ಗೆದ್ದ ಖುಷಿಯಲ್ಲಿ ಶಿವಣ್ಣ


Team Udayavani, Jan 11, 2017, 11:13 AM IST

Srikanta-(26).jpg

“ಎರಡು ದಿನ ಆತಂಕವಿತ್ತು. ಅದೀಗ ದೂರವಾಗಿದೆ. ಫ್ಯಾಮಿಲಿ ಸಮೇತ ಬಂದು ಚಿತ್ರ ನೋಡುತ್ತಿದ್ದಾರೆ. ಈ ಖುಷಿಯಲ್ಲಿ ಏನು ಮಾತಾಡಬೇಕೋ ಗೊತ್ತಾಗುತ್ತಿಲ್ಲ…’ – ಹೀಗೆ ನಾನ್‌ಸ್ಟಾಪ್‌ ಮಾತುಗಳಲ್ಲಿ ಹೇಳಿಕೊಂಡಿದ್ದು ನಿರ್ದೇಶಕ ಮಂಜು ಸ್ವರಾಜ್‌. ಅವರು ಹೇಳಿದ್ದು ಯಶಸ್ವಿ ಪ್ರದರ್ಶನ ಕಾಣುತ್ತಿರುವ “ಶ್ರೀಕಂಠ’ ಚಿತ್ರದ ಬಗ್ಗೆ. ನಿರ್ದೇಶಕ ಮಂಜು ಸ್ವರಾಜ್‌ ಚಿತ್ರದ ಗಳಿಕೆ ಬಗ್ಗೆ ಹೇಳಲಿಲ್ಲ. ಅದ್ಭುತ ಯಶಸ್ಸು ಕಾಣುತ್ತಿದೆ ಎಂದಷ್ಟೇ ಹೇಳಿ, ಶಿವರಾಜ್‌ಕುಮಾರ್‌ ಅವರ ಸಹಕಾರ, ಪ್ರೋತ್ಸಾಹ ಇರದಿದ್ದರೆ ಇಂಥದ್ದೊಂದು ಸಿನಿಮಾ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎನ್ನುತ್ತಾರೆ ಮಂಜು.

“ಚಿತ್ರದ ಹೆಸರು “ಶ್ರೀಕಂಠ’ ಅಂದಾಗ ಎಲ್ಲರಿಗೂ ಮಾಸ್‌ ಚಿತ್ರ ಅನಿಸಿತ್ತು. ಆದರೆ, ಇದೊಂದು ಕಂಪ್ಲೀಟ್‌ ಫ್ಯಾಮಿಲಿ ಸಿನಿಮಾ. ಶಿವರಾಜ್‌ಕುಮಾರ್‌ ಇರದಿದ್ದರೆ, ಈ ಸಿನಿಮಾ ಮಾಡಲು ಆಗುತ್ತಿರಲಿಲ್ಲ. ಒಬ್ಬ ಸೂಪರ್‌ಸ್ಟಾರ್‌ ಕಾಮನ್‌ ಮ್ಯಾನ್‌ ಆಗಿ ಕಾಣಿಸಿಕೊಳ್ಳುವುದೆಂದರೆ ಸುಲಭವಲ್ಲ. ಶಿವಣ್ಣ ಅವರ ಪ್ರೋತ್ಸಾಹವೇ ಸಿನಿಮಾ ಚೆನ್ನಾಗಿ ಬರಲು ಕಾರಣ. ಎಲ್ಲಾ ಕ್ರೆಡಿಟ್‌ ಅವರಿಗೇ ಹೋಗಬೇಕು. ಇನ್ನು, ನಾವು ಎಷ್ಟೇ ಟೆನನ್‌ನಲ್ಲಿದ್ದರೂ ಶಿವಣ್ಣ ಕೂಲ್‌ ಆಗಿ ಎಲ್ಲವನ್ನೂ ನಿಭಾಯಿಸುತ್ತಿದ್ದರು. ಟ್ರಾಫಿಕ್‌ ಇದ್ದರೂ, ಅವರೇ ನಿಂತು ಸಮಸ್ಯೆ ಬಗೆಹರಿಸುತ್ತಿದ್ದರು.

