ಲತೋತ್ಸವ ನಿಖೀಲ್‌ ಸಿನಿಮಾಕ್ಕಿಲ್ಲ ಎನ್ನಾರೈ ಬೆಡಗಿ


Team Udayavani, Apr 19, 2017, 11:36 AM IST

latha-hegde.jpg

ಶಿರಸಿ ಮೂಲದ ನ್ಯೂಜಿಲೆಂಡ್‌ನ‌ ಹುಡುಗಿ ಲತಾ ಹೆಗಡೆ ಕನ್ನಡಕ್ಕೆ ಬಂದಿರುವ ವಿಚಾರ ನಿಮಗೆ ಗೊತ್ತಿರಬಹುದು. ಮಹೇಶ್‌ ಬಾಬು ನಿರ್ದೇಶನದ “ಆ ದಿನಗಳು’ ಚೇತನ್‌ ನಾಯಕರಾಗಿರುವ ಚಿತ್ರದ ಮೂಲಕ ಕನ್ನಡಕ್ಕೆ ಎಂಟ್ರಿಕೊಟ್ಟಿರುವ ಲತಾ ಹೆಗಡೆ ಈಗ ಕನ್ನಡದಲ್ಲಿ ಬಿಝಿಯಾಗುತ್ತಿದ್ದಾರೆ. ಮೊದಲ ಚಿತ್ರ ಮುಗಿಯುವ ಮುನ್ನವೇ ದಿಗಂತ್‌ ಜೊತೆ “ಉತ್ಸವ್‌’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಚಿತ್ರರಂಗಕ್ಕೆ ಬಂದ ಕೆಲವೇ ತಿಂಗಳಲ್ಲಿ ಒಳ್ಳೆಯ ಅವಕಾಶಗಳು ಸಿಕ್ಕ ಬಗ್ಗೆ ಲತಾ ಹೆಗಡೆಖುಷಿಯಾಗಿದ್ದಾರೆ.

“ನಿಜಕ್ಕೂ ಖುಷಿಯಾಗುತ್ತಿದೆ. ಕನ್ನಡದಲ್ಲಿ ಚಿತ್ರರಂಗದಿಂದ ನನಗೆ ಒಳ್ಳೆಯ ಅವಕಾಶಗಳು ಬರುತ್ತಿವೆ. ಒಳ್ಳೆಯ ಸಿನಿಮಾಗಳ, ಪಾತ್ರಗಳ ಮೂಲಕ ಇಲ್ಲಿ ನೆಲೆ ನಿಲ್ಲುವ ಆಸೆ ಇದೆ’ ಎಂಬುದು ಲತಾ ಹೆಗಡೆ ಮಾತು. ಅಂದಹಾಗೆ, ನಿಖೀಲ್‌ ಕುಮಾರಸ್ವಾಮಿಯ ಎರಡನೇ ಸಿನಿಮಾಕ್ಕೆ ಲತಾ ನಾಯಕಿಯಾಗುತ್ತಾರೆಂಬ ಸುದ್ದಿ ಓಡಾಡುತ್ತಿತ್ತು. ಈ ಸುದ್ದಿಯನ್ನು ಲತಾ ಅಲ್ಲಗಳೆಯುತ್ತಾರೆ.  “ನಾನು ಆ ಚಿತ್ರದ ಆಡಿಷನ್‌ಗೆ ಹೋಗಿದ್ದು ನಿಜ.

ಆದರೆ ಡೇಟ್ಸ್‌ ಸಮಸ್ಯೆಯಿಂದ ನನಗೆ ಆ ಸಿನಿಮಾದಲ್ಲಿ ನಟಿಸಲು ಆಗುತ್ತಿಲ್ಲ. ಆ ಚಿತ್ರ ಮೇಯಿಂದ ಶುರುವಾಗುತ್ತದೆ. ಆದರೆ, ನಾನು ನಟಿಸುತ್ತಿರುವ “ಉತ್ಸವ್‌’ ಚಿತ್ರದ ಚಿತ್ರೀಕರಣ ಇನ್ನೂ ನಡೆಯುತ್ತಿರುವುದರಿಂದ ನನಗೆ ಬೇರೆ ಯಾವ ಸಿನಿಮಾವನ್ನು ಒಪ್ಪಿಕೊಳ್ಳಲಾಗುತ್ತಿಲ್ಲ’ ಎನ್ನುವುದು ಲತಾ ಹೆಗಡೆಮಾತು.  ಲತಾ ಹೆಗಡೆ ಮೂಲತಃ ಶಿರಸಿಯವರು. ಆದರೆ ಅವರ ಕುಟುಂಬ ಲತಾ ಹೆಗಡೆ ಆರನೇ ಕ್ಲಾಸಿನಲ್ಲಿರುವಾಗ ನ್ಯೂಜಿಲೆಂಡ್‌ಗೆ ಶಿಫ್ಟ್ ಆಗಿದೆ.

