ಕಾಶೀನಾಥ್‌ ಎಂಬ ಓಳ್‌ ಮುನಿಸ್ವಾಮಿ


Team Udayavani, Apr 19, 2017, 11:36 AM IST

IMG-20170418-WA0015.jpg

“ಜಲ್ಸಾ’ ಸಿನಿಮಾ ಮೂಲಕ ಹೀರೋ ಆಗಿದ್ದ ನಿರಂಜನ್‌ ಒಡೆಯರ್‌ ಈಗ ಇನ್ನೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಮೊದಲ ಸಿನಿಮಾ ಬಳಿಕ ಸಾಕಷ್ಟು ಕಥೆ ಕೇಳಿದ್ದ ಅವರಿಗೆ, ಈಗ ಒಂದು ಕಥೆ ಇಷ್ಟವಾಗಿ ಕ್ಯಾಮೆರಾ ಮುಂದೆ ನಿಲ್ಲೋಕೆ ರೆಡಿಯಾಗಿದ್ದಾರೆ. ಅದು ಆನಂದ ಪ್ರಿಯ ನಿರ್ದೇಶನದ ಸಿನಿಮಾ. ಆ ಚಿತ್ರಕ್ಕೆ ನಿರ್ದೇಶಕರು “ಓಳ್‌ ಮುನಿಸ್ವಾಮಿ’ ಎಂದು ನಾಮಕರಣ ಮಾಡಿದ್ದಾರೆ.

ಚಿತ್ರದ ಶೀರ್ಷಿಕೆ ಕೇಳಿದ ಮೇಲೆ ಇದೊಂದು ಪಕ್ಕಾ ಹಾಸ್ಯಮಯ ಸಿನಿಮಾ ಅಂತ ಹೇಳಬೇಕಿಲ್ಲ. ಇನ್ನೊಂದು ವಿಷಯವೆಂದರೆ, ಈ ಸಿನಿಮಾದಲ್ಲಿ ಹಿರಿಯ ನಟ ಕಾಶೀನಾಥ್‌ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಇದು ಅವರ 50ನೇ ಸಿನಿಮಾ ಅನ್ನೋದು ವಿಶೇಷ. ಕಾಶೀನಾಥ್‌ ಇದ್ದಾರೆ ಅಂದಮೇಲೆ ಇದು ಪಕ್ಕಾ ಮನರಂಜನಾತ್ಮಕ ಸಿನಿಮಾ ಅಂತ ಪ್ರತ್ಯೇಕವಾಗಿ ಹೇಳಬೇಕಿಲ್ಲ. 

ಅಂದಹಾಗೆ, ಈ ಚಿತ್ರ ಸಮೂಹ ಟಾಕೀಸ್‌ ಬ್ಯಾನರ್‌ನಡಿ ನಿರ್ಮಾಣ ಮಾಡಲಾಗುತ್ತಿದೆ. “ಕ್ರ್ಯಾಕ್‌’ ಚಿತ್ರ ನಿರ್ಮಿಸಿರುವ ಸಮೂಹ ಟಾಕೀಸ್‌ ಈ ಚಿತ್ರಕ್ಕೂ ಹಣ ಹಾಕುತ್ತಿದೆ. ಹಾಗಾದರೆ ಇಲ್ಲಿ “ಓಳ್‌ ಮುನಿಸ್ವಾಮಿ’ ಯಾರು? ಈ ಪ್ರಶ್ನೆಗೆ ಉತ್ತರ ಕೊಡುವ ನಿರ್ದೇಶಕ ಆನಂದಪ್ರಿಯ, ಅದು ಕಾಶೀನಾಥ್‌ ಎನ್ನುತ್ತಾರೆ. ಕಾಶೀನಾಥ್‌ ಅವರನ್ನಿಟ್ಟುಕೊಂಡು ಒಂದು ಒಳ್ಳೆಯ ಕಥೆ ಮಾಡಬೇಕು ಅಂತೆನಿಸಿತ್ತು. ಆಗ ಹುಟ್ಟುಕೊಂಡಿದ್ದೇ ಈ ಕಥೆ.