ಯಶವಂತಪುರದಲ್ಲಿರುವ ಸುಲಭ್‌ ಶೌಚಾಲಯದಲ್ಲಿ ಯಾವುದೇ ಮುಜುಗರ ಇಲ್ಲದೆ ಹೋಗಿ ಚಿತ್ರೀಕರಣಕ್ಕೆ ಸಹಕರಿಸಿದರು. ಇನ್ನೊಂದು ಗ್ರೇಟ್‌ ವಿಷಯವೆಂದರೆ, ವಿಜಯನಗರದಲ್ಲಿ ಭಿಕ್ಷುಕರು ಮಲಗುವ ಜಾಗದಲ್ಲಿ ರಾತ್ರಿ, ಅಲ್ಲೆ ಬಿದ್ದಿದ್ದ ಗೋಣಿ ಚೀಲ ಒದ್ದು ಮಲಗುವ ಸೀನ್‌ನಲ್ಲೂ ಕಾಣಿಸಿಕೊಂಡರು. ಅಲ್ಲೆಲ್ಲಾ ಕಸ ಬಿದ್ದಿದ್ದು, ಜಾಗ ಕೆಟ್ಟದ್ದಾಗಿದ್ದರೂ ಶಿವಣ್ಣ ಲೆಕ್ಕಿಸದೆ, ಸಿನಿಮಾ ಚೆನ್ನಾಗಿ ಬರಬೇಕು ಎಂಬ ಆಸೆಯಿಂದ ಒಬ್ಬ ನಟನಾಗಿ ಪರಿಪೂರ್ಣತೆಯಿಂದ ಕೆಲಸ ಮಾಡಿದ್ದಕ್ಕೆ ಈ ಗೆಲುವು ಸಿಗಲು ಕಾರಣ’ ಎಂಬುದು ಮಂಜು ಸ್ವರಾಜ್‌ ಅಭಿಪ್ರಾಯ.

ಶಿವರಾಜ್‌ಕುಮಾರ್‌ ಅವರಿಗೆ ವಿಮರ್ಶೆಗಳು ಚೆನ್ನಾಗಿ ಬಂದಿದ್ದನ್ನು ನೋಡಿ ಖುಷಿಯಾಯಿತಂತೆ. “ಒಂದು ಒಳ್ಳೇ ಕಥೆಗೆ ಸಿಕ್ಕ ಪ್ರತಿಫ‌ಲವಿದು. ಎಲ್ಲಾ ಕಡೆಯಿಂದಲೂ ಚಿತ್ರದ ಬಗ್ಗೆ ಒಳ್ಳೇ ಮಾತು ಕೇಳಿಬರುತ್ತಿವೆ. ನಾನೂ ಕಾಮನ್‌ ಮ್ಯಾನ್‌ ಆಗಿಯೇ ಸಿನಿಮಾ ನೋಡಿದೆ. ಮಂಜು ಇಡೀ ಕಥೆಯನ್ನು ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಬರುವ ಪ್ರತಿಯೊಂದು ಪಾತ್ರಗಳು ವಿಶೇಷ ಎನಿಸುತ್ತವೆ. ಸಮುದ್ರದ ಅಲೆಗಳಂತೆ ಎಮೋಷನ್ಸ್‌ ಹೃದಯಕ್ಕೆ ಬಡಿದು ಹೋಗುತ್ತವೆ. ಇಂಥದ್ದೊಂದು ಸಿನಿಮಾ ಕೊಟ್ಟ ಇಡೀ ಟೀಮ್‌ಗೆ ಥ್ಯಾಂಕ್ಸ್‌.

ಒಳ್ಳೇ ತಂಡ ಇದ್ದರೆ, ಇಂತಹ ಒಳ್ಳೇ ಸಿನಿಮಾಗಳು ಬರುತ್ತವೆ. ನಾನು ಪ್ರಯೋಗಕ್ಕೆ ಒಳಪಡದೆ ಸಹಜವಾಗಿ ಅಭಿನಯಿಸಿದ್ದೇನೆ. ಯಾಕೆಂದರೆ, ನಾನು ಸ್ಟಾರ್‌ ಎಂಬ ಭಾವನೆ ಇಟ್ಟುಕೊಂಡಿಲ್ಲ. ನಮ್ಮ ಫ್ಯಾಮಿಲಿಯಲ್ಲಿ ಹಾಗೆ ಬೆಳೆಸಿದ್ದಾರೆ. ಡಾ.ರಾಜ್‌ಕುಮಾರ್‌ ಮಗ ಅನ್ನುವುದಕ್ಕಿಂತ ಮುತ್ತುರಾಜ್‌ ಮಗನಾಗಿ ಬೆಳೆದೆ. ಹಾಗಾಗಿ ಅದು ಸಾಧ್ಯವಾಗಿದೆ’ ಎನ್ನುತ್ತಾರೆ ಶಿವಣ್ಣ. ಮುಂದಿನ ದಿನಗಳಲ್ಲಿ ಲಂಡನ್‌, ಯುಎಸ್‌ ಮತ್ತು ಯುಎಇ ದೇಶಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಚನೆ ನಿರ್ಮಾಪಕ ಮನು ಗೌಡಗಿದೆ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.