ಐಟಿ ಮಂದಿಯ ಕಿಕ್‌ ಸಾಂಗ್‌


Team Udayavani, Jul 17, 2017, 10:56 AM IST

MCB-(1).jpg

ಈ ಕಲರ್‌ಫ‌ುಲ್‌ ಜಗತ್ತೇ ಹಾಗೆ. ಇಲ್ಲಿ ಪ್ರತಿಭೆ ಇದ್ದರೆ, ಯಾರು ಏನು ಬೇಕಾದರೂ ಆಗಬಹುದು. ಈಗಾಗಲೇ ಅದು ಸಾಬೀತಾಗಿದೆ ಕೂಡ. ಆ ಸಾಲಿಗೆ ಐಟಿ ಕಂಪೆನಿಯ ಪ್ರೊಡಕ್ಷನ್‌ನಲ್ಲಿ ಕೆಲಸ ಮಾಡುತ್ತಿದ್ದ ಹುಡುಗನೊಬ್ಬ ಸೇರಿದ್ದಾನೆ. ಅವನೊಳಗಿರುವ ಪ್ರತಿಭೆ ಮೆಚ್ಚಿಕೊಂಡು ಎಂಎನ್‌ಸಿ ಐಟಿ ಕಂಪೆನಿ ಮಂದಿ ಸೇರಿ, ಆ ಹುಡುಗನಿಗೊಂದು ವೇದಿಕೆ ಕಲ್ಪಿಸಿಕೊಟ್ಟಿದ್ದಾರೆ. ಎಂಸಿಬಿ (ಮಿಡಲ್‌ ಕ್ಲಾಸ್‌ ಬಾಯ್ಸ) ಎಂಬ ವೀಡಿಯೋ ಆಲ್ಬಂ ಮಾಡುವ ಮೂಲಕ ಅವನೊಳಗಿನ ಪ್ರತಿಭೆಗೆ ಸಾಥ್‌ ಕೊಟ್ಟಿದ್ದಾರೆ.

ಅಂದಹಾಗೆ, ಆ ಹುಡುಗನ ಹೆಸರು ಟೋನಿ. ಸಾಹಿತ್ಯ ಬರೆದು, ಆ ವೀಡಿಯೋ ಆಲ್ಬಂನಲ್ಲಿ ಸ್ಟೆಪ್‌ ಹಾಕಿರುವ ಟೋನಿ ಟ್ರೀನ್ಸ್‌ನನ್ನು ಕರೆದುಕೊಂಡು ಪತ್ರಕರ್ತರ ಮುಂದೆ ಬಂದಿದ್ದರು ಐಟಿ ಮಂದಿ. “ಐಟಿಬಿಟಿಯಿಂದ ಕನ್ನಡ ದೂರವಾಗುತ್ತಿದೆ ಎಂಬ ಮಾತಿದೆ. ಅದನ್ನು ಸುಳ್ಳು ಮಾಡೋಕೆ ನಾವು ನಮ್ಮಲ್ಲಿ ಪ್ರತಿ ವರ್ಷ ಕನ್ನಡ ಹಬ್ಬ ಮಾಡುತ್ತಿದ್ದೇವೆ. ಎಲ್ಲರಲ್ಲೂ ಐಟಿ ಮಂದಿ ಕನ್ನಡ ಮಾತಾಡಲ್ಲ ಎಂಬ ಭಾವನೆ ಇದೆ. ಅದೂ ಕೂಡ ಸುಳ್ಳು.

ಕನ್ನಡ ಬರದವರಿಗೆ ಕನ್ನಡ ಕಲಿಸೋ ಪ್ರಯತ್ನವೂ ನಡೆಯುತ್ತಿದೆ. ಇಲ್ಲಿ ಟೋನಿ ಟ್ರೀನ್ಸ್‌ಗೆ ವೇದಿಕೆ ಕಲ್ಪಿಸಲು ಕಾರಣ, ನಮ್ಮ ಕಂಪೆನಿಯಲ್ಲಿ ಆರು ವರ್ಷಗಳಿಂದಲೂ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುತ್ತ ಬಂದಿದ್ದೇವೆ. ಒಮ್ಮೆ, ಆ ಕಾರ್ಯಕ್ರಮದಲ್ಲಿ ಟೋನಿ ಟ್ರೀನ್ಸ್‌ಗೊಂದು  ಅವಕಾಶ ಕೊಟ್ಟಿದ್ದೆವು. ಚೆನ್ನಾಗಿ ಡ್ಯಾನ್ಸ್‌ ಮಾಡಿ, ಎಲ್ಲರ ಮನ ಗೆದ್ದಿದ್ದ. ಮರು ವರ್ಷ ಕಾರ್ಯಕ್ರಮ ಇದೆ ಅಂದಾಗ, ಎಷ್ಟೋ ಜನ ಟೋನಿ ಟ್ರೀನ್ಸ್‌ ಡ್ಯಾನ್ಸ್‌ ಇದೆಯಾ ಅಂತ ಕೇಳ್ಳೋರು.

