ಮಗನನ್ನು ಲಾಂಚ್‌ ಮಾಡಲು ವಿಜಯ್‌ ಸಿದ್ಧತೆ


Team Udayavani, Nov 1, 2017, 4:20 PM IST

vijay-son.jpg

“ದುನಿಯಾ’ ವಿಜಯ್‌ ಅವರ “ಕನಕ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಸದ್ಯ ಅವರದ್ದೇ ನಿರ್ಮಾಣದ “ಜಾನಿ ಜಾನಿ ಯೆಸ್‌ ಪಪ್ಪಾ’ ಚಿತ್ರೀಕರಣವಾಗುತ್ತಿದೆ. ಈ ನಡುವೆಯೇ ವಿಜಿ “ಕುಸ್ತಿ’ ಕನಸು ಕಾಣುತ್ತಿದ್ದಾರೆ. ಹೌದು, ವಿಜಯ್‌ ಅವರಿಗೆ ಕುಸ್ತಿಯನ್ನಿಟ್ಟುಕೊಂಡು ಸಿನಿಮಾ ಮಾಡಬೇಕೆಂಬ ಆಸೆ ಇದೆ. ಆ ಆಸೆಯನ್ನು ಅವರು ಈಡೇರಿಸಿಕೊಳ್ಳಲು ಮುಂದಾಗಿದ್ದಾರೆ ಕೂಡಾ. ಹಾಗಾಗಿಯೇ ಅವರ ಮುಂದಿನ ಸಿನಿಮಾ ಕುಸ್ತಿ ಕುರಿತಾಗಿದ್ದು, ಚಿತ್ರಕ್ಕೆ “ಕುಸ್ತಿ’ ಎಂದೇ ಟೈಟಲ್‌ ಇಡಲಿದ್ದಾರೆ.

ಈ ಚಿತ್ರದ ನಿರ್ದೇಶಕ ಸೇರಿದಂತೆ ಇತರ ಅಂಶಗಳು ಇನ್ನಷ್ಟೇ ಅಂತಿಮವಾಗಬೇಕಿದೆ. ಚಿತ್ರವನ್ನು ತಮ್ಮದೇ ಬ್ಯಾನರ್‌ನಲ್ಲಿ ನಿರ್ಮಿಸುವ ಯೋಚನೆ ವಿಜಯ್‌ಗಿದೆ. “ನನಗೆ ಕುಸ್ತಿ ಕುರಿತು ಸಿನಿಮಾ ಮಾಡಬೇಕೆಂಬ ಆಸೆ ತುಂಬಾ ದಿನಗಳಿಂದ ಇದೆ. ಈಗ ಆ ಆಸೆ ಈಡೇರುವ ಸಮಯ ಬಂದಿದೆ. ಕುಸ್ತಿ ಬಗ್ಗೆ ಸಿನಿಮಾ ಮಾಡುತ್ತಿದ್ದೇನೆ. ಈಗಾಗಲೇ ಕಥೆ ಸಿದ್ಧವಾಗುತ್ತಿದೆ.

“ಕುಸ್ತಿ’ ಅಂದಾಕ್ಷಣ ಕೇವಲ ಕುಸ್ತಿಯನ್ನಷ್ಟೇ ತೋರಿಸುತ್ತಿಲ್ಲ. ಇಂದಿನ ಟ್ರೆಂಡ್‌ಗೆ ತಕ್ಕಂತೆ, ಕಮರ್ಷಿಯಲ್‌ ಆಗಿ ಮಾಡುತ್ತಿದ್ದೇವೆ’ ಎನ್ನುತ್ತಾರೆ ವಿಜಯ್‌. ಈ ಚಿತ್ರದ ಮತ್ತೂಂದು ವಿಶೇಷವೆಂದರೆ “ಕುಸ್ತಿ’ ಮೂಲಕ ವಿಜಯ್‌ ಅವರ ಮಗ ಸಾಮ್ರಾಟ್‌ ಕೂಡಾ ಲಾಂಚ್‌ ಆಗುತ್ತಿದ್ದಾರೆ. ಈ ಚಿತ್ರದಲ್ಲಿ ಸಾಮ್ರಾಟ್‌ ಬಾಲನಟನಾಗಿ ಕಾಣಿಸಿಕೊಳ್ಳಲಿದ್ದಾರೆ. ಅಷ್ಟಕ್ಕೂ ಯಾವ ಪಾತ್ರ ಎಂದರೆ ವಿಜಯ್‌ ಅವರ ಬಾಲ್ಯದ ದಿನಗಳ ಪಾತ್ರ.

ಹೌದು, “ಕುಸ್ತಿ’ ಚಿತ್ರದಲ್ಲಿ ವಿಜಯ್‌ ಅವರ ಬಾಲ್ಯದ ಪಾತ್ರ, ಬಾಲ್ಯದಿಂದಲೇ ಕುಸ್ತಿ ತರಬೇತಿ ಪಡೆಯುವ ಅಂಶಗಳನ್ನು ಸಾಮ್ರಾಟ್‌ ಮೂಲಕ ಚಿತ್ರೀಕರಿಸುವ ಉದ್ದೇಶ ವಿಜಯ್‌ ಅವರಿಗಿದೆ. ಈಗಾಗಲೇ ವಿಜಯ್‌ ಪುತ್ರ ಕೂಡಾ ಎಲ್ಲಾ ರೀತಿಯ ತರಬೇತಿ ಪಡೆಯುತ್ತಿದ್ದು, ಸಖತ್‌ ಆ್ಯಕ್ಟೀವ್‌ ಆಗಿದ್ದಾರೆ. “ಕುಸ್ತಿ ಮೂಲಕ ಮಗನನ್ನು ಲಾಂಚ್‌ ಮಾಡುವ ಉದ್ದೇಶವಿದೆ. ಅವನಿಗೂ ಆ್ಯಕ್ಷನ್‌ನಲ್ಲೇ ಆಸಕ್ತಿ. ಈಗಾಗಲೇ ಒಂದಷ್ಟು ಪೂರ್ವತಯಾರಿ ಕೂಡಾ ಮಾಡಿಕೊಳ್ಳುತ್ತಿದ್ದಾನೆ’ ಎನ್ನುವುದು ವಿಜಯ್‌ ಮಾತು. 

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.