ದಯವಿಟ್ಟು ಗಮನಿಸಿ: ಭಾವನಾ ರಾವ್‌ ಮತ್ತೆ ಸುದ್ದಿಯಲ್ಲಿದ್ದಾರೆ!


Team Udayavani, Oct 11, 2017, 6:24 PM IST

Bhavana-Rao-(9).jpg

ಕೆಲವೊಮ್ಮೆ ಅದೃಷ್ಟ ಬಂದರೆ ಒಂದೇ ಸಲ ಹುಡುಕ್ಕೊಂಡ್‌ ಬರುತ್ತೆ. ಅದರಲ್ಲೂ ಸಿನಿಮಾ ನಟ, ನಟಿಯರ ವಿಷಯದಲ್ಲಂತೂ ತುಸು ಹೆಚ್ಚು ಅನ್ನಬಹುದು. ಇಲ್ಲೀಗ ಹೇಳಹೊರಟಿರುವ ವಿಷಯ ನಟಿ ಭಾವನಾ ರಾವ್‌ ಅವರದು. ಯಾವ ಭಾವನಾ ರಾವ್‌ ಅಂತ ಕನ್‌ಫ್ಯೂಷನ್‌ ಆಗೋದು ಬೇಡ. “ಗಾಳಿಪಟ’ ಹುಡುಗಿ ವಿಷಯ ಇದು. ಅದೇ ಭಾವನಾ ರಾವ್‌ ಈಗ ಸುದ್ದಿಯಾಗಿದ್ದಾರೆ.

ಎಲ್ಲೋ ಕಳೆದೇ ಹೋದರು ಅಂದುಕೊಳ್ಳುತ್ತಿದ್ದಂತೆ, ಅಲ್ಲೆಲ್ಲೋ “ಬಹುಪರಾಕ್‌’ ಹಾಗೂ ಇನ್ನೆಲ್ಲೋ “ಪರಪಂಚ’ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಬಿಟ್ಟರೆ, ಭಾವನಾ ಮತ್ತೆ ಸುದ್ದಿಯೇ ಇರಲಿಲ್ಲ. ಹಾಗಂತ ಅವರು ಸಿನಿಮಾ ನಂಟು ಬಿಟ್ಟಿರಲಿಲ್ಲ. ಡಾಲರ್ ಕಾಲೋನಿಯಲ್ಲೊಂದು ತಮ್ಮ ಗೆಳತಿ ಜೊತೆ ಡ್ಯಾನ್ಸ್‌ ಕ್ಲಾಸ್‌ ಶುರುಮಾಡಿ ಅಲ್ಲಿಯೇ ಹೆಚ್ಚು ಗಮನಹರಿಸಿದ್ದರು.

ಒಂದೂವರೆ ವರ್ಷ ಕಾಲ ಡ್ಯಾನ್ಸ್‌ ಕ್ಲಾಸ್‌ನಲ್ಲೇ ಬಿಜಿಯಾಗಿದ್ದ ಭಾವನಾಗೆ ಅವಕಾಶಗಳು ಹುಡುಕಿ ಬಂದರೂ, ಒಪ್ಪಲಿಲ್ಲವಂತೆ. ಕಾರಣ, ಸರಿಯಾದ ಆಯ್ಕೆ. ಹಾಗಾಗಿ ಬಂದ ಅವಕಾಶಗಳನ್ನು ಪಕ್ಕಕ್ಕೆ ಸರಿಸಿದರು. ಆದರೆ, ಒಮ್ಮೆಲೆ ಒಂದಷ್ಟು ಸಿನಿಮಾ ಒಪ್ಪಿಕೊಂಡರು. ಈಗ ಆ ಚಿತ್ರಗಳು ರಿಲೀಸ್‌ಗೆ ರೆಡಿಯಾಗಿವೆ. ಅದೂ ಅಕ್ಟೋಬರ್‌ನಲ್ಲೇ ಬ್ಯಾಕ್‌ ಟು ಬ್ಯಾಕ್‌ ಅನ್ನೋದೇ ಈ ಹೊತ್ತಿನ ಸುದ್ದಿ.

