ಹಾರರ್‌, ಥ್ರಿಲ್ಲರ್‌ನತ್ತ ಮಾಲಾಶ್ರೀ!


Team Udayavani, Nov 14, 2017, 6:44 PM IST

Malasri-(3).jpg

ಮಾಲಾಶ್ರೀ ನಟಿಸಿರುವ “ಉಪ್ಪು ಹುಳಿ ಖಾರ’ ಚಿತ್ರ ನವೆಂಬರ್‌ 24 ರಂದು ಬಿಡುಗಡೆಯಾಗುತ್ತಿದೆ. ಈ ನಡುವೆಯೇ ಮಾಲಾಶ್ರೀಯವರು ಎರಡು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈ ಬಾರಿ ಆ್ಯಕ್ಷನ್‌ ಬದಲು ಹೊಸ ಜಾನರ್‌ನಲ್ಲಿ ಮಾಲಾಶ್ರೀಯವರು ಕಾಣಿಸಿಕೊಳ್ಳುತ್ತಿದ್ದು, ಥ್ರಿಲ್ಲರ್‌ ಹಾಗೂ ಹಾರರ್‌ ಜಾನರ್‌ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ಹೊಸ ಗೆಟಪ್‌ನಲ್ಲಿ ದರ್ಶನ ಕೊಡಲಿದ್ದಾರೆ. ಈ ಎರಡು ಚಿತ್ರಗಳು ಹೊಸ ವರ್ಷಕ್ಕೆ ಅಂದರೆ ಜನವರಿಯಲ್ಲಿ ಆರಂಭವಾಗಲಿವೆ. 

ಅಂದಹಾಗೆ, ಈ ಚಿತ್ರಗಳಿಗಾಗಿ ಮಾಲಾಶ್ರೀ ತಮ್ಮ ಲುಕ್‌, ಗೆಟಪ್‌ ಎಲ್ಲವನ್ನು ಬದಲಿಸಿಕೊಳ್ಳಲಿದ್ದಾರೆ. ಏಕೆಂದರೆ, ಚಿತ್ರದ ಪಾತ್ರ ತುಂಬಾ ವಿಶೇಷವಾಗಿದ್ದು, ಅದಕ್ಕಾಗಿ ಈಗಾಗಲೇ ತಯಾರಿ ನಡೆಸುತ್ತಿದ್ದಾರಂತೆ. ಮತ್ತೂಂದೆಡೆ ಮಾಲಾಶ್ರೀಯವರು ಈಗ ಸಖತ್‌ ಸ್ಲಿಮ್‌ ಆಗಿದ್ದಾರೆ. 9 ಕೆಜಿಯಷ್ಟು ತೂಕ ಇಳಿಸಿಕೊಂಡಿರುವ ಅವರು ಸತತವಾಗಿ ವರ್ಕೌಟ್‌ನಲ್ಲಿ ತೊಡಗಿದ್ದಾರೆ. ದಿನಕ್ಕೆ ಮೂರು ಗಂಟೆಗಳ ಕಾಲ ವರ್ಕೌಟ್‌ ಮಾಡಿ ತೂಕ ಇಳಿಸಿಕೊಂಡಿರುವ ಮಾಲಾಶ್ರೀಯವರಿಗೆ ಮತ್ತಷ್ಟು ಕೆಜಿ ಇಳಿಸಿಕೊಳ್ಳುವ ಇರಾದೆ ಇದೆ. ಆ ನಿಟ್ಟಿನಲ್ಲಿ ಅವರ ವರ್ಕೌಟ್‌ ಸಾಗುತ್ತಿದೆ.

“ನಾನು “ಉಪ್ಪು ಹುಳಿ ಖಾರ’ ಚಿತ್ರದ ನಂತರ ಯಾವೊಂದು ಚಿತ್ರವನ್ನೂ ಒಪ್ಪಿಕೊಂಡಿರಲಿಲ್ಲ. ಬಹಳಷ್ಟು ಜನ ಚಿತ್ರ ಮಾಡೋಕೆ ಬಂದಿದ್ದರು. ಈ ಬಾರಿ ವಿಭಿನ್ನ ಚಿತ್ರವಷ್ಟೇ ಅಲ್ಲ, ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಬೇಕು ಅಂತಾಸೆ. “ದುರ್ಗಿ’ ಚಿತ್ರದಲ್ಲಿ ಮೊದಲ ಬಾರಿಗೆ ಬಾಯ್‌ಕಟ್‌ನಲ್ಲಿ ಕಾಣಿಸಿಕೊಂಡೆ. ಅಲ್ಲಿಂದ, ಇಲ್ಲಿಯವರೆಗೂ ಒಂದೇ ಹೇರ್‌ಸ್ಟೈಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಹಾಗಾಗಿ ಈ ಬಾರಿ ಗೆಟಪ್‌ ಸಹ ಬದಲಾಗಿದೆ. ಇನ್ನು ಈಗಾಗಲೇ 9 ಕೆಜಿಯಷ್ಟು ತೂಕ ಇಳಿಸಿಕೊಂಡಿದ್ದೇನೆ. ಹಾಗಂತ ಡಯಟಿಂಗ್‌ ಮಾಡಿಲ್ಲ.

ಜನವರಿಯಲ್ಲಿ ಚಿತ್ರ ಪ್ರಾರಂಭವಾಗುವಷ್ಟರಲ್ಲಿ ಇನ್ನೊಂದಿಷ್ಟು ತೂಕ ಕಳೆದುಕೊಂಡಿರುತ್ತೇನೆ’ ಎನ್ನುತ್ತಾರೆ ಮಾಲಾಶ್ರೀ. ಈ ಎರಡು ಚಿತ್ರಗಳ ಪೈಕಿ ಒಂದನ್ನು ರಾಮು ನಿರ್ಮಿಸಿದರೆ, ಇನ್ನೊಂದು ಚಿತ್ರವನ್ನು ಬೇರೆ ನಿರ್ಮಾಪಕರು ನಿರ್ಮಿಸುತ್ತಿದ್ದಾರೆ. ಚಿತ್ರದ ಹೆಸರೇನು, ನಿರ್ದೇಶಕರು ಯಾರು ಎಂಬ ವಿಷಯ ಕೇಳಿದರೆ, ಅವೆಲ್ಲಾ ರಾಮು ಅವರ ಬಾಯಿಂದಲೇ ಬರಲಿ ಎಂದು ತಪ್ಪಿಸಿಕೊಳ್ಳುತ್ತಾರೆ ಮಾಲಾಶ್ರೀ. ಅಂದ ಹಾಗೆ, ಈ ಚಿತ್ರ 2018ರ ಜನವರಿಯಲ್ಲಿ ಪ್ರಾರಂಭವಾಗಲಿದೆ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.