ಅವನಲ್ಲಿ ಪ್ರತಿಭೆ ಇದೆ ಅಂತ ಗೊತ್ತಾಗಿ, ಅವನಿಗೊಂದು ವೇದಿಕೆ ಕಲ್ಪಿಸಲು ಈ ಆಲ್ಬಂ ಮಾಡಲಾಗಿದೆ. ಈ ಆಲ್ಬಂನಿಂದ ಯಾವುದೇ ರಿಟರ್ನ್ಸ್ ಬೇಡ ಅಂದರು ನಟೇಶ್‌. ಟೋನಿ ಟ್ರೀನ್ಸ್‌ಗೆ ನಾಚಿಕೆ ಸ್ವಭಾವ ಜಾಸ್ತಿಯಂತೆ. “ನನ್ನಲ್ಲಿ ಕಲೆ ಇತ್ತು. ಕನಸೂ ಇತ್ತು. ಆದರೆ, ಯಾರಲ್ಲೂ ಅವಕಾಶ ಕೇಳುತ್ತಿರಲಿಲ್ಲ. ಎಲ್ಲೋ ಇದ್ದವನು ನಾನು, ನನ್ನೊಳಗಿನ ಪ್ರತಿಭೆ ನೋಡಿ. ಎಂಎನ್‌ಸಿ ಕಂಪೆನಿಯವರು ಅವಕಾಶ ಕಲ್ಪಿಸಿದ್ದಾರೆ. ಒಳ್ಳೇ ಟೀಮ್‌ನಿಂದಾಗಿ, ಈ ಆಲ್ಬಂ ಮಾಡಲು ಸಾಧ್ಯವಾಗಿದೆ. ಶಶಾಂಕ್‌ ಶೇಷಗಿರಿ ಅವರು ಚೆನ್ನಾಗಿ ಸಂಗೀತ ಸಂಯೋಜಿಸಿದ್ದಾರೆ’ ಅಂದರು ಟೋನಿ.

ಸಂಗೀತ ನಿರ್ದೇಶಕ ಶಶಾಂಕ್‌ ಶೇಷಗಿರಿ ಅವರಿಗೆ ಇದು ಮೊದಲ ಸಂಗೀತದ ವೀಡಿಯೋ ಆಲ್ಬಂ ಅಂತೆ. ಗೆಳೆಯ ಚರಣ್‌ನಿಂದ ಈ ಅವಕಾಶ ಸಿಕ್ಕಿತು. ಟೋನಿ ಒಳ್ಳೇ ಹಾಡು ಬರೆದಿದ್ದರು. ಟ್ಯೂನ್‌ ಕೂಡ ಹಾಕಿದ್ದರು. ಅದನ್ನು ಇಟ್ಟುಕೊಂಡು ಈಗಿನ ಟ್ರೆಂಡ್‌ಗೆ ತಕ್ಕಂತೆ ಸಂಗೀತ ನೀಡಿದ್ದೇನೆ ಅಂದರು ಶಶಾಂಕ್‌. ನಿರ್ದೇಶಕ ಚಿರಂಜೀವಿ, ಆಲ್ಬಂ ನಾಯಕಿ ಪೂಜಾ, ಕ್ಯಾಮೆರಾಮೆನ್‌ ಉದಯ್‌ ನೀಲ್‌, ಸಂಗಮೇಶ್‌, ಅವಿನಾಶ್‌ ಶ್ರೀಮುರಳಿ, ವಿಜೀತ್‌,ಶೈಲಾ ಇತರರು ಇದ್ದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.