ಮಕ್ಕಳು ಕೆಂಡದ ಮೇಲೆ ಕುಳಿತಂತೆ!


Team Udayavani, Feb 10, 2019, 10:07 AM IST

10-february-11.jpg

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ, ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಸಿದ್ದರಾಮಯ್ಯ ಪ್ರತಿನಿಧಿಸುವ ಬಾದಾಮಿ ತಾಲೂಕಿನ ಕೆಂದೂರ ಗ್ರಾಮದ ಮಕ್ಕಳು, ಶಾಲೆಗೆ ಹೋಗುವುದೆಂದರೆ ಕೆಂಡದ ಮೇಲೆ ಕುಳಿತ ಅನುಭವದಂತಾಗಿದೆ.

ಹೌದು, ಬಾದಾಮಿ ತಾಲೂಕಿನ ಯರಗಟ್ಟಿ-ಕಮತಗಿ ರಾಜ್ಯ ಹೆದ್ದಾರಿ ಮೇಲಿರುವ ಕೆಂದೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸ್ಥಿತಿಯನ್ನೊಮ್ಮೆ ನೋಡಿದರೆ ಗಾಬರಿಯಾಗುತ್ತದೆ. ಈ ಶಾಲೆಯ ಮೂರು ಕಟ್ಟಡಗಳು ಈಗಲೋ-ಆಗಲೋ ಬೀಳುವ ಹಂತದಲ್ಲಿವೆ. ಇಂತಹ ಕೊಠಡಿಯಲ್ಲೇ ಮಕ್ಕಳು ನಿತ್ಯ ಶಿಕ್ಷಣ ಕಲಿಯುವ ಅನಿವಾರ್ಯತೆ ಇದೆ.

282 ಮಕ್ಕಳು: ಕೆಂದೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 7ನೇ ತರಗತಿಗಳಿವೆ. ಒಟ್ಟು 282 ಮಕ್ಕಳು ವ್ಯಾಸಂಗ ಮಾಡುತ್ತಾರೆ. ಒಟ್ಟು 10 ಕೊಠಡಿಗಳಿದ್ದು, ಅದರಲ್ಲಿ ಮೂರು ಕೊಠಡಿಗಳು, ಸುಮಾರು 40 ವರ್ಷಕ್ಕೂ ಹಿಂದಿನ ಕಾಲದ್ದಾಗಿವೆ. ಮೇಲ್ಛಾವಣಿ ಹಂಚಿನಿಂದ ಕೂಡಿದ್ದು, ಹಲವು ಹಂಚುಗಳು ಹಾರಿ ಹೋಗಿವೆ. ಇನ್ನೂ ಕೆಲವು ಕೊಠಡಿಯಲ್ಲೇ ಬಿದ್ದಿವೆ. ಅಂತಹ ಶಿಥಿಲಾವಸ್ಥೆಯ ಕೊಠಡಿಯಲ್ಲೇ ಶಿಕ್ಷಕರು ಅನಿವಾರ್ಯವಾಗಿ ಮಕ್ಕಳಿಗೆ ಪಾಠ ಮಾಡುತ್ತಾರೆ.

ಇಡೀ ಊರಿಗೆ ಇದೊಂದೇ ಪ್ರಾಥಮಿಕ ಶಾಲೆ. ಖಾಸಗಿ ಪ್ರಾಥಮಿಕ ಶಾಲೆಗಳೂ ಈ ಊರಲ್ಲಿ ಇಲ್ಲ. ಕೆಂದೂರ ಮತ್ತು ತಾಂಡಾ ಒಳಗೊಂಡ ಹೊಸ ಗ್ರಾಪಂ ಕೂಡ ಇಲ್ಲಿ ರಚಿಸಲಾಗಿದೆ. ಗ್ರಾಮದಲ್ಲಿ ಒಟ್ಟು 3600 ಜನಸಂಖ್ಯೆ ಇದ್ದು, 1994 ಜನ ಮತದಾರರಿದ್ದಾರೆ. ಅವರೆಲ್ಲರ ಮಕ್ಕಳು, ಇದೇ ಪ್ರಾಥಮಿಕ ಶಾಲೆ ನಂಬಿಕೊಂಡಿದ್ದಾರೆ.

ಬೀಳುವ ಆತಂಕ: ಈ ಶಾಲೆಯ ಒಟ್ಟು 10 ಕೊಠಡಿಗಳಲ್ಲಿ 1ರಿಂದ 7ನೇ ತರಗತಿ ಮಕ್ಕಳು ವ್ಯಾಸಂಗ ಮಾಡುತ್ತಿದ್ದು, 4 ಮತ್ತು 5ನೇ ತರಗತಿ ಮಕ್ಕಳು, ಈ ಶಿಥಿಲಾವಸ್ಥೆಯಲ್ಲಿ ಇರುವ ಕೊಠಡಿಯಲ್ಲೇ ಕುಳಿತುಕೊಳ್ಳುತ್ತಾರೆ.

ಗಾಳಿ-ಮಳೆ ಬಂದರೆ, ಹಂಚು-ಕೊಠಡಿ ಯಾವಾಗ ಬೀಳುತ್ತವೆ ಎಂಬ ತೀವ್ರ ಆತಂಕದಲ್ಲೇ ನಿತ್ಯ ಮಕ್ಕಳು ಜ್ಞಾನಾರ್ಜನೆ ಮಾಡುವಂತಾಗಿದೆ. ಇನ್ನೊಂದೆಡೆ, ಶಿಕ್ಷಕರೂ, ಬೇರೆ ದಾರಿ ಇಲ್ಲದೇ, ತಾವೂ ಆತಂಕದಲ್ಲೇ ನಿಂತು ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ. 40 ವರ್ಷಗಳ ಹಳೆಯ ಕಟ್ಟಡ, ದುರಸ್ತಿಗೊಳಿಸುವ ಅಥವಾ ಹೊಸ ಕಟ್ಟಡ ನಿರ್ಮಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂಬ ಅಸಮಾಧಾನ ಗ್ರಾಮಸ್ಥರದ್ದು.

