ಇವರು ಯಾರು ಬಲ್ಲಿರೇನು?


Team Udayavani, Mar 25, 2017, 11:11 AM IST

mamatha-shenoy.jpg

ಮಮತಾ ಶೆಣೈ ನೆನಪಿದೆಯಾ? ಹಳಬರಿಗೂ ಅಷ್ಟೇ, ಬಹಳಷ್ಟು ಜನರಿಗೆ ಆ ಹೆಸರು ಮರೆತೇ ಹೋಗಿರಬಹುದು. ಏಕೆಂದರೆ, ಮಮತಾ ಶೆಣೈ ಅಭಿನಯದ ಕೊನೆಯ ಚಿತ್ರ ಬಿಡುಗಡೆಯಾಗಿಯೇ 35 ವರ್ಷಗಳಾಗಿವೆ. ಇನ್ನು ಆಕೆ ಚಿತ್ರರಂಗದಿಂದ ದೂರವಾಗಿಯೂ ಸಹ ಅಷ್ಟೇ ವರ್ಷಗಳಾಗಿವೆ. ಹಾಗಾಗಿ ಹೆಸರು ನೆನಪಿನ ಬುತ್ತಿಯಿಂದ ಮರೆಯಾಗಿದ್ದರೆ ಆಶ್ಚರ್ಯವಿಲ್ಲ. ಮಮತಾ ಶಣೈ ಅವರು ಒಂದು ಕಾಲದಲ್ಲಿ ಕನ್ನಡದಲ್ಲಿ ಜನಪ್ರಿಯ ನಟಿ. 56 ಚಿತ್ರಗಳಲ್ಲಿ ನಟಿಸಿದವರು.

1978ರಲ್ಲಿ ಬಿಡುಗಡೆಯಾದ “ಅಪರೂಪದ ಅತಿಥಿಗಳು’ ಚಿತ್ರದಲ್ಲಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದ ಅವರು, ನಂತರದ ದಿನಗಳಲ್ಲಿ “ಭಾವ ತರಂಗ’, “ಕುಂಕುಮ ರಕ್ಷೆ’, “ಮಧುಚಂದ್ರ’, “ಅಪರಾಧಿ’, “ಮಂಜಿನ ತೆರೆ’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದರು. ಡಾ. ರಾಜಕುಮಾರ್‌ ಅವರೊಂದಿಗೆ “ಆಪರೇಷನ್‌ ಡೈಮೆಂಡ್‌ ರಾಕೆಟ್‌’, “ತಾಯಿಗೆ ತಕ್ಕ ಮಗ’ ಮತ್ತು “ಚಲಿಸುವ ಮೋಡಗಳು’ ಚಿತ್ರದಲ್ಲಿ ನಟಿಸಿದವರು.

“ತಾಯಿಗೆ ತಕ್ಕ ಮಗ’ ಚಿತ್ರದಲ್ಲಿ ಡಾ. ರಾಜ್‌ ಮತ್ತು ಮಮತಾ ಶೆಣೈ ಅಭಿನಯದ “ಎಂಥಾ ಸೊಗಸು ಮಗುವಿನ ಮನಸು …’ ಹಾಡು ಇಂದಿಗೂ ಜನಪ್ರಿಯ. ಅಂಥ ನಟಿ 35 ವರ್ಷಗಳ ನಂತರ ಮತ್ತೆ ಮಾಧ್ಯಮದವರೆದುರು ಶುಕ್ರವಾರ ಕಾಣಿಸಿಕೊಂಡರು. ಅದೂ “ಮದುವೆ ದಿಬ್ಬಣ’ ಎಂಬ ಚಿತ್ರದ ಮುಹೂರ್ತ ಸಮಾರಂಭದಲ್ಲಿ. ಈ ಚಿತ್ರದಲ್ಲಿ ಮಮತಾ ಅವರು ನಟಿಸುತ್ತಿಲ್ಲ. ಆದರೆ, ತಮ್ಮ ಸಹೋದರನ ಮಗಳಿಗೆ ಅವಕಾಶ ಕೇಳುವ ಕಾರಣದಿಂದಾಗಿ ಅವರು ಚಿತ್ರದ ಮುಹೂರ್ತಕ್ಕೆ ಬಂದಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನನ್ನ ಕೊನೆಯ ಸಿನಿಮಾ “ಚಲಿಸುವ ಮೋಡಗಳು’. ಆ ನಂತರ ಮದುವೆಯಾಯಿತು. ಮದುವೆಯಾದ ಮೇಲೆ ಯಾವುದೇ ಸಿನಿಮಾದಲ್ಲಿ ನಟಿಸಲಿಲ್ಲ. ಅಷ್ಟೇ ಅಲ್ಲ, ಚಿತ್ರರಂಗದವರ ಸಂಪರ್ಕವೇ ಇರಲಿಲ್ಲ. ಹಾಗಂತ ನಾನು ಎಲ್ಲೋ ಹೋಗಿರಲಿಲ್ಲ. ಇದೇ ಬೆಂಗಳೂರಿನಲ್ಲಿದ್ದೆ. ಆದರೆ, ಚಿತ್ರರಂಗದಿಂದ ದೂರ ಇದ್ದೆ ಅಷ್ಟೇ. ತಮ್ಮನ ಮಗಳಿಗೆ ನಟಿಸುವ ಇಚ್ಛೆ ಇದೆ. ನಿರ್ದೇಶಕ ಉಮೇಶ್‌ ಅವರಿಗೆ ಪರಿಚಯಿಸುವ ದೃಷ್ಟಿಯಿಂದ ಬಂದೆ’ ಎನ್ನುತ್ತಾರೆ ಅವರು.

ಹಾಗಾದರೆ, ಈ ಚಿತ್ರದಲ್ಲಿ ಅವರೂ ನಟಿಸುತ್ತಾರಾ? ಈ ಚಿತ್ರದ ಮೂಲಕ ಮತ್ತೆ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಾರಾ ಎಂಬ ಪ್ರಶ್ನೆಗಳು ಬರಬಹುದು. ಆ ಬಗ್ಗೆ ಅವರಿಗೆ ಸದ್ಯಕ್ಕೆ ಯೋಚನೆಯಿಲ್ಲ. “ಕಂಬ್ಯಾಕ್‌ ಬಗ್ಗೆ ಯೋಚನೆ ಮಾಡಿಲ್ಲ. ಒಳ್ಳೆಯ ಅವಕಾಶ ಸಿಕ್ಕರೆ ನೋಡಬಹುದು. ನಾನು ಈ ಹಿಂದೆ ನಟಿಸಿದ ಚಿತ್ರಗಳಲ್ಲಿ, ನಾಲ್ಕು ಜನ ನೋಡೋ ಹಾಗೆ ಮಾಡಿದ್ದೆ. ಹಾಗಾಗಿ ಒಳ್ಳೆಯ ಅವಕಾಶಗಳು ಸಿಕ್ಕರೆ ನಟಿಸುವ ಆಸೆ ಇದೆ’ ಎನ್ನುತ್ತಾರೆ ಅವರು. 

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.