ಕಿಸಾನ್‌ ಸಮ್ಮಾನ ಸೌಲಭ್ಯಕ್ಕೆ ಅರ್ಜಿಗಳ ಮಹಾಪೂರ 


Team Udayavani, Feb 23, 2019, 10:35 AM IST

23-february-14.jpg

ಬೀಳಗಿ: ಚಿಕ್ಕ ಹಿಡುವಳಿದಾರ ರೈತರಿಗೆ (ಐದು ಎಕರೆ ಒಳಗೆ) ವಾರ್ಷಿಕ 6000 ರೂಪಾಯಿ ಸಹಾಯಧನ ನೀಡುವ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಲಾಭ ಪಡೆದುಕೊಳ್ಳಲು ರೈತರು ಅರ್ಜಿ ಸಲ್ಲಿಸಲು ಪೈಪೋಟಿ ನಡೆಸಿದ್ದು, ಈಗಾಗಲೇ ಎರಡು ಸಾವಿರ ಅರ್ಜಿ ಸಲ್ಲಿಕೆಯಾಗಿವೆ.

ಇನ್ನು ಅರ್ಜಿ ಜತೆಗೆ ಹಲವು ದಾಖಲೆ ಸಲ್ಲಿಸಬೇಕಾಗಿದ್ದು, ಅಗತ್ಯ ಜಮೀನು ಉತಾರ 
ಪಡೆಯಲು ರೈತರು ಪರದಾಡುವಂತಾಗಿದೆ. ಐದು ಎಕರೆ ಮೇಲ್ಪಟ್ಟ ದೊಡ್ಡ ರೈತರು ಮತ್ತು ಐದು ಎಕರೆ ಒಳಗಿನ ಸಣ್ಣ ರೈತರು ಸೇರಿ ಒಟ್ಟು ತಾಲೂಕಿನಲ್ಲಿ 24,200 ರೈತರಿದ್ದಾರೆ. ಕೃಷಿ ಇಲಾಖೆಯ ಅಧಿಕೃತ ಮಾಹಿತಿ ಪ್ರಕಾರ 16,048 ಜನ ಸಣ್ಣ ರೈತರಿದ್ದು, ಕಿಸಾನ್‌ ಸಮ್ಮಾನ್‌ ಯೋಜನೆಗೆ ಅರ್ಹತೆ ಹೊಂದಿದ್ದಾರೆ. ಮೊದಲ ಹಂತದಲ್ಲಿ ಅರ್ಜಿ ಸಲ್ಲಿಸಲು ಫೆ.25 ಕೊನೆಯ ದಿನವಾಗಿದೆ.

ಕಾಲಕ್ರಮೇಣದಲ್ಲಿ ಇನ್ನು ಅನೇಕ ರೈತರು ಚಿಕ್ಕ ಹಿಡುವಳಿದಾರರಾಗಿ ಬದಲಾವಣೆ ಆಗುವ ಸಾಧ್ಯತೆ ಇರುತ್ತದೆ. ಅಂತಹ ರೈತರ ಹೆಸರು ಕೃಷಿ ಇಲಾಖೆ ಹೊರಡಿಸಿರುವ ಪಟ್ಟಿಯಲ್ಲಿ ಇರದಿದ್ದಲ್ಲಿ, ಅರ್ಹ ರೈತರು ಅಗತ್ಯ ದಾಖಲೆಗಳೊಂದಿಗೆ ಫಾರ್ಮ “ಸಿ’ ಭರ್ತಿ ಮಾಡುವ ಮೂಲಕ ಯೋಜನೆಗೆ ಹೆಸರು ನೋಂದಾಯಿಸಬಹುದು.

ಅರ್ಜಿಗಳ ಮಹಾಪೂರ: ಕಿಸಾನ್‌ ಸಮ್ಮಾನ್‌ ನಿಧಿ  ಯೋಜನೆಗೆ ಫೆ.20ರಿಂದ ರೈತರಿಂದ ಅರ್ಜಿ ಸ್ವೀಕರಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಕೃಷಿ ಇಲಾಖೆಯಡಿ ಅರ್ಜಿ ಸ್ವೀಕರಿಸಲಾಗುತ್ತಿದೆ. ಕೃಷಿ ಇಲಾಖೆ, ರೈತ ಸಂಪರ್ಕ ಕೇಂದ್ರಗಳು ಹಾಗೂ ಅಟಲ್‌ಜೀ ಜನಸ್ನೇಹಿ ಕೇಂದ್ರಗಳಲ್ಲಿ ಅರ್ಜಿ ಸ್ವೀಕರಿಸಲಾಗುತ್ತದೆ. ಅಲ್ಲದೆ, ರೈತರಿಗೆ‌ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪ್ರತಿ ಗ್ರಾಮದ ಆಯಕಟ್ಟಿನ ಸ್ಥಳಗಳಲ್ಲಿಯೂ ಕೂಡ ಅರ್ಜಿ ಸ್ವೀಕರಿಸಲು ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಕೃಷಿ ಇಲಾಖೆ ಯೋಜನೆಗೆ ವೇಗ ನೀಡಿದೆ. ಪರಿಣಾಮ, ಕೇವಲ 2 ದಿನದಲ್ಲಿ ಈಗಾಗಲೇ ರೈತರಿಂದ 2 ಸಾವಿರ ಅರ್ಜಿ ಸಲ್ಲಿಕೆಯಾಗಿವೆ. ನಿತ್ಯವೂ ಅರ್ಹ ರೈತರಿಂದ ಅರ್ಜಿಗಳ ಮಹಾಪೂರ ಹರಿದು ಬರುತ್ತಿದೆ.

ಅರ್ಹ ರೈತರ ಪಟ್ಟಿ ಪ್ರಕಟ: ಕೃಷಿ ಇಲಾಖೆ ಬಳಿ ಮಾಹಿತಿಯಿರುವ ಅರ್ಹ ಫಲಾನುಭವಿ ಸಣ್ಣ ರೈತರ ಪಟ್ಟಿಯನ್ನು ತಾಲೂಕಿನ ಆಯಾ ಗ್ರಾಪಂ ಬೋರ್ಡ್‌ ಗೆ ಅಂಟಿಸಲಾಗಿದೆ. ಪಟ್ಟಿಯಲ್ಲಿ ಹೆಸರಿರುವ ಸಣ್ಣ ರೈತರು ಹಾಗೂ ತಾವು ಸಣ್ಣ ರೈತರಿದ್ದೂ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದರೆ ಅಂಥವರು ಕೂಡ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಇಲಾಖೆ ಮನವಿ ಮಾಡಿಕೊಂಡಿದೆ.

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಗೆ ಅರ್ಜಿ ಸ್ವೀಕರಿಸಲಾಗುತ್ತಿದೆ. ಈಗಾಗಲೇ ಎರಡು ಸಾವಿರ ಅರ್ಜಿ ಬಂದಿವೆ. ಸಣ್ಣ ರೈತರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಕೃಷಿ ಇಲಾಖೆಯನ್ನು ಸಂಪರ್ಕಿಸಬಹುದು.
. ಪರಶುರಾಮ ಗಣಿ, 
ಸಹಾಯಕ ಕೃಷಿ ನಿರ್ದೇಶಕ, ಬೀಳಗಿ

ರವೀಂದ್ರ ಕಣವಿ

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.