ಸಿಎಂ ಕುಮಾರಸ್ವಾಮಿಗೆ 4 ಪತ್ರ ಬರೆದ ಸಿದ್ದರಾಮಯ್ಯ


Team Udayavani, Feb 16, 2019, 9:33 AM IST

16-february-13.jpg

ಗುಳೇದಗುಡ್ಡ: ಉತ್ತರ ಕರ್ನಾಟಕ ಭಾಗದಲ್ಲಿ ಯಾವುದೇ ಜಿಲ್ಲೆಗಳಲ್ಲಿ ಸುಸಜ್ಜಿತ ಹೃದಯ ರೋಗದ ಆಸ್ಪತ್ರೆ ಇಲ್ಲ. ಆದ್ದರಿಂದ ಬಾಗಲಕೋಟೆಯ ಗುಳೇದಗುಡ್ಡ ಪಟ್ಟಣದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಘಟಕ ಆರಂಭಿಸಬೇಕೆಂದು ಮಾಜಿ ಸಿಎಂ, ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ.

ಮಾಜಿ ಸಿಎಂ ಮತ್ತು ಸ್ಥಳೀಯ ಶಾಸಕ ಸಿದ್ದರಾಮಯ್ಯನವರು ಒಟ್ಟು ನಾಲ್ಕು ಪತ್ರಗಳನ್ನು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಬರೆದಿದ್ದು, ಈ ಭಾಗದಲ್ಲಿ ರೈತರು, ಕೂಲಿ ಕಾರ್ಮಿಕರು, ಬಡ ಜನರಿಗೆ ಹೃದಯ ರೋಗಕ್ಕೆ ಸಂಬಂಧಿಸಿದ ರೋಗಿಗಳು ಚಿಕಿತ್ಸೆಗಾಗಿ ಬೆಂಗಳೂರಿನ ಜಯದೇವ ಹೃದಯ ಸಂಸ್ಥೆ ಅಥವಾ ಹೊರ ರಾಜ್ಯದ ಆಸ್ಪತ್ರೆಗೆ ಕನಿಷ್ಠ 500 ಕಿ.ಮೀ. ತೆರಳಿ ಚಿಕಿತ್ಸೆ ಪಡೆಯುವಂತಾಗಿದೆ. ಇದರಿಂದ ರೋಗಿಗಳು ತೀವ್ರವಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಜೊತೆಗೆ ಸಕಾಲದಲ್ಲಿ ಚಿಕಿತ್ಸೆ ದೊರೆಯದೇ ಮೃತರಾದ ಘಟನೆ ಸಂಭವಿಸಿವೆ. ಆದ್ದರಿಂದ ಉತ್ತರ ಕರ್ನಾಟಕದ ಮಧ್ಯ ಭಾಗದ ಕೇಂದ್ರವಾಗಿರುವ ಬಾಗಲಕೋಟೆಯ ಗುಳೇದಗುಡ್ಡ ಪಟ್ಟಣದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಘಟಕ ತೆರೆಯಬೇಕೆಂದು ಪತ್ರ ಬರೆದಿದ್ದಾರೆ.

ವಿಭಾಗೀಯ ಕಚೇರಿ ಆರಂಭಿಸಿ: ಬಾದಾಮಿ ತಾಲೂಕಿನಲ್ಲಿ ಬಾದಾಮಿ ಪಟ್ಟಣ, ಕೆರೂರು ಹಾಗೂ ನೂತನ ತಾಲೂಕು ಗುಳೇದಗುಡ್ಡ ಪಟ್ಟಣ ಸುಮಾರು 154 ಹಳ್ಳಿಗಳಿಂದ ಕೂಡಿದ್ದು, ಹೆಸ್ಕಾಂ ವಿಭಾಗೀಯ ಕಚೇರಿಯು ಬಾಗಲಕೋಟೆಯಲ್ಲಿರುವುದರಿಂದ ಬಾದಾಮಿ ಹಾಗೂ ಗುಳೇದಗುಡ್ಡ ತಾಲೂಕಿನ ಗ್ರಾಹಕರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಗುಳೇದಗುಡ್ಡ ಪಟ್ಟಣದಲ್ಲಿ ನೂತನ ವಿಭಾಗೀಯ ಕಚೇರಿ ಮಂಜೂರು ಮಾಡಬೇಕೆಂದು ಪತ್ರ ಬರೆದಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕೆಪಿಟಿಎಸ್‌ಎಲ್‌ ಬೆಂಗಳೂರಿನ ವ್ಯವಸ್ಥಾಪಕ ನಿರ್ದೇಶಕರಿಗೆ ವಿಭಾಗೀಯ ಕಚೇರಿ ತೆರೆಯಲು ಸೂಚಿಸಿದ್ದಾರೆ.

