ್ಲಿ ಸಂಜೆ ವರೆಗೂ ಪುರುಷರಿಗೆ ಪ್ರವೇಶವಿಲ್ಲ. ಸಂಜೆ 5ರ ವೇಳೆಗೆ ಆಮಂತ್ರಿತ ಪುರುಷರು ಸುಗ್ಗಿ-ಹುಗ್ಗಿ ಉತ್ಸವ ನೋಡಬಹುದು. ಅಂದು ಮಹಿಳೆಯರೇ ಎತ್ತುಗಳಿಗೆ ಪೂಜೆ ಮಾಡಿ, ಅಲಂಕೃತ ಚಕ್ಕಡಿಗಳನ್ನು ಹೂಡಲಿದ್ದಾರೆ. ಇದೇ ವೇಳೆ ಕೆಲವರಿಗೆ ಆರತಿ ಮಾಡಿ, ವಸ್ತ್ರದಾನ (ಬಟ್ಟೆ), ಸಂಕ್ರಮಣದ ವಿಶೇಷ ಊಟವಾದ ಸಜ್ಜೊರೊಟ್ಟಿ, ಗುರೆಳ್ಳ ಚಟ್ನಿ, ಎಣ್ಣೆಗಾಯಿ ಪಲ್ಯ, ಮೊಸರು ಸಹಿತ ಬುತ್ತಿಯೊಂದಿಗೆ ಕುಂಭ, ಆರತಿಯೊಂದಿಗೆ ಚಕ್ಕಡಿಯನ್ನು ಹೊತ್ತ ಎತ್ತುಗಳ ಮೆರವಣಿಗೆ ನಡೆಸಲಾಗುವುದು. ಬಳಿಕ ಎಳ್ಳು-ಬೆಲ್ಲ ಹಂಚಿ ಸಂಕ್ರಮಣ ಆಚರಿಸಲಾಗುತ್ತದೆ. ಹುಡುಗರ ಕರಿ-ಎರೆಯುವುದು (ಮಕ್ಕಳಿಗೆ ಸಂಕ್ರಮಣದಂದು ವಿಶೇಷ ಸ್ನಾನ ಮಾಡಿಸುವುದು), ನಂತರ ಚಿಕ್ಕಸಂಗಮದ ನದಿಗೆ ನೂರಾರು ಸುಮಂಗಲೆಯರಿಂದ ಬಾಗಿನ ಅರ್ಪಿಸಲಾಗುವುದು ಎಂದು ವಿವರಿಸಿದರು.

ರಾಜಕೀಯ ರಹಿತ: ಸಪ್ತಸ್ವರ ಸಂಗೀತ, ನೃತ್ಯ, ಸಾಂಸ್ಕೃತಿಕ ಸಂಸ್ಥೆ, ಕಳೆದ 2011ರಿಂದ ಹಲವು ಕಾರ್ಯಕ್ರಮ ನಡೆಸಿದ್ದು, ಯಾವುದೇ ರೀತಿಯ ಶುಲ್ಕ, ದೇಣಿಗೆ ಪಡೆಯುವುದಿಲ್ಲ. ಸಂಸ್ಥೆಯ ಸದಸ್ಯರೇ ಸ್ವಂತ ವಂತಿಗೆ ಹಾಕಿ, ಇಂತಹ ಗ್ರಾಮೀಣ ಸೊಗಡಿನ ಕಾರ್ಯಕ್ರಮ ನಡೆಸುತ್ತಿದೆ. ಈ ಬಾರಿಯೂ ಯಾವುದೇ ಶುಲ್ಕ ಪಡೆಯಲ್ಲ. ನಮ್ಮ ಉತ್ತರ ಕರ್ನಾಟಕ ಸೊಗಡಿನ ಉಡುಗೆಯಲ್ಲಿ ಭಾಗವಹಿಸುವುದು ಕಡ್ಡಾಯ. ಇದು ರಾಜಕೀಯರಹಿತ ಕಾರ್ಯಕ್ರಮ. ಯಾವುದೇ ಪಕ್ಷ ಮತ್ತು ಜಾತಿಯವರಿಗೆ ಆದ್ಯತೆ ಕೊಡುವ, ಜಾತಿಕರಣ ಮಾಡುವ ಪ್ರಯತ್ನ ನಡೆಸಲು ಬಿಟ್ಟಿಲ್ಲ ಎಂದರು.

ಅಲ್ಲದೇ ಅಂದಿನ ಸುಗ್ಗಿ-ಹುಗ್ಗಿ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ಹಾಗೂ ಸ್ವಯಂ ಉದ್ಯೋಗದ ಕುರಿತು ತರಬೇತಿ-ಚರ್ಚೆ ಕೂಡ ನಡೆಯಲಿದೆ ಎಂದು ಜ್ಯೋತಿ ಪಾಟೀಲ ಹೇಳಿದರು.

ಸಪ್ತಸ್ವರ ಸಂಗೀತ, ನೃತ್ಯ, ಸಾಂಸ್ಕೃತಿಕ ಸಂಸ್ಥೆಯ ಪಾರ್ವತಿ ನಾಯಕ, ನಿರ್ಮಲಾ ಮಲಘಾಣ, ಸವಿತಾ ಅಂಗಡಿ ಮುಂತಾದವರು ಉಪಸ್ಥಿತರಿದ್ದರು.

ಸಾಮೂಹಿಕ ಭೋಜನ
ಮಹಿಳೆಯರೇ ತಯಾರಿಸಿದ ಗಾಳಿಪಟ ಹಾರಿಸುವ ಉತ್ಸವವೂ ಈ ವೇಳೆ ನಡೆಯಲಿದೆ. ಬಣ್ಣ-ಬಣ್ಣದ ಗಾಳಿಪಟ ಉತ್ಸವ, ಸಪ್ತಸ್ವರ ಸದಸ್ಯರ ಜೊತೆಗೆ ಸಾಮೂಹಿಕ ಭೋಜನ ನಡೆಯಲಿದೆ. ಸುಗ್ಗಿ-ಹುಗ್ಗಿ ಸಾಂಸ್ಕೃತಿಕ ಮನರಂಜನಾ ಕಾರ್ಯಕ್ರಮದಲ್ಲಿ ದೇಶೀಯ ಆಟ, ನೃತ್ಯ, ಜನಪದ ಆಟಗಳ ಪ್ರದರ್ಶನ, ಡೊಳ್ಳು ಕುಣಿತ, ಗೊಂಬೆ ಆಟಗಳು ನಡೆಯಲಿವೆ. ಮಹಿಳೆಯರಿಂದ ವೀರಗಾಸೆ ಕುಣಿತ, ಸಂಜೆ ದೀಪೋತ್ಸವ ಹಮ್ಮಿಕೊಳ್ಳಲಾಗಿದೆ. 
ಜ್ಯೋತಿ ಪಾಟೀಲ, 
 ಮುಧೋಳದ ಸಪ್ತಸ್ವರ ಸಂಗೀತ,
 ನೃತ್ಯ, ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷೆ

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.