ವಿನೋದ್‌, ಕೃಷ್ಣ ಇಬ್ಬರಲ್ಲಿ “ವೇದ-ವ್ಯಾಸ’ ಯಾರು?


Team Udayavani, Oct 14, 2017, 3:48 PM IST

vedha-vaysa.jpg

ವಿನೋದ್‌ ಪ್ರಭಾಕರ್‌ ಅಭಿನಯದಲ್ಲಿ ಓಂಪ್ರಕಾಶ್‌ ರಾವ್‌ ಒಂದು ಚಿತ್ರ ನಿರ್ದೇಶಿಸಲಿದ್ದಾರೆ ಎಂಬ ಸುದ್ದಿ ಹಳೆಯದೇ. ಆದರೆ, ಆ ಚಿತ್ರದ ಹೆಸರೇನೆಂದು ವಿನೋದ್‌ ಆಗಲೀ, ಓಂಪ್ರಕಾಶ್‌ ರಾವ್‌ ಆಗಲೀ ಬಾಯಿಬಿಟ್ಟಿರಲಿಲ್ಲ. ಈಗ ಆ ಚಿತ್ರಕ್ಕೆ ಕೊನೆಗೂ ಹೆಸರು ಫೈನಲ್‌ ಆಗಿದೆ. ಚಿತ್ರಕ್ಕೆ “ವೇದ-ವ್ಯಾಸ’ ಎಂದು ಹೆಸರಿಡಲಾಗಿದ್ದು, ಚೆನ್ನೈನಲ್ಲಿ ಸದ್ದಿಲ್ಲದೆ ಚಿತ್ರದ ಫೋಟೋಶೂಟ್‌ ಸಹ ಆಗಿದೆ. ಚೆನ್ನೈನ ಎ.ವಿ.ಎಂ ಸ್ಟುಡಿಯೋದಲ್ಲಿ ಚಿತ್ರಕ್ಕೆ ವಿಶೇಷವಾದ ಫೋಟೋ ಶೂಟ್‌ ಮಾಡಲಾಗಿದೆ. 

ವಿಶೇಷವೆಂದರೆ, ಈ ಚಿತ್ರದಲ್ಲಿ “ಮದರಂಗಿ ಕೃಷ್ಣ’ ಸಹ ಕಾಣಿಸಿಕೊಳ್ಳುತ್ತಿರುವುದು. ಹಾಗಾಗಿ ಇದು ಪುರಾಣದ ವೇದವ್ಯಾಸ ಅಲ್ಲ, “ವೇದ-ವ್ಯಾಸ’ ಎಂಬ ಇಬ್ಬರ ಸುತ್ತ ಈ ಚಿತ್ರ ಸುತ್ತುತ್ತದೆ. ವಿನೋದ್‌ ಮತ್ತು ಕೃಷ್ಣ ಇಬ್ಬರಲ್ಲಿ ವೇದ ಯಾರು, ವ್ಯಾಸ ಯಾರು ಎಂಬುದನ್ನು ಇನ್ನೂ ಚಿತ್ರತಂಡ ಬಹಿರಂಗಪಡಿಸಿಲ್ಲ. ಒಟ್ಟಿನಲ್ಲಿ ಚಿತ್ರದಲ್ಲಿ ಇಬ್ಬರೂ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಮಂಡ್ಯದಲ್ಲಿ 1973-74ರಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ಕಥೆ ರಚಿಸಲಾಗಿದೆ.

ಈ ಚಿತ್ರವನ್ನು ರೇಣುಕಾ ಮೂವಿ ಮೇಕರ್ ಬ್ಯಾನರ್‌ನಡಿ ಎ.ಎಂ. ಉಮೇಶ್‌ ರೆಡ್ಡಿ ನಿರ್ಮಿಸುತ್ತಿದ್ದಾರೆ. “ವೇದ-ವ್ಯಾಸ’ ಚಿತ್ರದ ಚಿತ್ರೀಕರಣ ಡಿಸೆಂಬರ್‌ ಮೂರರಿಂದ ಪ್ರಾರಂಭವಾಗಲಿದ್ದು, ಅದಕ್ಕೂ ಮುನ್ನ ಇದೇ 20ರಂದು ಹಂಸಲೇಖ ಅವರ ಸ್ಟುಡಿಯೋದಲ್ಲಿ ಚಿತ್ರದ ಹಾಡುಗಳ ಧ್ವನಿಮುದ್ರಣ ಪ್ರಾರಂಭವಾಗಲಿದೆ. ಸಂಗೀತ ಸಂಯೋಜನೆಯ ಜೊತೆಗೆ ಹಂಸಲೇಖ ಅವರು ಚಿತ್ರಕ್ಕೆ ಸಾಹಿತ್ಯವನ್ನೂ ರಚಿಸಿದ್ದಾರೆ.

ಈ ಚಿತ್ರಕ್ಕೆ ಓಂಪ್ರಕಾಶ್‌ ರಾವ್‌ ಅವರ ಪತ್ನಿ ಡೆನ್ನಿಸಾ ಪ್ರಕಾಶ್‌ ಕಥೆ ಬರೆದಿದ್ದು, ಓಂಪ್ರಕಾಶ್‌ ರಾವ್‌ ಚಿತ್ರಕಥೆ ಬರೆದು, ನಿರ್ದೇಶಿಸುತ್ತಿದ್ದಾರೆ. ಇನ್ನು ಎಂ.ಎಸ್‌. ರಮೇಶ್‌ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಚಿತ್ರದಲ್ಲಿ ವಿನೋದ್‌ ಪ್ರಭಾಕರ್‌ ಮತ್ತು “ಮದರಂಗಿ’ ಕೃಷ್ಣ ಜೊತೆಗೆ ಅಭಿಮನ್ಯು ಸಿಂಗ್‌, ಶ್ರೀನಿವಾಸಮೂರ್ತಿ, ಅವಿನಾಶ್‌, ರಂಗಾಯಣ್‌ ರಘು, ಶೋಭರಾಜ್‌, ಚಿತ್ರಾ ಶೆಣೈ, ಸುಧಾ ಬೆಳವಾಡಿ ನಟಿಸುತ್ತಿದ್ದು, ನಾಯಕಿಯ ಹುಡುಕಾಟ ನಡೆಯುತ್ತಿದೆ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.