110ಕೆವಿ ವಿದ್ಯುತ್‌ ಸ್ಟೇಶನ್‌ ಆರಂಭಿಸಿ: ಬಾದಾಮಿ ತಾಲೂಕಿನ ಕೆಂದೂರ, ಆಲದಕಟ್ಟಿ ಕ್ರಾಸ್‌, ನಾಗರಾಳ ಎಸ್‌.ಪಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ತಿನ ಸಮಸ್ಯೆಯಿದೆ. ರೈತರಿಗೆ ಸಮರ್ಪಕ ವಿದ್ಯುತ್‌ ದೊರೆಯುತ್ತಿಲ್ಲ. ಆದ್ದರಿಂದ ಈ ಕೆಂದೂರ, ಆಲದಕಟ್ಟಿ ಕ್ರಾಸ್‌, ನಾಗರಾಳ ಎಸ್‌.ಪಿ ಭಾಗದಲ್ಲಿ ಹೊಸದಾಗಿ 110ಕೆವಿ ವಿದ್ಯುತ್‌ ವಿತರಣಾ ಸ್ಟೇಶನ್‌ ಮಂಜೂರಿ ಮಾಡಬೇಕೆಂದು ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಭೂಗತ ವಿದ್ಯುತ್‌ ಮಾರ್ಗ: ಗುಳೇದಗುಡ್ಡ ಪಟ್ಟಣವು ಬಾದಾಮಿ ತಾಲೂಕು ಕೇಂದ್ರವಾಗಿದ್ದು, ಈ ಎರಡು ಪಟ್ಟಣಗಳಲ್ಲಿ ಓವರ್‌ಹೆಡ್‌ ವಿದ್ಯುತ್‌ ಲೈನ್‌ ಇದ್ದು, ಇದನ್ನು ಭೂಗತ ವಿದ್ಯುತ್‌ ಲೈನ್‌ಆಗಿ ಮಾರ್ಪಡಿಸಿದರೆ ಸಾರ್ವಜನಿಕರಿಗೆ ಗುಣಮಟ್ಟದ ವಿದ್ಯುತ್‌ ಅನ್ನು ನೀಡಲು ಅನುಕೂಲವಾಗುವುದು. ಬಾದಾಮಿ ಮತ್ತು ಗುಳೇದಗುಡ್ಡ ಪಟ್ಟಣದಲ್ಲಿ ಭೂಗತ ವಿದ್ಯುತ್‌ ಲೈನ್‌ಆಗಿ ಮಾರ್ಪಡಿಸಲು ಕೋರಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕ್ರಮಕೈಗೊಳ್ಳಲು ನಿರ್ದೇಶಕರಿಗೆ ಸೂಚಿಸಿದ್ದಾರೆ.

ಸಚಿವ ರೇವಣ್ಣರಿಗೂ ಪತ್ರ
ಗುಳೇದಗುಡ್ಡ ಪಟ್ಟಣ ನೂತನ ತಾಲೂಕು ಘೋಷಣೆಯಾಗಿ ಕಾರ್ಯರಂಭಗೊಂಡಿದೆ. ಸದರಿ ತಾಲೂಕು ಕಚೇರಿ ಕಟ್ಟಡ ಅವಶ್ಯಕತೆ ಇರುವುದರಿಂದ ಅಗತ್ಯ ಅನುದಾನ ಮಂಜೂರು ಮಾಡುವಂತೆ ಸಿದ್ದರಾಮಯ್ಯ ಅವರು ಲೋಕೋಪಯೋಗಿ ಸಚಿವ ರೇವಣ್ಣನವರಿಗೂ ಸಹ ಪತ್ರ ಬರೆದಿದ್ದಾರೆ.

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.