ಅಲ್ಲಿಗೆ ಲತಾ ಓದಿದ್ದು, ಬೆಳೆದಿದ್ದು ಎಲ್ಲವೂ ನ್ಯೂಜಿಲೆಂಡ್‌ನ‌ಲ್ಲಿ ಎಂದು ಪ್ರತ್ಯೇಕವಾಗಿ ಅಗತ್ಯವಿಲ್ಲ. ಲತಾ ಕುಟುಂಬ ವಿದೇಶದಲ್ಲಿದ್ದರೂ ಕನ್ನಡ ಪ್ರೀತಿ ಬಿಟ್ಟಿರಲಿಲ್ಲವಂತೆ. ಹಾಗಾಗಿಯೇ ಮನೆಯಲ್ಲಿ ಕನ್ನಡ ಮಾತನಾಡುತ್ತಾ, ಮಗಳಿಗೂ ಕನ್ನಡದ ಬಗ್ಗೆ ಹೇಳಿಕೊಟ್ಟಿದ್ದಾರೆ. ಹಾಗಾಗಿಯೇ ನ್ಯೂಜಿಲೆಂಡ್‌ನಿಂದ ಬಂದ ಲತಾ ಸುಲಲಿತವಾಗಿ ಕನ್ನಡ ಮಾತನಾಡುತ್ತಾರೆ. ಜೊತೆಗೆ ಮಗಳು ಭಾರತಕ್ಕೆ ಹೋಗಬೇಕು, ಅಲ್ಲಿ ಏನಾದರೂ ಸಾಧನೆ ಮಾಡಬೇಕು.

ಅದರಲ್ಲೂ ಕನ್ನಡ ನೆಲದಲ್ಲಿ ಆಕೆಯ ಸಾಧನೆಗೊಂದು ವೇದಿಕೆ ಸಿಗಬೇಕೆಂಬ ಆಸೆ ಇತ್ತಂತೆ. ಅದು ಈಗ ಈಡೇರಿದೆ. ಮೊದಲು ತೆಲುಗು, ತಮಿಳಿನಲ್ಲಿ ಅವಕಾಶ ಸಿಕ್ಕರೂ ಈಗ ಕನ್ನಡದಲ್ಲಿ ಮಗಳು ಬಿಝಿಯಾಗುತ್ತಿರುವ ಬಗ್ಗೆ ಖುಷಿ ಇದೆಯಂತೆ. “ಅವರಿಗೆ ನಾನು ಭಾರತಕ್ಕೆ ಬರಬೇಕೆಂಬ ಆಸೆ ಇತ್ತು. ಅದರಲ್ಲೂ ಕನ್ನಡ ನೆಲದಲ್ಲಿ ಗುರುತಿಸಿಕೊಳ್ಳಬೇಕೆಂಬ ಆಸೆ ಇತ್ತು. ನನಗೆ ಕನ್ನಡ ಸಿನಿಮಾದಲ್ಲಿ ಅವಕಾಶ ಸಿಕ್ಕಾಗ ಅವರು ತುಂಬಾ ಖುಷಿಪಟ್ಟರು.

ಒಳ್ಳೊಳ್ಳೆ ಪಾತ್ರಗಳ ಮೂಲಕ ನಾನು ಚಿತ್ರರಂಗದಲ್ಲಿ ನೆಲೆನಿಲ್ಲಬೇಕೆಂಬ ಆಸೆ ಅವರಿಗಿದೆ’ ಎನ್ನುತ್ತಾರೆ ಲತಾ. ಅಂದಹಾಗೆ, ನಿರ್ದೇಶಕ ಮಹೇಶ್‌ ಬಾಬು ಲಾಂಚ್‌ ಮಾಡಿದ ನಾಯಕಿಯರು ಬಿಝಿಯಾಗುತ್ತಾರೆ, ಚಿತ್ರರಂಗದಲ್ಲಿ ನೆಲೆನಿಲ್ಲುತ್ತಾರೆ ಎಂಬ ಮಾತಿದೆ. ಅದಕ್ಕೆ ಸರಿಯಾಗಿ ಒಂದಷ್ಟು ನಾಯಕಿಯರು ಕೂಡಾ ಬಿಝಿಯಾಗಿದ್ದಾರೆ. ಈ ವಿಷಯ ಲತಾ ಕಿವಿಗೂ ಬಿದ್ದಿದೆ. ಲತಾ ಕೂಡಾ ಆಶಾ ಭಾವನೆಯೊಂದಿಗೆ ಎದುರು ನೋಡುತ್ತಿದ್ದಾರೆ.

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.