ಅಧಿಕಾರಿಗಳು ಎಚ್ಚೆತ್ತುಕೊಳ್ಳಲಿ: ಬಾದಾಮಿಯಿಂದ 8 ಕಿ.ಮೀ ದೂರದಲ್ಲಿರುವ, ಯರಗಟ್ಟಿ-ಕಮತಗಿ ರಾಜ್ಯ ಹೆದ್ದಾರಿ (ಕೆಸಿಫ್‌)ಯ ಮಹಾಕೂಟ ಪಕ್ಕದಲ್ಲೇ ಇರುವ ಈ ಪ್ರಮುಖ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅನಾಹುತ ಸಂಭವಿಸುವ ಮೊದಲು ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ.

ಇಡೀ ಗ್ರಾಮಕ್ಕೊಂದೇ ಈ ಶಾಲೆ ಇದ್ದು, ಸರ್ಕಾರಿ ಶಾಲೆಗೆ ಉತ್ತೇಜನ ನೀಡುವ ಜತೆಗೆ ಗ್ರಾಮೀಣ ಮಕ್ಕಳು, ನಿರ್ಭಯವಾಗಿ ನಿತ್ಯ ಶಿಕ್ಷಣ ಕಲಿಯುವ ವಾತಾವರಣ ರೂಪಿಸಲು ಕ್ಷೇತ್ರದ ಶಾಸಕರಾಗಿರುವ ಸಿದ್ದರಾಮಯ್ಯ ಅವರು ಕ್ರಮ ಕೈಗೊಳ್ಳಲಿ ಎಂಬುದು ಗ್ರಾಮಸ್ಥರ ಒತ್ತಾಯ.

ಶಾಸಕರ ಗಮನಕ್ಕೆ ತರುವೆ
ಕೆಂದೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂರು ಕೊಠಡಿಗಳು ಶಿಥಿಲಾವಸ್ಥೆಯಲ್ಲಿ ಇರುವುದು ಗಮನಕ್ಕೆ ಬಂದಿರಲಿಲ್ಲ. ಸಿದ್ದರಾಮಯ್ಯನವರು ಕ್ಷೇತ್ರಕ್ಕೆ ಬಂದಾಗ ಈ ಶಾಲೆಯ ಪರಿಸ್ಥಿತಿ ಕುರಿತು ಗಮನಕ್ಕೆ ತರಲಾಗುವುದು. ಕೊಠಡಿ ಮಂಜೂರು ಅಥವಾ ಕೊಠಡಿಗಳ ದುರಸ್ತಿಗೆ ಕ್ರಮ ಕೈಗೊಳ್ಳಲು ತಿಳಿಸಲಾಗುವುದು.
• ಹೊಳೆಬಸು ಶೆಟ್ಟರ,ಕಾಂಗ್ರೆಸ್‌ ಮುಖಂಡ

ಗ್ರಾಪಂ ಇದೆ; ಅಧಿಕಾರ ಇಲ್ಲ!
ಗ್ರಾಪಂ ಪುನರ್‌ವಿಂಗಡಣೆಗೂ ಮುಂಚೆ ಆಡಗಲ್ಲ ಗ್ರಾಪಂ ವ್ಯಾಪ್ತಿಯಲ್ಲಿದ್ದ ಕೆಂದೂರ ಗ್ರಾಮವನ್ನು ಪ್ರತ್ಯೇಕ ಪಂಚಾಯತಯನ್ನಾಗಿ ಮಾಡಲಾಗಿತ್ತು. ಇದರಡಿ ಕೆಂದೂರ, ಕೆಂದೂರ ತಾಂಡಾ, ಕುಟಕನಕೇರಿ ಸೇರಿಸಲಾಗಿತ್ತು. ಕುಟಕನಕೇರಿ ಗ್ರಾಮಸ್ಥರು, ಇದಕ್ಕೆ ಪ್ರಬಲ ವಿರೋಧ ವ್ಯಕ್ತಪಡಿಸಿ, ಗ್ರಾಪಂ ಚುನಾವಣೆಯನ್ನೇ ಬಹಿಷ್ಕರಿಸಿದ್ದರು. ಹೀಗಾಗಿ ಕೆಂದೂರ ಗ್ರಾಪಂ ವ್ಯಾಪ್ತಿಯ ತಾಂಡಾ ಮತ್ತು ಗ್ರಾಮದ 2 ವಾರ್ಡ್‌ಗಳ 7 ಸದಸ್ಯ ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆದಿತ್ತು. ಈಗಲೂ 7 ಸದಸ್ಯರು ಆಯ್ಕೆಯಾದರೂ ಗ್ರಾಪಂಗೆ ಅಧ್ಯಕ್ಷ- ಉಪಾಧ್ಯಕ್ಷರಿಲ್ಲ. ಹೀಗಾಗಿ ಗ್ರಾಮದ ಯಾವುದೇ ಸಮಸ್ಯೆ ಹೇಳಿಕೊಳ್ಳಬೇಕಿದ್ದರೂ, ಆಡಳಿತಾಧಿಕಾರಿಯಾಗಿರುವ ತಾಪಂ ಇಒ ಬಳಿಗೆ ಹೋಗಬೇಕಿದೆ. ಕೆಂದೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿ ಕುರಿತು ಇಒ ಗಮನಕ್ಕೆ ತರಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನಲಾಗಿದೆ.​​​​​​​

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.