ಹೌದು, ಭಾವನಾ ಅಭಿನಯಿಸಿರುವ “ಸತ್ಯ ಹರಿಶ್ಚಂದ್ರ’, “ದಯವಿಟ್ಟು ಗಮನಿಸಿ’ ಮತ್ತು “ಟೈಗರ್‌ ಗಲ್ಲಿ’ ಚಿತ್ರಗಳು ಅಕ್ಟೋಬರ್‌ನಲ್ಲೇ ತೆರೆಗೆ ಬರುತ್ತಿವೆ. ಅದರಲ್ಲೂ “ಸತ್ಯ ಹರಿಶ್ಚಂದ್ರ’ ಮತ್ತು “ದಯವಿಟ್ಟು ಗಮನಿಸಿ’ ಚಿತ್ರಗಳು ಅಕ್ಟೋಬರ್‌ 20 ರಂದು ತೆರೆಗೆ ಬಂದರೆ, “ಟೈಗರ್‌ ಗಲ್ಲಿ’ ಚಿತ್ರ ಅಕ್ಟೋಬರ್‌ 27 ಕ್ಕೆ ರಿಲೀಸ್‌ ಆಗುತ್ತಿದೆ. ಈ ಮೂರು ಚಿತ್ರಗಳನ್ನು ಅವರು 2016 ರಲ್ಲಿ ಒಪ್ಪಿಕೊಂಡಿದ್ದರು.

ಈಗ ಎರಡು ವಾರಗಳ ಅಂತರದಲ್ಲಿ ಮೂರು ಚಿತ್ರಗಳು ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. “ಸತ್ಯ ಹರಿಶ್ಚಂದ್ರ’ ಚಿತ್ರದಲ್ಲಿ ಶರಣ್‌ ಜೊತೆ ನಟಿಸಿದ್ದಾರೆ. ಅದೊಂದು ಹೊಸತನದ ಪಾತ್ರವಿದ್ದು, ನೋಡುಗರ ಗಮನಸೆಳೆಯುವಂತಹ ಪಾತ್ರವಂತೆ. ಯಾವ ಪಾತ್ರ ಅನ್ನುವುದಕ್ಕೆ ಸಿನಿಮಾ ನೋಡಬೇಕೆಂಬುದು ಅವರ ಮಾತು. ಇನ್ನು, “ದಯವಿಟ್ಟು ಗಮನಿಸಿ’ ಚಿತ್ರದಲ್ಲೂ ಭಾವನಾಗೊಂದು ವಿಶೇಷ ಪಾತ್ರವಿದೆಯಂತೆ.

“ಟೈಗರ್‌ ಗಲ್ಲಿ’ ಚಿತ್ರದಲ್ಲೂ ಭಾವನಾ ನಟಿಸಿದ್ದಾರೆ. ನೀನಾಸಂ ಸತೀಶ್‌ ಅವರ ಜೊತೆ ವಿಶೇಷ ಗೆಟಪ್‌ನಲ್ಲಿ ಹಾಡೊಂದಕ್ಕೆ ಸ್ಟೆಪ್‌ ಹಾಕಿದ್ದಾರೆ. ಅದೊಂದು ಪಕ್ಕಾ ಕಮರ್ಷಿಯಲ್‌ ಸಿನಿಮಾ ಆಗಿದ್ದು, ಅವರ ಪಾತ್ರ ಕೂಡ ಬೋಲ್ಡ್‌ ಆಗಿದೆಯಂತೆ. ಅದೇನೆ ಇರಲಿ, ಎಲ್ಲೂ ಸುದ್ದಿಯಾಗದೇ ಇದ್ದ ಭಾವನಾ, ಈಗ ಅಕ್ಟೋಬರ್‌ನ ಎರಡು ವಾರವಂತೂ ಅವರದ್ದೇ ಸುದ್ದಿ. ಇದೇ ಖುಷಿಯಲ್ಲಿ ಭಾವನಾ ಒಂದಷ್ಟು ಸಿನಿಮಾಗಳನ್ನು ಎದುರು ನೋಡುತ್ತಿರುವುದು ಅಷ್ಟೇ ದಿಟ.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.