ದರ್ಶನ್‌ ಪ್ರಶಸ್ತಿ ಗೊಂದಲಕ್ಕೆ ತೆರೆ


Team Udayavani, Oct 31, 2017, 10:35 AM IST

darshan-award.jpg

ಇತ್ತೀಚೆಗೆ ದರ್ಶನ್‌ ಲಂಡನ್‌ಗೆ ತೆರಳಿ ಬ್ರಿಟಿಷ್‌ ಪಾರ್ಲಿಮೆಂಟ್‌ನಲ್ಲಿ “ಗ್ಲೋಬಲ್‌ ಇಂಟಿರ್ಗಿಟಿ’ ಪ್ರಶಸ್ತಿ ಸ್ವೀಕರಿಸಿ ಬಂದಿರೋದು ನಿಮಗೆ ಗೊತ್ತೇ ಇದೆ. ದರ್ಶನ್‌ಗೆ ಪ್ರಶಸ್ತಿ ಬಂದಿದ್ದರಿಂದ ಖುಷಿಯಾದ ಅಭಿಮಾನಿಗಳು, ಅಮಿತಾಬ್‌ ಬಚ್ಚನ್‌, ಸಲ್ಮಾನ್‌ ಖಾನ್‌ ನಂತರ ಬ್ರಿಟಿಷ್‌ ಪಾರ್ಲಿಮೆಂಟ್‌ ದರ್ಶನ್‌ಗೆ ಪ್ರಶಸ್ತಿ ಕೊಡುತ್ತಿದೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಖುಷಿ ಹಂಚಿಕೊಳ್ಳುತ್ತಿದ್ದರು. ಇದರ ಜೊತೆಗೆ ಈ ಪ್ರಶಸ್ತಿ ಬಗ್ಗೆ ಸಾಕಷ್ಟು ಗೊಂದಲಗಳು ಕೂಡಾ ಹುಟ್ಟಿಕೊಂಡವು.

ದರ್ಶನ್‌ಗೆ ಕೊಟ್ಟಿರುವ ಪ್ರಶಸ್ತಿಗೂ ಅಮಿತಾಬ್‌, ಸಲ್ಮಾನ್‌ಗೆ ಕೊಟ್ಟಿರುವ ಪ್ರಶಸ್ತಿಗೂ ಸಂಬಂಧವಿಲ್ಲ, ಜೊತೆಗೆ ಇದು ಬ್ರಿಟಿಷ್‌ ಪಾರ್ಲಿಮೆಂಟ್‌ ಕೊಡುವ ಪ್ರಶಸ್ತಿಯೂ ಅಲ್ಲ ಎಂಬ ಮಾತುಗಳು ಜೋರಾಗಿ ಕೇಳಿಬಂದವು. ಸೋಶಿಯಲ್‌ ಮೀಡಿಯಾಗಳಲ್ಲಂತೂ ಈ ಚರ್ಚೆ ಜೋರಾಗಿಯೇ ನಡೆಯುತ್ತಿತ್ತು. ಈಗ ಅದಕ್ಕೆ ಲಂಡನ್‌ನ ಯುಕೆ ಕರ್ನಾಟಕ ಬಿಝಿನೆಸ್‌ ಚೇಂಬರ್‌ನ ಚೇರ್‌ಮ್ಯಾನ್‌ ಮಂಜುನಾಥ್‌ ವಿಶ್ವಕರ್ಮ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.

ದರ್ಶನ್‌ಗೆ ಕೊಟ್ಟಿರೋದು ಗ್ಲೋಬಲ್‌ ಇಂಟಿರ್ಗಿಟಿ ಪ್ರಶಸ್ತಿಯೇ ಹೊರತು ಗ್ಲೋಬಲ್‌ ಡೈವರ್ಸಿಟಿ ಪ್ರಶಸ್ತಿಯಲ್ಲ. ಜೊತೆಗೆ ಇದು ಬ್ರಿಟಿಷ್‌ ಪಾರ್ಲಿಮೆಂಟ್‌ ಕೊಡುವ ಪ್ರಶಸ್ತಿಯೂ ಅಲ್ಲ, ಬದಲಿಗೆ ಯುಕೆ ಕರ್ನಾಟಕ ಬಿಝಿನೆಸ್‌ ಚೇಂಬರ್‌ ಕೊಡುವ ಪ್ರಶಸ್ತಿ ಎಂದು ಮಂಜುನಾಥ್‌ ವಿಶ್ವಕರ್ಮ ಸ್ಪಷ್ಟಪಡಿಸಿದ್ದಾರೆ. “ದರ್ಶನ್‌ಗೆ ಕೊಟ್ಟಿರೋದು ಗ್ಲೋಬಲ್‌ ಡೈವರ್ಸಿಟಿ ಅವಾರ್ಡ್‌ ಅಲ್ಲ, ಅದು ಗ್ಲೋಬಲ್‌ ಇಂಟಿರ್ಗಿಟಿ ಪ್ರಶಸ್ತಿ.

