‘ಲೀಡರ್‌’ ಉದಯವಾಣಿ ವೆಬ್ ಸೈಟ್ ನಲ್ಲಿ ಟ್ರೇಲರ್ ರಿಲೀಸ್


Team Udayavani, Jan 11, 2017, 11:34 AM IST

Leader-(1).jpg

ಶಿವರಾಜಕುಮಾರ್‌ ಅಭಿನಯದ “ಲೀಡರ್‌’ ಚಿತ್ರದ ಪ್ರಚಾರ ಕೆಲಸವನ್ನು ಚಿತ್ರತಂಡ ಶುರು ಮಾಡಿರಲಿಲ್ಲ. ಅದಕ್ಕೆ ಕಾರಣ “ಶ್ರೀಕಂಠ’. ಶಿವರಾಜಕುಮಾರ್‌ ಅಭಿನಯದ “ಶ್ರೀಕಂಠ’ ಚಿತ್ರದ ಬಿಡುಗಡೆ ಜನವರಿ ಆರಕ್ಕೆ ನಿಗದಿಯಾಗಿತ್ತು. ಈಗ ಚಿತ್ರ ಬಿಡುಗಡೆಯಾಗಿರುವುದರಿಂದ, “ಲೀಡರ್‌’ ಚಿತ್ರತಂಡದವರು ಚಿತ್ರದ ಪ್ರಚಾರ ಕೆಲಸವನ್ನು ಶುರು ಮಾಡಿದ್ದಾರೆ. ಇದರ ಮೊದಲ ಹಂತವಾಗಿ “ಲೀಡರ್‌’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಲಿದೆ. ಟ್ರೇಲರ್‌ ಬಿಡುಗಡೆಯು ಜನವರಿ 13ರ ಶುಕ್ರವಾರದಂದು ನಿಗದಿಯಾಗಿದ್ದು, ಅಂದು ಮೊಟ್ಟ ಮೊದಲ ಬಾರಿಗೆ ಉದಯವಾಣಿ ಡಾಟ್‌ಕಾಮ್‌ ಮೂಲಕ ಬಿಡುಗಡೆಯಾಗಲಿದೆ.

ಈ ಟ್ರೇಲರ್‌ನ ವಿಶೇಷವೆಂದರೆ, ಈ ಟ್ರೇಲರ್‌ ಸಂಪೂರ್ಣ ಶಿವಮಯವಾಗಿರುವುದು. ಅಂದರೆ ಶಿವರಾಜಕುಮಾರ್‌ಮಯವಾಗಿರುವುದು. ಇಲ್ಲಿ ಅವರ ಲುಕ್‌, ಖದರ್‌, ಸ್ಟೈಲ್‌ ಎಲ್ಲವೂ ಪರಿಚಯಿಸಬೇಕೆಂಬುದು ಚಿತ್ರತಂಡದ ಉದ್ದೇಶ. ಅದೇ ಕಾರಣಕ್ಕೆ ಶಿವರಾಜಕುಮಾರ್‌ ಅವರ ಎಕ್ಸ್‌ಕ್ಲೂಸಿವ್‌ ಟ್ರೇಲರ್‌ ಬಿಡುಗಡೆ ಮಾಡಲಾಗುತ್ತದೆ. ಅಂದಹಾಗೆ, “ಲೀಡರ್‌’ ಚಿತ್ರದ ಶೇ 70ರಷ್ಟು ಚಿತ್ರೀಕರಣ ಮುಗಿದಿದೆ. ಮಾತು, ಹಾಡು, ಫೈಟು ಎಲ್ಲವೂ ಮುಗಿದಿದೆ. ಇನ್ನು ಚಿತ್ರತಂಡವು ಕಾಶ್ಮೀರದಲ್ಲಿ ಚಿತ್ರೀಕರಣ ಮಾಡುವುದಕ್ಕೆ ಉದ್ದೇಶಿಸಿತ್ತು. ಈಗ ಚಿತ್ರೀಕರಣ ಮನಾಲಿಗೆ ಶಿಫ್ಟ್ ಆಗಲಿದೆಯಂತೆ.

ಅದರ ಜೊತೆಗೆ ಒಂದು ಹಾಡನ್ನು ಖತಾರ್‌ನಲ್ಲಿ ಚಿತ್ರೀಕರಿಸಬೇಕು ಎಂಬ ಯೋಚನೆಯೂ ಇದೆ. ಹೀಗೆ ಖತಾರ್‌ ಮತ್ತು ಮನಾಲಿ ಚಿತ್ರೀಕರಣವು ಫೆಬ್ರವರಿ 20ರ ಹೊತ್ತಿಗೆ ಮುಗಿಯಲಿದೆ. “ಲೀಡರ್‌’ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇದೆ. “ಲೀಡರ್‌’ ಚಿತ್ರದಲ್ಲಿ ಪ್ರಣೀತಾ ನಾಯಕಿಯಾಗಿದ್ದಾರೆ. ಇನ್ನು ಶರ್ಮಿಳಾ ಮಾಂಡ್ರೆ, ಆಶಿಕಾ, ವಂಶಿಕೃಷ್ಣ, ಚಿ. ಗುರುದತ್‌, ವಿಜಯ್‌ ರಾಘವೇಂದ್ರ, ಗುರು ಜಗ್ಗೇಶ್‌ ಹಾಗೂ ಯೋಗಿ ನಟಿಸುತ್ತಿದ್ದಾರೆ. ಇನ್ನು ತಂತ್ರಜ್ಞರ ಬಗ್ಗೆ ಹೇಳುವುದಾದರೆ, ಈ ಚಿತ್ರವನ್ನು ಸಹನಾ ಮೂರ್ತಿ ನಿರ್ದೇಶಿಸುತ್ತಿದ್ದಾರೆ.

ಕಥೆ, ಚಿತ್ರಕಥೆ ಸಹ ಅವರದ್ದೇ. ಎರಡು ವರ್ಷಗಳ ಹಿಂದೆ ಬಿಡುಗಡೆಯಾದ “ರೋಸ್‌’ ಎಂಬ ಅಜೇಯ್‌ ರಾವ್‌ ಹಾಗೂ ಶ್ರಾವ್ಯ ಅಭಿನಯದ ಚಿತ್ರವನ್ನು ಅವರು ನಿರ್ದೇಶಿಸಿದ್ದರು. ಈಗ ಈ ಚಿತ್ರದ ಮೂಲಕ ಅವರು ನಿರ್ದೇಶನಕ್ಕೆ ವಾಪಸ್ಸಾಗುತ್ತಿದ್ದಾರೆ. ಆ ಚಿತ್ರವನ್ನು ನಿರ್ಮಿಸಿದ್ದ ತರುಣ್‌ ಶಿವಪ್ಪ ಈ ಚಿತ್ರದ ನಿರ್ಮಾಪಕರು. ಅವರೊಂದಿಗೆ ಹಾರ್ದಿಕ್‌ ಶೆಟ್ಟಿ ಸಹ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇನ್ನು “ರೋಸ್‌’ಗೆ ಛಾಯಾಗ್ರಹಣ ಮಾಡಿದ್ದ ಗುರುಪ್ರಶಾಂತ್‌ ರೈ, ಸಂಗೀತ ನೀಡಿದ್ದ ವೀರ್‌ ಸಮರ್ಥ್ ಎಲ್ಲರೂ ಈ ಚಿತ್ರದಲ್ಲೂ ಮುಂದುವರೆದಿದ್ದಾರೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.