ಬಕಾಸುರ ಟೈಟಲ್‌ ಕೊಟ್ಟಿದ್ದು ರವಿಚಂದ್ರನ್‌! 


Team Udayavani, Jun 15, 2017, 12:34 PM IST

56.jpg

ರವಿಚಂದ್ರನ್‌ ಅವರು “ಬಕಾಸುರ’ ಎಂಬ ಸಿನಿಮಾದಲ್ಲಿ ನಟಿಸುತ್ತಿರೋದು ನಿಮಗೆ ಗೊತ್ತೇ ಇದೆ. ಈಗಾಗಲೇ 30 ದಿನಗಳ ಚಿತ್ರೀಕರಣ ಮುಗಿದೇ ಹೋಗಿದೆ. “ಬಕಾಸುರ’ ಎಂಬ ಟೈಟಲ್‌ ಇಟ್ಟ ದಿನದಿಂದಲೂ ಅನೇಕರಿಗೆ ಒಂದು ಕುತೂಹಲವಿತ್ತು. ರವಿಚಂದ್ರನ್‌ ಸಿನಿಮಾಕ್ಕೆ “ಬಕಾಸುರ’ ಎಂಬ ಟೈಟಲ್‌ ಇಡಲು ಕಾರಣವೇನು, ಯಾವ ತರಹದ ಪಾತ್ರ ಮಾಡುತ್ತಿರಬಹುದು ಎಂಬ ಪ್ರಶ್ನೆ ಅವರ ಅಭಿಮಾನಿಗಳಲ್ಲಿತ್ತು. ಆದರೆ, “ಬಕಾಸುರ’ ಎಂಬ ಟೈಟಲ್‌ ಕೊಟ್ಟಿದ್ದೇ ರವಿಚಂದ್ರನ್‌ ಎಂಬ ವಿಚಾರ ಅನೇಕರಿಗೆ ಗೊತ್ತಿರಲಿಕ್ಕಿಲ್ಲ. ನಿರ್ದೇಶಕ ನವನೀತ್‌ ಕಥೆ ಸಿದ್ಧಪಡಿಸಿ, ರವಿಚಂದ್ರನ್‌ ಅವರು ಕೂಡಾ ನಟಿಸಿಲು ಒಪ್ಪಿಕೊಂಡ ಮೇಲೆ ಚಿತ್ರಕ್ಕೆ ಯಾವ ಟೈಟಲ್‌ ಇಡೋದು ಎಂದು ತಲೆಕೆಡಿಸಿಕೊಂಡಿದ್ದರು. ಕಥೆ ಕೇಳಿದ ರವಿಚಂದ್ರನ್‌ಗೆ ಹೊಳೆದಿದ್ದು “ಬಕಾಸುರ ಫಾರ್‌ ಮನಿ’. ಹೌದು, ಅನೇಕರು ಚಿತ್ರದ ಶೀರ್ಷಿಕೆ “ಬಕಾಸುರ’ ಎಂದುಕೊಂಡಿದ್ದಾರೆ. ಸಿನಿಮಾದ ಪೂರ್ಣ ಶೀರ್ಷಿಕೆ “ಬಕಾಸುರ ಫಾರ್‌ ಮನಿ’. ಆದರೆ, ಫಾರ್‌ ಮನಿ ಅನ್ನೋದನ್ನು ಟ್ಯಾಗ್‌ಲೈನ್‌ ರೀತಿ ಬಳಸಲಾಗಿದೆ. ಹಾಗಾಗಿ, “ಬಕಾಸುರ’ ಅಷ್ಟೇ ಹೈಲೈಟ್‌ ಆಗಿದೆ. 

ಚಿತ್ರದಲ್ಲಿ ರವಿಚಂದ್ರನ್‌ ಅವರು ದೊಡ್ಡ ಬಿಝಿನೆಸ್‌ ಮ್ಯಾನ್‌ ಆಗಿ ಕಾಣಿಸಿಕೊಂಡಿದ್ದಾರೆ. ಇಡೀ ಸಿನಿಮಾದಲ್ಲಿ ಅವರ ಲುಕ್‌ ಸ್ಟೈಲಿಶ್‌ ಆಗಿ ಮೂಡಿಬರಲಿದೆಯಂತೆ. ರವಿಚಂದ್ರನ್‌ ಜೊತೆ ಕೆಲಸ ಮಾಡಿ ನಿರ್ದೇಶಕ ನವನೀತ್‌ ಖುಷಿಯಾಗಿದ್ದಾರೆ. “ಹೊಸಬರನ್ನು ಅವರು ಪ್ರೋತ್ಸಾಹಿಸುವ ರೀತಿ ನಿಜಕ್ಕೂ ಖುಷಿಯಾಗುತ್ತದೆ. ಸಿನಿಮಾ ಕೂಡಾ ನಾವಂದುಕೊಂಡಂತೆಯೇ ಚೆನ್ನಾಗಿ ಮೂಡಿಬರುತ್ತಿದೆ’ ಅನ್ನೋದು ನವನೀತ್‌ ಮಾತು. 

ಚಿತ್ರದಲ್ಲಿ ಆರ್‌ಜೆ ರೋಹಿತ್‌ ಕೂಡಾ ನಟಿಸಿದ್ದಾರೆ. ಇಲ್ಲಿ ಲಾಯರ್‌ ಆಗಿ ಕಾಣಿಸಿಕೊಂಡಿರುವ ರೋಹಿತ್‌ಗೆ ಕಾವ್ಯಾ ನಾಯಕಿ. ಮಕರಂದ್‌ ದೇಶಪಾಂಡೆ ಕೂಡಾ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಶಶಿಕುಮಾರ್‌ ಕೂಡಾ “ಬಕಾಸುರ’ದಲ್ಲಿ ಗೆಸ್ಟ್‌ ಅಪಿಯರೆನ್ಸ್‌ ಮಾಡಿದ್ದಾರೆ. ನವನೀತ್‌ ಅವರಿಗೆ ಮೊದಲ ಚಿತ್ರಕ್ಕಿಂತ ಇದು ತುಂಬಾ ಭಿನ್ನವಾದ ಸಿನಿಮಾವಂತೆ. ಅದು ಹಾರರ್‌ ಸಿನಿಮಾವಾದರೆ, ಇದು ಪಕ್ಕಾ ಥ್ರಿಲ್ಲರ್‌ ಕಂ ಫ್ಯಾಮಿಲಿ ಎಂಟರ್‌ಟೈನರ್‌ ಸಿನಿಮಾವಂತೆ.  ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು,  ಚಿತ್ರೀಕರಣವಾದ ಭಾಗದ ಎಡಿಟಿಂಗ್‌ ಕೂಡಾ ನಡೆದಿದೆ. ಆಗಸ್ಟ್‌ನಲ್ಲಿ ಕೊನೆಯಲ್ಲಿ ಚಿತ್ರ ಬಿಡುಗಡೆ ಮಾಡುವ ಯೋಚನೆ ಕೂಡಾ ಚಿತ್ರತಂಡಕ್ಕಿದೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.