ರಾಜ್ಯೋತ್ಸವಕ್ಕೆ ಕನ್ನಡ ಚಿತ್ರಗಳ ಕೊಡುಗೆ!


Team Udayavani, Oct 30, 2017, 10:27 AM IST

rajyostava-films.jpg

ಕನ್ನಡ ರಾಜ್ಯೋತ್ಸವ ಬಂದರೆ ಸಾಕು ಕನ್ನಡಿಗರಿಗೆ ಎಲ್ಲಿಲ್ಲದ ಸಂಭ್ರಮ. ಕನ್ನಡ ಚಿತ್ರರಂಗಕ್ಕೂ ಅದು ಹಬ್ಬವೇ ಸರಿ. ಕನ್ನಡ ರಾಜ್ಯೋತ್ಸವದಂದು ಹಲವು ಮಂದಿ ವಿಶೇಷ ಕಾರ್ಯಕ್ರಮಗಳನ್ನು ನಡೆಸುವುದು ವಾಡಿಕೆ. ಹಾಗೆಯೇ ಬಿಡುಗಡೆಗೆ ರೆಡಿಯಾಗಿರುವ ಕನ್ನಡದ ಸ್ಟಾರ್‌ ಸಿನಿಮಾಗಳು ಕೂಡ ಕನ್ನಡ ರಾಜ್ಯೋತ್ಸವದಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿವೆ.

ಅಂದು ಕನ್ನಡದ ಕೆಲ ಚಿತ್ರಗಳು ತಮ್ಮ ಟ್ರೇಲರ್‌, ಪೋಸ್ಟರ್‌ ಹಾಗು ಶೀರ್ಷಿಕೆ ಬಿಡುಗಡೆ ಮಾಡಲು ಸಜ್ಜಾಗಿವೆ. ಮೊದಲ ವಾರದಲ್ಲಿ ಹಲವು ಚಿತ್ರಗಳು ತೆರೆಗೆ ಬರುತ್ತಿವೆ. ಹೊಸಬರು ಕೂಡ ಸಿನಿಮಾಗೆ ಚಾಲನೆ ಕೊಡುತ್ತಿದ್ದಾರೆ. ಆ ಕುರಿತು ಒಂದು ರೌಂಡಪ್‌.

“ಮಫ್ತಿ’ ಚಿತ್ರ ನವೆಂಬರ್‌ 1 ರ ಕನ್ನಡ ರಾಜ್ಯೋತ್ಸವದಂದು ಫೈನಲ್‌ ಟ್ರೇಲರ್‌ವೊಂದನ್ನು ಬಿಡುಗಡೆ ಮಾಡುತ್ತಿದೆ. ಶಿವರಾಜ್‌ಕುಮಾರ್‌ ಹಾಗು ಶ್ರೀಮುರಳಿ ಅಭಿನಯದ “ಮಫ್ತಿ’ ಚಿತ್ರದ ಎರಡು ಟೀಸರ್‌ ಈ ಹಿಂದೆಯೇ ಬಿಡುಗಡೆಯಾಗಿತ್ತು. ಶಿವಣ್ಣ ಅವರ ಹುಟ್ಟುಹಬ್ಬಕ್ಕೊಂದು, ಶ್ರೀಮುರಳಿ ಅವರ ಹುಟ್ಟುಹಬ್ಬಕ್ಕೊಂದು ಟೀಸರ್‌ ಹೊರಬಂದಿತ್ತು.

