ಹಂಸಲೇಖ, ಅರುಂಧತಿ ನಾಗ್ಗೆ ಎನ್ಟಿಆರ್ ಪ್ರಶಸ್ತಿ
Team Udayavani, Jul 4, 2018, 11:49 AM IST
ಬೆಂಗಳೂರು: ಕರ್ನಾಟಕ ತೆಲುಗು ಅಕಾಡೆಮಿ ನೀಡುವ 2018ನೇ ಸಾಲಿನ ಡಾ.ಎನ್ಟಿಆರ್ ರಾಷ್ಟ್ರೀಯ ಪುರಸ್ಕಾರಕ್ಕೆ ಕನ್ನಡ ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಮತ್ತು ರಂಗಭೂಮಿ ಕಲಾವಿದೆ ಅರುಂಧತಿ ನಾಗ್ ಆಯ್ಕೆಯಾಗಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅಕಾಡೆಮಿಯ ಕಾರ್ಯಾಧ್ಯಕ್ಷ ಆರ್.ಉಮಾಪತಿ, ಎನ್ಟಿಆರ್ ಅವರ 96ನೇ ಜಯಂತಿ ಹಿನ್ನೆಲೆಯಲ್ಲಿ ರಂಗಭೂಮಿ ಮತ್ತು ಸಿನಿಮಾ ರಂಗದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.
ಜು. 6 ರಂದು ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕೇಂದ್ರ ಸಚಿವ ಸದಾನಂದಗೌಡ ಮತ್ತು ಮೇಯರ್ ಸಂಪತ್ರಾಜ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ಶಾಸಕ ಮುನಿರತ್ನ, ಕರ್ನಾಟಕ ತೆಲಗು -ಕನ್ನಡ ಅಕಾಡೆಮಿ ಅಧ್ಯಕ್ಷ ಆರ್.ವಿ.ಹರೀಶ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.