ಇವರು ಯಾರು ಬಲ್ಲಿರೇನು?


Team Udayavani, Mar 25, 2017, 11:11 AM IST

mamatha-shenoy.jpg

ಮಮತಾ ಶೆಣೈ ನೆನಪಿದೆಯಾ? ಹಳಬರಿಗೂ ಅಷ್ಟೇ, ಬಹಳಷ್ಟು ಜನರಿಗೆ ಆ ಹೆಸರು ಮರೆತೇ ಹೋಗಿರಬಹುದು. ಏಕೆಂದರೆ, ಮಮತಾ ಶೆಣೈ ಅಭಿನಯದ ಕೊನೆಯ ಚಿತ್ರ ಬಿಡುಗಡೆಯಾಗಿಯೇ 35 ವರ್ಷಗಳಾಗಿವೆ. ಇನ್ನು ಆಕೆ ಚಿತ್ರರಂಗದಿಂದ ದೂರವಾಗಿಯೂ ಸಹ ಅಷ್ಟೇ ವರ್ಷಗಳಾಗಿವೆ. ಹಾಗಾಗಿ ಹೆಸರು ನೆನಪಿನ ಬುತ್ತಿಯಿಂದ ಮರೆಯಾಗಿದ್ದರೆ ಆಶ್ಚರ್ಯವಿಲ್ಲ. ಮಮತಾ ಶಣೈ ಅವರು ಒಂದು ಕಾಲದಲ್ಲಿ ಕನ್ನಡದಲ್ಲಿ ಜನಪ್ರಿಯ ನಟಿ. 56 ಚಿತ್ರಗಳಲ್ಲಿ ನಟಿಸಿದವರು.

1978ರಲ್ಲಿ ಬಿಡುಗಡೆಯಾದ “ಅಪರೂಪದ ಅತಿಥಿಗಳು’ ಚಿತ್ರದಲ್ಲಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದ ಅವರು, ನಂತರದ ದಿನಗಳಲ್ಲಿ “ಭಾವ ತರಂಗ’, “ಕುಂಕುಮ ರಕ್ಷೆ’, “ಮಧುಚಂದ್ರ’, “ಅಪರಾಧಿ’, “ಮಂಜಿನ ತೆರೆ’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದರು. ಡಾ. ರಾಜಕುಮಾರ್‌ ಅವರೊಂದಿಗೆ “ಆಪರೇಷನ್‌ ಡೈಮೆಂಡ್‌ ರಾಕೆಟ್‌’, “ತಾಯಿಗೆ ತಕ್ಕ ಮಗ’ ಮತ್ತು “ಚಲಿಸುವ ಮೋಡಗಳು’ ಚಿತ್ರದಲ್ಲಿ ನಟಿಸಿದವರು.

“ತಾಯಿಗೆ ತಕ್ಕ ಮಗ’ ಚಿತ್ರದಲ್ಲಿ ಡಾ. ರಾಜ್‌ ಮತ್ತು ಮಮತಾ ಶೆಣೈ ಅಭಿನಯದ “ಎಂಥಾ ಸೊಗಸು ಮಗುವಿನ ಮನಸು …’ ಹಾಡು ಇಂದಿಗೂ ಜನಪ್ರಿಯ. ಅಂಥ ನಟಿ 35 ವರ್ಷಗಳ ನಂತರ ಮತ್ತೆ ಮಾಧ್ಯಮದವರೆದುರು ಶುಕ್ರವಾರ ಕಾಣಿಸಿಕೊಂಡರು. ಅದೂ “ಮದುವೆ ದಿಬ್ಬಣ’ ಎಂಬ ಚಿತ್ರದ ಮುಹೂರ್ತ ಸಮಾರಂಭದಲ್ಲಿ. ಈ ಚಿತ್ರದಲ್ಲಿ ಮಮತಾ ಅವರು ನಟಿಸುತ್ತಿಲ್ಲ. ಆದರೆ, ತಮ್ಮ ಸಹೋದರನ ಮಗಳಿಗೆ ಅವಕಾಶ ಕೇಳುವ ಕಾರಣದಿಂದಾಗಿ ಅವರು ಚಿತ್ರದ ಮುಹೂರ್ತಕ್ಕೆ ಬಂದಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನನ್ನ ಕೊನೆಯ ಸಿನಿಮಾ “ಚಲಿಸುವ ಮೋಡಗಳು’. ಆ ನಂತರ ಮದುವೆಯಾಯಿತು. ಮದುವೆಯಾದ ಮೇಲೆ ಯಾವುದೇ ಸಿನಿಮಾದಲ್ಲಿ ನಟಿಸಲಿಲ್ಲ. ಅಷ್ಟೇ ಅಲ್ಲ, ಚಿತ್ರರಂಗದವರ ಸಂಪರ್ಕವೇ ಇರಲಿಲ್ಲ. ಹಾಗಂತ ನಾನು ಎಲ್ಲೋ ಹೋಗಿರಲಿಲ್ಲ. ಇದೇ ಬೆಂಗಳೂರಿನಲ್ಲಿದ್ದೆ. ಆದರೆ, ಚಿತ್ರರಂಗದಿಂದ ದೂರ ಇದ್ದೆ ಅಷ್ಟೇ. ತಮ್ಮನ ಮಗಳಿಗೆ ನಟಿಸುವ ಇಚ್ಛೆ ಇದೆ. ನಿರ್ದೇಶಕ ಉಮೇಶ್‌ ಅವರಿಗೆ ಪರಿಚಯಿಸುವ ದೃಷ್ಟಿಯಿಂದ ಬಂದೆ’ ಎನ್ನುತ್ತಾರೆ ಅವರು.

ಹಾಗಾದರೆ, ಈ ಚಿತ್ರದಲ್ಲಿ ಅವರೂ ನಟಿಸುತ್ತಾರಾ? ಈ ಚಿತ್ರದ ಮೂಲಕ ಮತ್ತೆ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಾರಾ ಎಂಬ ಪ್ರಶ್ನೆಗಳು ಬರಬಹುದು. ಆ ಬಗ್ಗೆ ಅವರಿಗೆ ಸದ್ಯಕ್ಕೆ ಯೋಚನೆಯಿಲ್ಲ. “ಕಂಬ್ಯಾಕ್‌ ಬಗ್ಗೆ ಯೋಚನೆ ಮಾಡಿಲ್ಲ. ಒಳ್ಳೆಯ ಅವಕಾಶ ಸಿಕ್ಕರೆ ನೋಡಬಹುದು. ನಾನು ಈ ಹಿಂದೆ ನಟಿಸಿದ ಚಿತ್ರಗಳಲ್ಲಿ, ನಾಲ್ಕು ಜನ ನೋಡೋ ಹಾಗೆ ಮಾಡಿದ್ದೆ. ಹಾಗಾಗಿ ಒಳ್ಳೆಯ ಅವಕಾಶಗಳು ಸಿಕ್ಕರೆ ನಟಿಸುವ ಆಸೆ ಇದೆ’ ಎನ್ನುತ್ತಾರೆ ಅವರು. 

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.