ಪುನೀತ್‌ ಬ್ಯಾನರ್‌ಗೆ ಶಶಾಂಕ್‌ ಸಿನಿಮಾ


Team Udayavani, Aug 6, 2017, 10:25 AM IST

punith-rajkukumar_agust.jpg

ಶಶಾಂಕ್‌ ನಿರ್ದೇಶಿಸಿದ ಕೊನೆಯ ಸಿನಿಮಾ “ಮುಂಗಾರು ಮಳೆ-2′. ಆ ಸಿನಿಮಾ ಬಂದು ಒಂದು ವರ್ಷವಾಗುತ್ತಾ ಬಂದಿದೆ. ಇಷ್ಟು ಸಮಯವಾದರೂ ಶಶಾಂಕ್‌ ಕಡೆಯಿಂದ ಯಾವುದೇ ಹೊಸ ಸಿನಿಮಾದ ಸುದ್ದಿ ಬಂದಿರಲಿಲ್ಲ. ಸಹಜವಾಗಿಯೇ ಅನೇಕರಿಗೆ ಒಂದು ಕುತೂಹಲವಿತ್ತು. ಶಶಾಂಕ್‌ ಮುಂದಿನ ಸಿನಿಮಾ ಯಾವುದು, ಯಾರು ಹೀರೋ ಎಂಬುದು. ಆದರೆ, ಶಶಾಂಕ್‌ ಮಾತ್ರ ಏನೂ ಮಾತನಾಡದೇ ತಮ್ಮ ಪಾಡಿಗೆ ಸ್ಕ್ರಿಪ್ಟ್ ಕೆಲಸದಲ್ಲಿ ಬಿಝಿಯಾಗಿದ್ದರು. ಈಗ ಶಶಾಂಕ್‌ ಮುಂದಿನ ಸಿನಿಮಾ ಯಾರ ಜೊತೆ ಎಂಬುದಕ್ಕೆ ಉತ್ತರ ಸಿಕ್ಕಿದೆ. 

ಹೌದು, ಶಶಾಂಕ್‌ ಮುಂದಿನ ಸಿನಿಮಾದಲ್ಲಿ ಪುನೀತ್‌ ರಾಜಕುಮಾರ್‌ ನಾಯಕರಾಗಿ ನಟಿಸುತ್ತಿದ್ದು, ಈ ಮೂಲಕ ಶಶಾಂಕ್‌ ಮತ್ತೂಬ್ಬ ಸ್ಟಾರ್‌ ನಟನ ಸಿನಿಮಾ ಮಾಡಿದಂತಾಗುತ್ತದೆ. ಸದ್ಯ ಶಶಾಂಕ್‌ ಕಥೆಯಲ್ಲಿ ತೊಡಗಿದ್ದು, ಚಿತ್ರ ಜನವರಿಯಲ್ಲಿ ಆರಂಭವಾಗಲಿದೆ. ಪುನೀತ್‌ ರಾಜಕುಮಾರ್‌ ಸದ್ಯ “ಅಂಜನಿಪುತ್ರ’ ಚಿತ್ರೀಕರಣದಲ್ಲಿ ಬಿಝಿ. ಆ ಸಿನಿಮಾ ಮುಗಿಸಿಕೊಂಡು ಪುನೀತ್‌ ಬೇರೊಂದು ಸಿನಿಮಾದಲ್ಲಿ ನಟಿಸಲಿದ್ದಾರೆ. ಅದು ಮುಗಿದ ನಂತರ ಶಶಾಂಕ್‌ ಸಿನಿಮಾ. ಹಾಗಾಗಿ, ಶಶಾಂಕ್‌ ಹಾಗೂ ಪುನೀತ್‌ ಕಾಂಬಿನೇಶನ್‌ನ ಸಿನಿಮಾ ಜನವರಿಗೆ ಸೆಟ್ಟೇರಲಿದೆ. 

ಈ ಚಿತ್ರದ ನಿರ್ಮಾಪಕರು ಯಾರು ಎಂಬ ಪ್ರಶ್ನೆ ಬರಬಹುದು. ಅದಕ್ಕೆ ಉತ್ತರ ಪುನೀತ್‌. ಹೌದು, ಈಗಾಗಲೇ ಪುನೀತ್‌ ರಾಜಕುಮಾರ್‌ ಅವರು “ಪಿಆರ್‌ಕೆ’ ಎಂಬ ಬ್ಯಾನರ್‌ ಹುಟ್ಟುಹಾಕಿದ್ದು ನಿಮಗೆ ಗೊತ್ತೇ ಇದೆ. ಈ ಸಂಸ್ಥೆಯ ಮೊದಲ ಚಿತ್ರವಾಗಿ “ಕವಲು ದಾರಿ’ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಎರಡನೆಯ ಚಿತ್ರವಾಗಿ, ಈ ಬ್ಯಾನರ್‌ನಡಿ ಶಶಾಂಕ್‌ ನಿರ್ದೇಶನದ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ ಪುನೀತ್‌.

ಈ ಮೂಲಕ ಪುನೀತ್‌ ಬ್ಯಾನರ್‌ನಲ್ಲಿ ಪುನೀತ್‌ ಅವರಿಗೆ ಸಿನಿಮಾ ಮಾಡುವ ಮೊದಲ ಅವಕಾಶ ಶಶಾಂಕ್‌ಗೆ ಸಿಕ್ಕಿದೆ. ಇದೊಂದು ಫ್ಯಾಮಿಲಿ ಡ್ರಾಮಾ ಆಗಿದ್ದು, ಸದ್ಯ ಶೀರ್ಷಿಕೆ, ನಾಯಕಿ, ತಾಂತ್ರಿಕ ವರ್ಗ ಯಾವುದೂ ಅಂತಿಮವಾಗಿಲ್ಲ. ಈ ಹಿಂದೆ ಶಶಾಂಕ್‌, ಉಪೇಂದ್ರ ಅವರಿಗೆ ಸಿನಿಮಾ ಮಾಡುತ್ತಾರೆನ್ನಲಾಗಿತ್ತು. ಹಾಗಾದರೆ ಆ ಪ್ರಾಜೆಕ್ಟ್ ಏನಾಯಿತು ಎಂದು ನೀವು ಕೇಳಬಹುದು. ಪುನೀತ್‌ ಸಿನಿಮಾ ಮುಗಿದ ನಂತರ ಶಶಾಂಕ್‌, ಉಪೇಂದ್ರ ಅವರ ಜೊತೆ ಸಿನಿಮಾ ಮಾಡಲಿದ್ದಾರೆ. ಈ ಸಿನಿಮಾ ಶಶಾಂಕ್‌ ಅವರ ಬ್ಯಾನರ್‌ನಲ್ಲೇ ತಯಾರಾಗಲಿದೆ. 

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.