ಅದಾದ ಬಳಿಕ “ಮಫ್ತಿ’ ಬಗ್ಗೆ ಯಾವ ಸುದ್ದಿಯೂ ಹೊರ ಬಿದ್ದಿರಲಿಲ್ಲ. ಅಭಿಮಾನಿಗಳಂತೂ ಚಿತ್ರದ ಟ್ರೇಲರ್‌ಗಾಗಿ ಎದುರು ನೋಡುತ್ತಿದ್ದಾರೆ. ಈಗ ಕನ್ನಡ ರಾಜ್ಯೋತ್ಸವದ ಕೊಡುಗೆಯಾಗಿ “ಮಫ್ತಿ’ ಟ್ರೇಲರ್‌ ರಿಲೀಸ್‌ ಆಗುತ್ತಿದೆ. ಇನ್ನು, ಎಲ್ಲವು ಅಂದುಕೊಂಡಂತೆ ನಡೆದರೆ ಡಿಸೆಂಬರ್‌ನಲ್ಲಿ “ಮಫ್ತಿ’ ತೆರೆಗೆ ಬರಲಿದೆ. ಇಷ್ಟರಲ್ಲೇ ಚಿತ್ರದ ಆಡಿಯೋ ರಿಲೀಸ್‌ಗೂ ಚಿತ್ರತಂಡ ತಯಾರಿ ನಡೆಸುತ್ತಿದೆ.

ಮೊದಲ ಬಾರಿಗೆ ಜಯಣ್ಣ ಭೋಗೇಂದ್ರ ಅವರು “ಜೆಬಿ’ ಆಡಿಯೋ ಕಂಪೆನಿ ಮೂಲಕ ಆಡಿಯೋ ಸಿಡಿ ಹೊರತರುವ ಯೋಚನೆಯೂ ಮಾಡಿದ್ದಾರೆ. ಅದಿನ್ನು ಮಾತುಕತೆಯ ಹಂತದಲ್ಲಿದೆ.  ಅದೇನೆ ಇರಲಿ, ಅಭಿಮಾನಿಗಳಿಗಂತೂ “ಮಫ್ತಿ’ ಫೈನಲ್‌ ಟ್ರೇಲರ್‌ ರಾಜ್ಯೋತ್ಸವದ ಭರ್ಜರಿ ಕೊಡುಗೆಯಾಗಲಿದೆ. ಅಂದಹಾಗೆ, ಯು ಟ್ಯೂಬ್‌ನಲ್ಲಿ ಆ ಟ್ರೇಲರ್‌ ಲಾಂಚ್‌ ಆಗಲಿದೆ ಎಂದು ವಿವರ ಕೊಡುತ್ತಾರೆ ನಾಯಕ ಶ್ರೀಮುರಳಿ.

ನರ್ತನ್‌ ನಿರ್ದೇಶನದ “ಮಫ್ತಿ’ ಚಿತ್ರದಲ್ಲಿ ಶಿವರಾಜ್‌ಕುಮಾರ್‌ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಫೈಟ್ಸ್‌ ವಿಶೇಷತೆಗಳಲ್ಲೊಂದು ಎನ್ನುವ ಶ್ರೀಮುರಳಿ, ಕನ್ನಡ ರಾಜ್ಯೋತ್ಸವದಲ್ಲಿ ಬಿಡುಗಡೆಯಾಗುತ್ತಿರುವ ಟ್ರೇಲರ್‌, ನವೆಂಬರ್‌ ತಿಂಗಳ ಪೂರ್ತಿ, ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲೂ ಆ ಟ್ರೇಲರ್‌ ಕಾಣಿಸಿಕೊಳ್ಳಲಿದೆ ಎನ್ನುತ್ತಾರೆ.

