ಡಿಸೆಂಬರ್ 1ಕ್ಕೆ ಕನಕ
Team Udayavani, Nov 13, 2017, 10:48 AM IST
ಒಂದು ಕಡೆ ವಾರ ವಾರ ಏಳೆಂಟು ಚಿತ್ರಗಳು ಬಿಡುಗಡೆಯಾಗುತ್ತಿವೆ. ಇವೆಲ್ಲವೂ ಹೊಸಬರ ಚಿತ್ರಗಳೆಂಬುದು ವಿಶೇಷ. ಅದಕ್ಕೆ ಕಾರಣ, ಡಿಸೆಂಬರ್ನಲ್ಲಿ ಬರುತ್ತಿರುವ ಸ್ಟಾರ್ ಸಿನಿಮಾಗಳು. ಡಿಸೆಂಬರ್ ತುಂಬಾ ಸ್ಟಾರ್ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಈಗ ಮತ್ತೂಬ್ಬ ಸ್ಟಾರ್ ನಟನ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಅದು “ಕನಕ’.
ಹೌದು, ಆರ್.ಚಂದ್ರು ನಿರ್ದೇಶನದ ದುನಿಯಾ ವಿಜಯ್ ನಾಯಕರಾಗಿರುವ “ಕನಕ’ ಚಿತ್ರದ ಈಗ ಬಿಡುಗಡೆಯ ಹಂತಕ್ಕೆ ಬಂದಿದ್ದು, ಡಿಸೆಂಬರ್ 1ಕ್ಕೆ ಚಿತ್ರ ಬಿಡುಗಡೆ ಮಾಡಲು ಚಂದ್ರು ಮುಂದಾಗಿದ್ದಾರೆ. ಈ ಚಿತ್ರವನ್ನು ಆರ್.ಚಂದ್ರು ನಿರ್ಮಿಸುವ ಜೊತೆಗೆ ನಿರ್ಮಾಣ ಕೂಡಾ ಮಾಡಿದ್ದಾರೆ. ನವೆಂಬರ್ 1 ಕನ್ನಡ ರಾಜ್ಯೋತ್ಸವದಂದು ಚಿತ್ರದ ಟ್ರೇಲರ್ ಬಿಡುಗಡೆಯಾಗಿತ್ತು.
ಚಿತ್ರದ ಟ್ರೇಲರ್ಗೆ ಮೆಚ್ಚುಗೆ ವ್ಯಕ್ತವಾದ್ದರಿಂದ ಚಿತ್ರತಂಡ ಖುಷಿಯಾಗಿದ್ದು, ಸಿನಿಮಾಕ್ಕೂ ಅದೇ ರೀತಿಯ ಪ್ರತಿಕ್ರಿಯೆ ಸಿಗುತ್ತದೆ ಎಂಬ ನಂಬಿಕೆಯಲ್ಲಿದೆ. ದುನಿಯಾ ವಿಜಯ್ ನಾಯಕರಾಗಿರುವ “ಕನಕ’ ಆ್ಯಕ್ಷನ್ ಹಿನ್ನೆಲೆಯಲ್ಲಿ ಸಾಗುವ ಸಿನಿಮಾವಾಗಿದ್ದು, ಚಿತ್ರದಲ್ಲಿ ಹರಿಪ್ರಿಯಾ ಹಾಗೂ ಮಾನ್ವಿತಾ ಹರೀಶ್ ನಾಯಕಿಯರು. ಎಲ್ಲಾ ಓಕೆ, ಡಿಸೆಂಬರ್ 1 ರಂದು ಮುರುಳಿ ಹಾಗೂ ಶಿವರಾಜಕುಮಾರ್ ಅವರ “ಮಫ್ತಿ’ ಚಿತ್ರವೂ ಬಿಡುಗಡೆಯಾಗುತ್ತದೆಂಬ ಸುದ್ದಿ ಇದೆ.
ಹಾಗಾದರೆ ಎರಡು ಸ್ಟಾರ್ ಸಿನಿಮಾಗಳು ಒಟ್ಟಿಗೆ ಬರುತ್ತಾ ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ಒಂದು ವೇಳೆ “ಮಫ್ತಿ’ ಬಿಡುಗಡೆ ಪಕ್ಕಾ ಆದರೆ ತಾನು ಮುಂದಕ್ಕೆ ಹೋಗುತ್ತೇನೆ ಎನ್ನುತ್ತಾರೆ ನಿರ್ದೇಶಕ ಚಂದ್ರು. “ನಾನು ಶಿವರಾಜಕುಮಾರ್ ಅವರ ಅಭಿಮಾನಿ. ಅವರ ಸಿನಿಮಾಗಳನ್ನು ನೋಡಿಕೊಂಡು ಬೆಳೆದವ ನಾನು.
ಅವರ ಸಿನಿಮಾ ಡಿಸೆಂಬರ್ 1 ರಂದು ಬರುವುದು ಕನ್ಫರ್ಮ್ ಆದರೆ, ನಾನು ಒಂದು ವಾರ ಮುಂದೆ ಹೋಗುತ್ತೇನೆ’ ಎನ್ನುತ್ತಾರೆ ಚಂದ್ರು.
ಶಿಡ್ಲಘಟ್ಟದಲ್ಲಿ ಆಡಿಯೋ ಬಿಡುಗಡೆ ಇಲ್ಲ: ಆರ್.ಚಂದ್ರು ಅವರು “ಕನಕ’ ಚಿತ್ರದ ಆಡಿಯೋ ಬಿಡುಗಡೆಯನ್ನು ತಮ್ಮ ಹುಟ್ಟೂರಾದ ಶಿಡ್ಲಘಟ್ಟದಲ್ಲಿ ಅದ್ಧೂರಿಯಾಗಿ ಮಾಡಲು ನಿರ್ಧರಿಸಿದ್ದರು.
ಈಗ ಆ ಕಾರ್ಯಕ್ರಮದಲ್ಲಿ ಸಣ್ಣ ಬದಲಾವಣೆಯಾಗಿದೆ. ಅದೇನೆಂದರೆ ಶಿಡ್ಲಘಟ್ಟದಲ್ಲಿ ಆಡಿಯೋ ಬಿಡುಗಡೆಯಾಗುತ್ತಿಲ್ಲ. ಬದಲಾಗಿ ಬೆಂಗಳೂರಿನ ಪಂಚತಾರಾ ಹೋಟೆಲ್ವೊಂದರಲ್ಲಿ ಅದ್ಧೂರಿಯಾಗಿ ಆಡಿಯೋ ಬಿಡುಗಡೆಯಾಗಲಿದೆ. ಶಿಡ್ಲಘಟ್ಟದಲ್ಲಿ ಮೈದಾನದಲ್ಲಿ ನಡೆಸಲು ಅನುಮತಿ ಸಿಗದ ಕಾರಣ ಹೋಟೆಲ್ನಲ್ಲಿ ಆಡಿಯೋ ಬಿಡುಗಡೆ ಮಾಡುವುದಾಗಿ ಹೇಳುತ್ತಾರೆ ಚಂದ್ರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್
Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