ನೋಡ ನೋಡುತಾ ವಿಸ್ಮಯ


Team Udayavani, May 17, 2017, 11:09 AM IST

arjun-sarja.jpg

ಅರ್ಜುನ್‌ ಸರ್ಜಾ ಬಹುಭಾಷಾ ನಟ. ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ನಟಿಸಿ ತಮ್ಮದೇ ಆದ ಅಭಿಮಾನಿ ವರ್ಗ ಹೊಂದಿದ್ದಾರೆ. ಇಂತಿಪ್ಪ ಅರ್ಜುನ್‌ ಸರ್ಜಾ ನೋಡ ನೋಡುತ್ತಿದ್ದಂತೆ 150 ಸಿನಿಮಾಗಳನ್ನು ಪೂರೈಸಿದ್ದಾರೆ. ಹಾಗಾದರೆ ಅರ್ಜುನ್‌ ಸರ್ಜಾ ಅವರ 150ನೇ ಸಿನಿಮಾ ಯಾವುದು ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ಈ ಪ್ರಶ್ನೆಗೆ ಉತ್ತರ “ವಿಸ್ಮಯ’.

ಹೌದು, ಈಗಾಗಲೇ ಬಹುತೇಕ ಚಿತ್ರೀಕರಣ “ವಿಸ್ಮಯ’ ಅರ್ಜುನ್‌ ಸರ್ಜಾ ಅವರ 150ನೇ ಸಿನಿಮಾ ಎಂಬುದು ವಿಶೇಷ. ಈ ಚಿತ್ರ ತಮಿಳು ಹಾಗೂ ಕನ್ನಡದಲ್ಲಿ ತಯಾರಾಗುತ್ತಿದ್ದು, ತಮಿಳಿನಲ್ಲಿ “ನಿಬುನನ್‌’ ಎಂಬ ಶೀರ್ಷಿಕೆ ಇಡಲಾಗಿದೆ. ಅರುಣ್‌ ವೈದ್ಯನಾಥನ್‌ ಈ ಚಿತ್ರದ ನಿರ್ದೇಶಕರು.

ಈ ಹಿಂದೆ ಮಲಯಾಳಂನಲ್ಲಿ ಮೋಹನ್‌ ಲಾಲ್‌ ನಾಯಕರಾಗಿದ್ದ “ಪೆರುಚಾಯಿ’ಎಂಬ ಸಿನಿಮಾ ಮಾಡಿದ್ದ ಅರುಣ್‌, ಈಗ ಅರ್ಜುನ್‌ ಸರ್ಜಾ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಪಕ್ಕಾ ಆ್ಯಕ್ಷನ್‌ ಚಿತ್ರವಾದ “ವಿಸ್ಮಯ’ ಕಳೆದ ವರ್ಷದ ನವೆಂಬರ್‌ನಲ್ಲಿ ಆರಂಭವಾಗಿತ್ತು.  ಈಗ ಅಂತಿಮ ಹಂತಕ್ಕೆ ಬಂದು ನಿಂತಿದೆ.

ಚಿತ್ರೀಕರಣವನ್ನು ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೇ ನಡೆಸಲಾಗಿದೆ. ಚಿತ್ರದಲ್ಲಿ ಶ್ರುತಿ ಹರಿಹರನ್‌ ನಾಯಕಿಯಾಗಿ ನಟಿಸುತ್ತಿದ್ದು, ತಮಿಳಿನ ವರಲಕ್ಷ್ಮೀ ಕೂಡಾ ನಟಿಸುತ್ತಿದ್ದಾರೆ. ಉಳಿದಂತೆ ಸುಧಾರಾಣಿ, ಸುಹಾಸಿನಿ, ಸುಮನ್‌ ಮುಂತಾದ ಕಲಾವಿದರು ಈ ಚಿತ್ರದ ತಾರಾಗಣದಲ್ಲಿದ್ದಾರೆ. ತಮಿಳಿನ ಖ್ಯಾತ ನಟ ಪ್ರಸನ್ನ ಮುಖ್ಯ ಪಾತ್ರವೊಂದರಲ್ಲಿ ನಟಿಸಿದ್ದಾರೆ. 

ಚಿತ್ರದ ವಿಶೇಷ ಪಾತ್ರವೊಂದರಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟರೊಬ್ಬರು ನಟಿಸುತ್ತಿದ್ದು, ಅವರಿಲ್ಲಿ ವಿಲನ್‌ ಆಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಆ ನಟ ಯಾರು ಎಂಬುದನ್ನು ಚಿತ್ರತಂಡ ಗೌಪ್ಯವಾಗಿಟ್ಟಿದೆ. ಈ ನಡುವೆಯೇ ಅರ್ಜುನ್‌ ಸರ್ಜಾ ನಿರ್ದೇಶನದ “ಪ್ರೇಮ ಬರಹ’ ಚಿತ್ರ ಕೂಡಾ ಚಿತ್ರೀಕರಣದಲ್ಲಿದೆ. ಈ ಚಿತ್ರದ ಮೂಲಕ ಅರ್ಜುನ್‌ ಪುತ್ರಿ ಐಶ್ವರ್ಯಾ ಕನ್ನಡ ಚಿತ್ರರಂಗಕ್ಕೆ ನಾಯಕಿಯಾಗಿ ಎಂಟ್ರಿಕೊಡುತ್ತಿದ್ದಾರೆ.

ಟಾಪ್ ನ್ಯೂಸ್

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.