ಬೆಂಗಳೂರಲ್ಲಿ ಮಲಯಾಳಂ ಚಿತ್ರೋತ್ಸವ!


Team Udayavani, Aug 10, 2017, 2:43 PM IST

Malayalam-Festival-1.jpg

ಒಂದೆರೆಡು ತಿಂಗಳಗಳ ಹಿಂದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಅಕಾಡೆಮಿಯ ವತಿಯಿಂದ ಬೆಂಗಳೂರಿನಲ್ಲಿ ಬಂಗಾಲಿ ಚಿತ್ರೋತ್ಸವವನ್ನು ಆಯೋಜಿಸಲಾಗಿತ್ತು. ಈಗ ಇನ್ನೊಂದು ಭಾಷೆಯ ಜನಪ್ರಿಯ ಚಿತ್ರಗಳನ್ನು ಅಕಾಡೆಮಿ, ಬೆಂಗಳೂರಿಗರಿಗೆ ತೋರಿಸುವುದಕ್ಕೆ ಸಜ್ಜಾಗಿದೆ. ನಾಳೆಯಿಂದ ಮೂರು ದಿನಗಳ ಕಾಲ ಅಕಾಡೆಮಿಯು ಮಲಯಾಳಂ ಚಿತ್ರೋತ್ಸವವನ್ನು ಆಯೋಜಿಸಿದ್ದು, ಈ ಚಿತ್ರೋತ್ಸವದಲ್ಲಿ ಒಟ್ಟು ಎಂಟು ಚಿತ್ರಗಳು ಪ್ರದರ್ಶನವಾಗಲಿವೆ.

ಈ ಚಿತ್ರೋತ್ಸವ ನಾಳೆ (ಆಗಸ್ಟ್‌ 11) ಪ್ರಾರಂಭವಾಗಲಿದೆ. ಚಿತ್ರೋವವನ್ನು ಉದ್ಘಾಟಿಸಲಿಕ್ಕೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಬರಲಿದ್ದಾರೆ. ಜೊತೆಗೆ ವಾರ್ತಾ ಇಲಾಖೆಯ ನಿರ್ದೇಶಕ ಡಾ.ಪಿ.ಎಸ್‌. ಹರ್ಷ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.
ಗೋವಿಂದು ಹಾಜರಿದ್ದರೆ, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಪಿ. ಶೇಷಾದ್ರಿ ಅವರು ಈ ಚಿತ್ರೋತ್ಸವದ ಬಗ್ಗೆ ಮಾತನಾಡಲಿದ್ದಾರೆ. 

ಇನ್ನು ಮಲಯಾಳಂ ನಿರ್ದೇಶಕರಾದ ದಿಲೀಶ್‌ ಪೋತನ್‌, ವಿಧು ವಿನ್ಸೆಂಟ್‌, ನಟರಾದ ವಿನಯ್‌ ಫೋರ್ಟ್‌ ಮುಂತಾದವರು ಅಂದು ಭಾಗವಹಿಸಲಿದ್ದಾರೆ. ಉದ್ಘಾಟನಾ ಸಮಾರಂಭದ ನಂತರ ಉದ್ಘಾ ಟನಾ ಚಿತ್ರವಾಗಿ “ಮ್ಯಾನ್‌ ಹೋಲ್‌’ ಪ್ರದರ್ಶನವಾಗಲಿದೆ. ನಂತರ ಎರಡು ದಿನಗಳ ಕಾಲ ಫ‌ಹಾದ್‌ ಫಾಸಿಲ್‌ ಅಭಿನಯದ “ಮಹೇಶಂಟೆ ಪ್ರತೀಕಾರಂ’, “ಆರಡಿ’, “ಕಿಸ್ಮತ್‌’, “ಗಾಡ್‌ ಸೇ’, “ಕಮ್ಮಾಟಿ ಪಾದಂ’ ಮುಂತಾದ ಚಿತ್ರಗಳು ಪ್ರದರ್ಶನವಾಗಲಿದೆ.

ಆಗಸ್ಟ್‌ 11-13ರವರೆಗೂ ಬೆಂಗಳೂರಿನಲ್ಲಿ ಬಂಗಾಲಿ ಚಿತ್ರೋತ್ಸವವು ನಡೆದರೆ, ಅದಕ್ಕೆ ಪ್ರತಿಯಾಗಿ ತಿರುವನಂತಪುರದಲ್ಲಿ ಆಗಸ್ಟ್‌ 26ರಿಂದ 28ರವರೆಗೂ ಮೂರು ದಿನಗಳ ಕಾಲ ಕನ್ನಡ ಚಿತ್ರೋತ್ಸವ ನಡೆಯಲಿದೆ. ಈ ಚಿತ್ರೋತ್ಸವದಲ್ಲಿ ಇತ್ತೀಚಿನ ಕೆಲವು ಜನಪ್ರಿಯ ಚಿತ್ರಗಳಾದ “ಯೂ ಟರ್ನ್’, “ತಿಥಿ’, “ಕಿರಿಕ್‌ ಪಾರ್ಟಿ’, “ಹರಿಕಥಾ ಪ್ರಸಂಗ’, “ಮಾರಿಕೊಂಡವರು’, “ನಾನು ಅವನಲ್ಲ ಅವಳು’ ಮತ್ತು “ರಾಮ ರಾಮಾ ರೇ’ ಚಿತ್ರಗಳು ಪ್ರದರ್ಶನವಾಗಲಿವೆ. 

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.