‘ಶಿವಣ್ಣ ಯಾವಾಗ ಬರ್ತಾರೆ, ಯಾವಾಗ ಹೋಗ್ತಾರೆ ಅಂತ ಗೊತ್ತಾಗಲ್ಲ’


Team Udayavani, Oct 13, 2017, 9:04 PM IST

Villain-13-10.jpg

ಸುದೀಪ್‌ ಇತ್ತೀಚೆಗೆ ಬ್ಯಾಂಕಾಕ್‌ನಲ್ಲಿ ‘ದಿ ವಿಲನ್‌’ ಚಿತ್ರದ ಇನ್ನೊಂದು ಹಂತದ ಚಿತ್ರೀಕರಣ ಮುಗಿಸಿಕೊಂಡು ಬಂದಿದ್ದಾರೆ. ಈಗಾಗಲೇ ಅವರು ‘ದಿ ವಿಲನ್‌’ ಚಿತ್ರಕ್ಕಾಗಿ ಪ್ರೇಮ್‌ ಜೊತೆಗೆ ಸಾಕಷ್ಟು ಸುತ್ತಾಡಿದ್ದಾರೆ. ಬೆಂಗಳೂರು, ಚಿಕ್ಕಮಗಳೂರು, ಲಂಡನ್‌, ಬ್ಯಾಂಕಾಕ್‌, ಶಿವಮೊಗ್ಗ, ಬೆಳಗಾವಿ ಅಂತ ಸಾಕಷ್ಟು ಸಮಯ ಕಳೆದಿದ್ದಾರೆ. ಇಷ್ಟು ದಿನಗಳಲ್ಲಿ ಪ್ರೇಮ್‌ ಒಬ್ಬ ಪ್ಯಾಶನೇಟ್‌ ನಿರ್ದೇಶಕ ಎಂದು ಅರ್ಥ ಮಾಡಿಕೊಂಡಿದ್ದಾರೆ. 


‘ಪ್ರೇಮ್‌ ತುಂಬಾ ಬಿಲ್ಡಪ್‌ ಕೊಡುತ್ತಾರೆ, ಶೋ ಆಫ್ ಮಾಡುತ್ತಾರೆ ಅಂತ ಕೇಳಿದ್ದೆ. ಆದರೆ, ಅವರ ಜೊತೆಗೆ ಕೆಲಸ ಮಾಡಿದ ಮೇಲೆ ಆತ ಎಷ್ಟು ಪ್ಯಾಶನೇಟ್‌ ಅಂತ ಅರ್ಥವಾಯಿತು. ಅವರ ಪ್ಯಾಶನ್‌ಗೆ ತಲೆ ಬಾಗಲೇಬೇಕು. ಸದಾ ಸಿನಿಮಾ ಬಗ್ಗೆಯೇ ಯೋಚನೆ ಮಾಡುತ್ತಿರುತ್ತಾರೆ. ಆ ಮನುಷ್ಯ ಒಂದು ಕಡೆ ಕೂರಲ್ಲ. ಸರಿಯಾಗಿ ಊಟ ಮಾಡಲ್ಲ. ನಾನು ಬೈದು ಊಟ ಮಾಡಿಸ್ತೀನಿ. ಇನ್ನೂ ಒಂದು ವಿಶೇಷ ಅಂದರೆ, ಆತ ಯಾರಿಗೂ ಬೈಯಲ್ಲ. ಎಲ್ಲರಿಂದಲೂ ಪ್ರೀತಿ ಇಂದ ಕೆಲಸ ತೆಗೆಯುತ್ತಾರೆ. ಅಂತಹ ನಿರ್ದೇಶಕರ ಜೊತೆಗೆ ಕೆಲಸ ಮಾಡುವುದಕ್ಕೆ ನಿಜಕ್ಕೂ ಖುಷಿ. ಇನ್ನು ಶಿವರಾಜಕುಮಾರ್‌ ಜೊತೆಗೆ ಕೆಲಸ ಮಾಡೋದು ನಿಜಕ್ಕೂ ಸಂತೋಷ. ಅವರು ಯಾವಾಗ ಬರ್ತಾರೆ, ಯಾವಾಗ ಹೋಗುತ್ತಾರೆ ಅನ್ನೋದೇ ಗೊತ್ತಾಗಲ್ಲ. ಅವರು ಯಾವತ್ತೂ ಬರುವಾಗ ಅಹಂ ತರುವುದಿಲ್ಲ. ಹಾಗಾಗಿ ಬಹಳ ಖುಷಿಯಾಗತ್ತೆ ಅವರ ಜೊತೆಗೆ ಕೆಲಸ ಮಾಡೋಕೆ. ಇನ್ನು ಪ್ರೇಮ್‌, ನಮ್ಮಿಬ್ಬರ ಪಾತ್ರವನ್ನ ಬಹಳ ಚೆನ್ನಾಗಿ ಬ್ಯಾಲೆನ್ಸ್‌ ಮಾಡಿದ್ದಾರೆ’ ಎಂದು ಖುಷಿಯಾಗುತ್ತಾರೆ ಸುದೀಪ್‌.


ಇನ್ನು ಇತ್ತೀಚೆಗೆ ಬ್ಯಾಂಕಾಕ್‌ನಲ್ಲಿ ನಡೆದ ಚೇಸ್‌ ಸನ್ನಿವೇಶಗಳ ಬಗ್ಗೆ ಅವರಿಗೆ ಬಹಳ ಸಂತೋಷವಿದೆ. ‘ಬ್ಯಾಂಕಾಕ್‌ನಲ್ಲಿ ಬಹಳ ವ್ಯವಸ್ಥಿತವಾಗಿ ಚಿತ್ರೀಕರಣ ಮಾಡಿದ್ದಾರೆ. ಬರೀ ಪ್ರೇಮ್‌ ಒಬ್ಬರೇ ಅಲ್ಲ, ಇಡೀ ತಂಡ ಅದರಲ್ಲಿ ತೊಡಗಿಸಿಕೊಂಡಿದ್ದು ನೋಡಿ ಖುಷಿಯಾಯ್ತು. ಆ ಚಿತ್ರ ಹೇಗೆ ಬರುತ್ತದೆ ಎಂಬ ಕುತೂಹಲ ಇದೆ. ಚಿತ್ರ ಏನೇ ಆಗಲೀ, ತುಂಬಾ ಪ್ರಾಮಾಣಿಕವಾಗಿ ಮಾಡುತ್ತಿದ್ದಾರೆ’ ಎನ್ನುತ್ತಾರೆ ಸುದೀಪ್‌.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

Sapthami Gowda

Sapthami Gowda: ‘ಕಾಂತಾರ-1’ ಚಿತ್ರದಲ್ಲಿ ನಟಿಸುತ್ತಾರಾ ಸಪ್ತಮಿ ; ನಟಿ ಹೇಳಿದ್ದೇನು?

Film Producer: ಸ್ಯಾಂಡಲ್‌ ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್‌ ಆತ್ಮಹತ್ಯೆ

Film Producer: ಸ್ಯಾಂಡಲ್‌ ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್‌ ಆತ್ಮಹತ್ಯೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.