ಕಾಶೀನಾಥ್‌ ಬಳಿ ಹೋಗಿ, ಇಂಥದ್ದೊಂದು ಕಥೆ ಪಾತ್ರ ಇದೆ ಅಂತ ಹೇಳಿದ ಕೂಡಲೇ, ಖುಷಿಯಿಂದ ಒಪ್ಪಿದ್ದಾರೆ. ಇದು ಅವರ 50ನೇ ಸಿನಿಮಾ ಅನ್ನೋದು ಇನ್ನೊಂದು ಖುಷಿಯ ವಿಷಯ. ಅವರನ್ನು ನಿರ್ದೇಶಿಸುತ್ತಿರುವುದು ನನ್ನ ಅದೃಷ್ಟ ಎನ್ನುವ ಅವರು, “ಇದೊಂದು ಸಮಾಜದ ವಿಡಂಬನಾತ್ಮಕ ಕಥೆ. ಭಾವನೆಗಳ ತೊಳಲಾಟ ಸೇರಿದಂತೆ ದೇವ್ರು ದಿಂಡಿರು, ನಂಬಿಕೆ, ಪ್ರೀತಿ ಮತ್ತು ಬದುಕು ಇದೆಲ್ಲದರ ಹೂರಣವೇ “ಓಳ್‌ ಮುನಿಸ್ವಾಮಿ’ ಎಂದು ವಿವರ ಕೊಡುತ್ತಾರೆ.

ಸಮಾಜದಲ್ಲಿ ಸರಿಯಾದ ಕೆಲಸ ಮಾಡಲು ಹೊರಟರೆ, ನೂರೆಂಟು ಪ್ರಶ್ನೆಗಳು ಎದುರಾಗುತ್ತವೆ. ಅದೇ ತಪ್ಪು ಕೆಲಸ ನಡೆಯುತ್ತಿದ್ದರೆ ಪ್ರಶ್ನಿಸಲು ಯಾರೂ ಮುಂದಾಗಲ್ಲ. ಸಮಾಜ ಇಂದು ಬದುಕನ್ನು ನೋಡುವ ದೃಷ್ಟಿಕೋನ ಬದಲಾಗಿದೆ. ಅದೇ ವಿಷಯಗಳು ಇಲ್ಲಿ ಹೈಲೆಟ್‌ ಆಗಿರಲಿವೆ. ಇಡೀ ಕಥೆ ಹಾಸ್ಯಮಯವಾಗಿ ಸಾಗಲಿದೆ ಎನ್ನುವ ಆನಂದಪ್ರಿಯ, ನಿರ್ದೇಶನದ ಜತೆಗೆ ಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯದ ಜವಾಬ್ದಾರಿ ಹೊತ್ತಿದ್ದಾರೆ.

ಈಗಾಗಲೇ ಸ್ಕ್ರಿಪ್ಟ್ ಪೂಜೆ ನಡೆದಿದ್ದು, ಮೇ 3 ರಿಂದ 30 ದಿನಗಳ ಕಾಲ ಮೂಡಿಗೆರೆ, ಚಿಕ್ಕಮಗಳೂರು, ದೇವರಮನೆ ಕಾಡು ಸೇರಿದಂತೆ ಇತರೆ ಸ್ಥಳಗಳಲ್ಲಿ ಚಿತ್ರೀಕರಣ ನಡೆಯಲಿದೆ. ಅಖೀಲಾ ಎಂಬ ಹೊಸ ಹುಡುಗಿ ನಾಯಕಿಯಾಗಿದ್ದಾರೆ. ನಾಗಾರ್ಜುನ್‌ ಕ್ಯಾಮೆರಾ ಹಿಡಿದರೆ, ಸತೀಶ್‌ ಮೂರು ಹಾಡುಗಳಿಗೆ ಸಂಗೀತ ನೀಡಲಿದ್ದಾರೆ.

ಟಾಪ್ ನ್ಯೂಸ್

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.