ಇನ್ನು, ಆರ್‌.ಚಂದ್ರು ನಿರ್ದೇಶಿಸಿರುವ ದುನಿಯಾವ ವಿಜಯ್‌ ಅಭಿನಯದ “ಕನಕ’ ಚಿತ್ರದ ಟ್ರೇಲರ್‌ ಕೂಡ ನವೆಂಬರ್‌ 1 ರ ಕನ್ನಡ ರಾಜ್ಯೋತ್ಸವದಂದೇ ತೆರೆಗೆ ಬರಲಿದೆ. ಈಗಾಗಲೇ ಪೋಸ್ಟರ್‌ ಮೂಲಕ ಒಂದಷ್ಟು ಸುದ್ದಿಯಾಗಿರುವ “ಕನಕ’ ಈಗ ದುನಿಯಾ ವಿಜಯ್‌ ಅಭಿಮಾನಿಗಳಿಗಾಗಿಯೇ ಚಂದ್ರು ವಿಶೇಷ ಟ್ರೇಲರ್‌ವೊಂದನ್ನು ಸಿದ್ಧಪಡಿಸಿ, ರಾಜ್ಯೋತ್ಸವದಂದು ಬಿಡುಗಡೆ ಮಾಡುತ್ತಿದ್ದಾರೆ.

ಇದರೊಂದಿಗೆ ನವೆಂಬರ್‌ 6 ರಂದು ಕನಕ ಜಯಂತಿ ಇರುವ ಹಿನ್ನೆಲೆಯಲ್ಲಿ, ಅಂದು “ಕನಕ’ ಚಿತ್ರದ ವಿಶೇಷ ಹಾಡೊಂದನ್ನು ಬಿಡುಗಡೆ ಮಾಡಲು ಸಜ್ಜಾಗಿದ್ದಾರೆ ಆರ್‌.ಚಂದ್ರು. ಅದರೊಂದಿಗೆ ನವೆಂಬರ್‌ 16 ರಂದು ಶಿಡ್ಲಘಟ್ಟದಲ್ಲಿ ಕಲರ್‌ಫ‌ುಲ್‌ ಕಾರ್ಯಕ್ರಮ ನಡೆಸುವುದರೊಂದಿಗೆ ಹಾಡುಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಿದ್ದಾರೆ ಚಂದ್ರು.

ಈಗಾಗಲೇ “ಕನಕ’ ಚಿತ್ರದ ಕೆಲಸಗಳು ಪೂರ್ಣಗೊಂಡಿದ್ದು, ನವೆಂಬರ್‌ ಅಂತ್ಯದಲ್ಲಿ ಪ್ರೇಕ್ಷಕರ ಮುಂದೆ ಬರುವ ಸಾಧ್ಯತೆ ಇದೆ. ಈ ಚಿತ್ರದಲ್ಲಿ ಮಾನ್ವಿತಾ ಹರೀಶ್‌, ಹರಿಪ್ರಿಯಾ ನಾಯಕಿಯರು. ಇಲ್ಲಿ ರಾಜ್‌ ಅಭಿಮಾನಿಯಾಗಿರುವ ಆಟೋಡ್ರೈವರ್‌ ಪಾತ್ರದಲ್ಲಿ ಮೊದಲ ಸಲ ದುನಿಯಾ ವಿಜಯ್‌ ನಟಿಸಿದ್ದಾರೆ. ಆರ್‌.ಚಂದ್ರು ನಿರ್ದೇಶನದ ಜತೆ ನಿರ್ಮಾಣವನ್ನೂ ಮಾಡಿದ್ದಾರೆ.

ಇನ್ನು, ಶಿವರಾಜ್‌ಕುಮಾರ್‌ ಅವರ ಸಂಬಂಧಿ ಲಕ್ಕಿಗೋಪಾಲ್‌ ಅವರು ಇದೇ ಮೊದಲ ಬಾರಿಗೆ ಶಿವರಾಜ್‌ಕುಮಾರ್‌ ಅವರ ಚಿತ್ರವೊಂದನ್ನು ನಿರ್ದೇಶಿಸಲಿದ್ದು, ನವೆಂಬರ್‌ 1 ರ ಕನ್ನಡ ರಾಜ್ಯೋತ್ಸವದಂದೇ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಲಿದ್ದಾರೆ. ಡಾ.ರಾಜ್‌ಕುಟುಂಬದವರಿಂದಲೇ ಆ ಶೀರ್ಷಿಕೆಯನ್ನು ಬಿಡುಗಡೆ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ಕೊಡಲಿದ್ದಾರೆ.