ಜೊತೆಗೆ ನಾವು ಎಲ್ಲೂ ಇದು ಬ್ರಿಟಿಷ್‌ ಪಾರ್ಲಿಮೆಂಟ್‌ ಕೊಡುವ ಪ್ರಶಸ್ತಿ ಎಂದು ಹೇಳಿಲ್ಲ. ಬ್ರಿಟಿಷ್‌ ಪಾರ್ಲಿಮೆಂಟ್‌ನಲ್ಲಿ ಕೊಡಲಾಗುತ್ತದೆ ಎಂದಷ್ಟೇ ಹೇಳಿದ್ದೆವು. ಗ್ಲೋಬಲ್‌ ಡೈವರ್ಸಿಟಿ ಪ್ರಶಸ್ತಿಯನ್ನು ಕೀಟ್‌ ವಾಗ್‌ ಎಂಬ ಎಂಪಿ ಕೊಡುತ್ತಾ ಬಂದಿದ್ದಾರೆ. ಅವರು ಈಗಾಗಲೇ ಆ ಪ್ರಶಸ್ತಿಯಲ್ಲಿ ಅನೇಕರನ್ನು ಸನ್ಮಾನಿಸಿದ್ದಾರೆ. ಆದರೆ, ಗ್ಲೋಬಲ್‌ ಇಂಟಿರ್ಗಿಟಿ ಪ್ರಶಸ್ತಿಯನ್ನು ವೀರೇಂದ್ರ ಶರ್ಮಾ ಎಂಬ ಮತ್ತೂಬ್ಬ ಎಂಪಿ ಕೊಡುತ್ತಿರೋದು.

ಪಾರ್ಲಿಮೆಂಟ್‌ನಲ್ಲಿ ಜಾಗ ತಗೊಂಡು ಕೊಡುತ್ತಿದ್ದಾರೆ. ಆ ಪ್ರಶಸ್ತಿಗೂ ಈ ಪ್ರಶಸ್ತಿಗೂ ಯಾವುದೇ ಸಂಬಂಧವಿಲ್ಲ’ ಎಂದು ಮಂಜುನಾಥ್‌ ಹೇಳಿದರು. ಯುಕೆ ಕರ್ನಾಟಕ ಬಿಝಿನೆಸ್‌ ಚೇಂಬರ್‌ ಬಗ್ಗೆ ಮಾತನಾಡುವ ಅವರು, ಇಲ್ಲಿನ ಸಂಸ್ಕೃತಿಯನ್ನು ಅಲ್ಲಿ ಬಿಂಬಿಸುವ ಸಲುವಾಗಿ ಹಾಗೂ ಅಲ್ಲಿನ ಬಿಝಿನೆಸ್‌ ಅನ್ನು ಇಲ್ಲಿ ಪ್ರಮೋಟ್‌ ಮಾಡುವ ಸಲುವಾಗಿ ಈ ಸಂಸ್ಥೆ ಹುಟ್ಟಿಕೊಂಡಿದೆ.

ವೀರೇಂದ್ರ ಶರ್ಮಾ ಅವರು ಕೂಡಾ ಈ ಸಂಸ್ಥೆಯ ಮಾರ್ಗದರ್ಶಕರು. ಸಂಸ್ಥೆಯನ್ನು ಜನಪ್ರಿಯ ಮಾಡುವ ಜೊತೆಗೆ ಸಾಧನೆ ಮಾಡಿದ ಕನ್ನಡಿಗನಿಗೆ ಪ್ರಶಸ್ತಿ ಕೊಡುವುದನ್ನು ರೂಢಿಸುತ್ತಾ ಬಂದೆವು. ಈ ಹಿಂದೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ ಅವರನ್ನು ಸನ್ಮಾನಿಸಲಾಗಿದೆ. ಅದರಂತೆ ದರ್ಶನ್‌ ಅವರ ಸಾಧನೆಯನ್ನು ಪರಿಗಣಿಸಿ ಈ ಬಾರಿ ಅವರನ್ನು ಸನ್ಮಾನಿಸಿದ್ದೇವೆ ಎಂದರು. 

ದರ್ಶನ್‌ ಜೊತೆ ಪ್ರಶಸ್ತಿ ಸ್ವೀಕಾರ ಸಮಾರಂಭಕ್ಕೆ ಲಂಡನ್‌ಗೆ ತೆರಳಿದ್ದ ದರ್ಶನ್‌ ಆಪ್ತ ಮಲ್ಲಿಕಾರ್ಜುನ್‌ ಮಾತನಾಡಿ, ಪ್ರಶಸ್ತಿ ಸ್ವೀಕರಿಸಿ ಬರುವವರೆಗೂ ಇದನ್ನು ಸುದ್ದಿ ಮಾಡಬಾರದೆಂದ್ದೆವು. ಆದರೆ, ಆಗಲೇ ಸೋಶಿಯಲ್‌ ಮೀಡಿಯಾದಲ್ಲಿ ಹಬ್ಬಿತ್ತು. ನಾವು ಪ್ರಶಸ್ತಿ ವಿಚಾರದಲ್ಲಿ ದಾರಿ ತಪ್ಪಿಸಿಲ್ಲ, ಸುಳ್ಳು ಹೇಳಿಲ್ಲ. ಇದು ಗ್ಲೋಬಲ್‌ ಇಂಟಿರ್ಗಿಟಿ ಅವಾರ್ಡ್‌. ಪ್ರಶಸ್ತಿ ಯಾವುದೇ ಆದರೂ ಕನ್ನಡಿಗನಿಗೆ ಪ್ರಶಸ್ತಿ ಸಿಕ್ಕಿದೆ ಎಂದು ಖುಷಿಪಡಬೇಕು ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.