ವಿಲನ್‌ ಸಿನಿಮಾಕ್ಕೆ ಬೇಕಿದ್ದರೆ ಕತ್ತರಿ ಹಾಕಲಿ 


Team Udayavani, Oct 20, 2018, 6:55 AM IST

sudeep.jpg

ಬೆಂಗಳೂರು/ಹರಿಹರ: ಗುರುವಾರ ತೆರೆಕಂಡ “ದಿ ವಿಲನ್‌’ ಚಿತ್ರದಲ್ಲಿ ನಾನು ಶಿವಣ್ಣನವರಿಗೆ ಹೊಡೆದು ಅವಮಾನಿಸಿರುವುದಾಗಿ ಶಿವಣ್ಣ ಆಭಿಮಾನಿಗಳು ತಪ್ಪು ಭಾವಿಸಿದ್ದಾರೆ. ಚಿತ್ರದಲ್ಲಿ ಅಂತಹ ಸನ್ನಿವೇಶವಿದ್ದು, ಅದಕ್ಕೆ ತಕ್ಕಂತೆ ಶಿವಣ್ಣ ಮತ್ತು ನಾನು ಅಭಿನಯಿಸಿದ್ದೇವೆ. ಚಿತ್ರದ ಸನ್ನಿವೇಶಗಳಲ್ಲಿ ಯಾರು ಯಾರನ್ನೇ ಹೊಡೆದರೂ ಅಭಿಮಾನಿಗಳು ತಪ್ಪು ತಿಳಿದುಕೊಳ್ಳಬಾರದು ಎಂದು ಚಿತ್ರನಟ ಕಿಚ್ಚ ಸುದೀಪ್‌ ಹೇಳಿದರು.

ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠಕ್ಕೆ ಶುಕ್ರವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಚಿತ್ರರಂಗದಲ್ಲಿ ಕಳೆದ ಮೂವತ್ತೆçದು ವರ್ಷಗಳಿಂದ ಇರುವ ಶಿವಣ್ಣನವರು ಸಿನಿಮಾ, ಚಿತ್ರಕಥೆ ಎಲ್ಲವನ್ನು ಪರಿಶೀಲಿಸಿ ಚಿತ್ರದಲ್ಲಿ ನಟಿಸಿದ್ದಾರೆ. ನಾನೂ ಸಹ ಚಿತ್ರದ ಸನ್ನಿವೇಶಕ್ಕೆ ತಕ್ಕಂತೆ ಅಭಿನಯಿಸಿದ್ದೇನೆ.ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಶಿವಣ್ಣ ಅಭಿಮಾನಿಗಳಿಗೆ ಬೇಸರವಾಗಿದ್ದರೆ ನಿರ್ದೇಶಕರ ಬಳಿ ಶಿವಣ್ಣನವರು ಮಾತನಾಡಿ ಆ ದೃಶ್ಯವನ್ನು ಚಿತ್ರದಿಂದ ತೆಗೆಸಲಿ ಎಂದರು.

ಮದಕರಿ ನಾಯಕರ ಬಗ್ಗೆ ಸಿನಿಮಾ ಮಾಡೋದು ಪಕ್ಕಾ: “ಗಂಡುಗಲಿ ವೀರ ಮದಕರಿ ನಾಯಕ’ ಸಿನಿಮಾದಲ್ಲಿ ನಟ ದರ್ಶನ್‌, ಮದಕರಿ ಪಾತ್ರ ಮಾಡುತ್ತಿರುವುದನ್ನು ಕಲಾವಿದನಾಗಿ ನಾನು ಸ್ವಾಗತಿಸುತ್ತೇನೆ.ನಾನು ಕೂಡ ಮದಕರಿ ನಾಯಕರ ಕುರಿತು ಸಿನಿಮಾ ಮಾಡುತ್ತೇನೆ. ನಮ್ಮ ಸಿನಿಮಾದ ಚಿತ್ರೀಕರಣ ಮಾರ್ಚ್‌ ಅಥವಾ ಏಪ್ರಿಲ್‌ ತಿಂಗಳಲ್ಲಿ ಪ್ರಾರಂಭವಾಗಲಿದೆ ಎಂದರು. ಇದೇ ವೇಳೆ, ಪ್ರಸನ್ನಾನಂದ ಶ್ರೀಗಳಿಗೆ ಸುದೀಪ್‌ ಮದಕರಿ ನಾಯಕರ ಭಾವಚಿತ್ರ ನೀಡಿ ಸತ್ಕರಿಸಿದರು.

ನರ್ತಕಿ ಎದುರು ಪ್ರತಿಭಟನೆ: ಈ ಮಧ್ಯೆ, ಶಿವರಾಜಕುಮಾರ್‌ ಮತ್ತು ಸುದೀಪ್‌ ಅಭಿನಯದ “ದಿ ವಿಲನ್‌’ ಚಿತ್ರ ಬಿಡುಗಡೆಯಾದ ಎಲ್ಲಾ ಕೇಂದ್ರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದ್ದು, ಮೊದಲ ದಿನವೇ ಸುಮಾರು 20 ಕೋಟಿ ರೂ.ಗಳಿಸಿದೆ. ಇದೊಂದು ದಾಖಲೆ ಎಂದು ವಿತರಕ ಜಾಕ್‌ ಮಂಜು ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಚಿತ್ರಮಂದಿರದ ಎದುರು ಅಭಿಮಾನಿಗಳು ಕುರಿ ಕಡಿದು, ಪೋಸ್ಟರ್‌ಗಳಿಗೆ ಸಮರ್ಪಣೆ ಮಾಡಿದರು. ಇದರ ನಡುವೆಯೇ, ಚಿತ್ರದಲ್ಲಿ ಶಿವರಾಜಕುಮಾರ್‌ ಅವರ ಪಾತ್ರಕ್ಕೆ ನಿರೀಕ್ಷಿತ ಮಟ್ಟದಲ್ಲಿ ನಿರ್ದೇಶಕ ಪ್ರೇಮ್‌ ಅವರು ಪ್ರಾಮುಖ್ಯತೆ ನೀಡಿಲ್ಲ, ಅವರ ಪಾತ್ರಕ್ಕೆ ಆದ್ಯತೆ ನೀಡದೆ ಅವರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ,ಶಿವರಾಜಕುಮಾರ್‌ ಅಭಿಮಾನಿಗಳು ಬೆಂಗಳೂರಿನ “ನರ್ತಕಿ’ ಚಿತ್ರಮಂದಿರದ ಎದುರು ಪ್ರತಿಭಟನೆ ನಡೆಸಿದರು. ನಿರ್ದೇಶಕ ಪ್ರೇಮ್‌ ವಿರುದ್ದ ಧಿಕ್ಕಾರ ಕೂಗಿದರು. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಈ ನಡುವೆ,ಪ್ರೇಮ್‌ ಕೂಡಲೇ ಕ್ಷಮೆಯಾಚಿಸಬೇಕು.
ಇಲ್ಲವಾದಲ್ಲಿ, ಶನಿವಾರ ನಿರ್ದೇಶಕ ಪ್ರೇಮ್‌ ಅವರ ಮನೆ ಮುಂದೆ ಪ್ರತಿಭಟಿಸುವುದಾಗಿ ಅಭಿಮಾನಿಗಳು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.