ಈ ಚಿತ್ರದಲ್ಲಿ ಶಿವರಾಜ್‌ಕುಮಾರ್‌ಗೆ ವಿಶೇಷ ಪಾತ್ರ ಕಟ್ಟಿಕೊಡುವ ಮೂಲಕ ರಾಜ್‌ ಕುಟುಂಬದಲ್ಲಿ ಮೊದಲ ನಿರ್ದೇಶಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಲಕ್ಕಿ. ಅನೂಪ್‌ ಭಂಡಾರಿ ನಿರ್ದೇಶನದ “ರಾಜರಥ’ ಚಿತ್ರದ ಪೋಸ್ಟರ್‌ ಈಗಾಗಲೇ ಬಿಡುಗಡೆಯಾಗಿದೆ. ಆದರೆ, ಕನ್ನಡ ರಾಜ್ಯೋತ್ಸವದಂದೇ ಚಿತ್ರದ ಇನ್ನೊಂದು ವಿಶೇಷ ಪೋಸ್ಟರ್‌ ಬಿಡುಗಡೆ ಮಾಡಲು ಚಿತ್ರತಂಡ ಯೋಚಿಸಿದ್ದು, ಅಂದು ವಿಶೇಷ,

ವಿಭಿನ್ನವಾಗಿರುವಂತಹ ಪೋಸ್ಟರ್‌ ರಿಲೀಸ್‌ ಮಾಡಲು ಅನೂಪ್‌ ಭಂಡಾರಿ ನಿರ್ಧರಿಸಿದ್ದಾರೆ. ಈ ಚಿತ್ರದಲ್ಲಿ ನಿರೂಪ್‌ ಭಂಡಾರಿ ಹೀರೋ ಆಗಿದ್ದಾರೆ. ರವಿಶಂಕರ್‌ ಕೂಡ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ “ಕರ್ವ’ ಖ್ಯಾತಿಯ ನವನೀತ್‌ ನಿರ್ದೇಶನದ ರವಿಚಂದ್ರನ್‌ ಅಭಿನಯದ “ಬಕಾಸುರ’ ಚಿತ್ರದ ಮೊದಲ ಟ್ರೇಲರ್‌ ಕೂಡ ನವೆಂಬರ್‌ ಮೊದಲ ವಾರದಲ್ಲೇ ಬಿಡುಗಡೆಯಾಗಲಿದೆ.

ದುನಿಯಾ ಸೂರಿ ನಿರ್ದೇಶನದ “ಟಗರು’ ಚಿತ್ರದ ಟೀಸರ್‌ ಕೂಡ ನವೆಂಬರ್‌ 7 ರಂದು ಬಿಡುಗಡೆಯಾಗುತ್ತಿದ್ದು, ಶಿವಣ್ಣ ಅಭಿಮಾನಿಗಳೇ ಪ್ರೀತಿಯಿಂದ ಕಾರ್ಯಕ್ರಮ ಆಯೋಜಿಸಿ, ಟೀಸರ್‌ ಬಿಡುಗಡೆ ಮಾಡುತ್ತಿದ್ದಾರೆ. ಕನ್ನಡ ರಾಜ್ಯೋತ್ಸವ ದಿನದಂದು ಇನ್ನು ಅನೇಕ ಚಿತ್ರತಂಡದವರು ಹಾಡು, ಟೀಸರ್‌, ಟ್ರೇಲರ್‌ ಬಿಡುಗಡೆ ಮಾಡುತ್ತಿದ್ದಾರೆ. ನವೆಂಬರ್‌ ಮೊದಲ ವಾರದಲ್ಲಿ ಕನ್ನಡದ ಕೆಲ ಚಿತ್ರಗಳು ಬಿಡುಗಡೆಯಾಗುತ್ತಿರುವುದು ವಿಶೇಷ.

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.