ಹಾರರ್‌, ಥ್ರಿಲ್ಲರ್‌ನತ್ತ ಮಾಲಾಶ್ರೀ!


Team Udayavani, Nov 14, 2017, 6:44 PM IST

Malasri-(3).jpg

ಮಾಲಾಶ್ರೀ ನಟಿಸಿರುವ “ಉಪ್ಪು ಹುಳಿ ಖಾರ’ ಚಿತ್ರ ನವೆಂಬರ್‌ 24 ರಂದು ಬಿಡುಗಡೆಯಾಗುತ್ತಿದೆ. ಈ ನಡುವೆಯೇ ಮಾಲಾಶ್ರೀಯವರು ಎರಡು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈ ಬಾರಿ ಆ್ಯಕ್ಷನ್‌ ಬದಲು ಹೊಸ ಜಾನರ್‌ನಲ್ಲಿ ಮಾಲಾಶ್ರೀಯವರು ಕಾಣಿಸಿಕೊಳ್ಳುತ್ತಿದ್ದು, ಥ್ರಿಲ್ಲರ್‌ ಹಾಗೂ ಹಾರರ್‌ ಜಾನರ್‌ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ಹೊಸ ಗೆಟಪ್‌ನಲ್ಲಿ ದರ್ಶನ ಕೊಡಲಿದ್ದಾರೆ. ಈ ಎರಡು ಚಿತ್ರಗಳು ಹೊಸ ವರ್ಷಕ್ಕೆ ಅಂದರೆ ಜನವರಿಯಲ್ಲಿ ಆರಂಭವಾಗಲಿವೆ. 

ಅಂದಹಾಗೆ, ಈ ಚಿತ್ರಗಳಿಗಾಗಿ ಮಾಲಾಶ್ರೀ ತಮ್ಮ ಲುಕ್‌, ಗೆಟಪ್‌ ಎಲ್ಲವನ್ನು ಬದಲಿಸಿಕೊಳ್ಳಲಿದ್ದಾರೆ. ಏಕೆಂದರೆ, ಚಿತ್ರದ ಪಾತ್ರ ತುಂಬಾ ವಿಶೇಷವಾಗಿದ್ದು, ಅದಕ್ಕಾಗಿ ಈಗಾಗಲೇ ತಯಾರಿ ನಡೆಸುತ್ತಿದ್ದಾರಂತೆ. ಮತ್ತೂಂದೆಡೆ ಮಾಲಾಶ್ರೀಯವರು ಈಗ ಸಖತ್‌ ಸ್ಲಿಮ್‌ ಆಗಿದ್ದಾರೆ. 9 ಕೆಜಿಯಷ್ಟು ತೂಕ ಇಳಿಸಿಕೊಂಡಿರುವ ಅವರು ಸತತವಾಗಿ ವರ್ಕೌಟ್‌ನಲ್ಲಿ ತೊಡಗಿದ್ದಾರೆ. ದಿನಕ್ಕೆ ಮೂರು ಗಂಟೆಗಳ ಕಾಲ ವರ್ಕೌಟ್‌ ಮಾಡಿ ತೂಕ ಇಳಿಸಿಕೊಂಡಿರುವ ಮಾಲಾಶ್ರೀಯವರಿಗೆ ಮತ್ತಷ್ಟು ಕೆಜಿ ಇಳಿಸಿಕೊಳ್ಳುವ ಇರಾದೆ ಇದೆ. ಆ ನಿಟ್ಟಿನಲ್ಲಿ ಅವರ ವರ್ಕೌಟ್‌ ಸಾಗುತ್ತಿದೆ.

“ನಾನು “ಉಪ್ಪು ಹುಳಿ ಖಾರ’ ಚಿತ್ರದ ನಂತರ ಯಾವೊಂದು ಚಿತ್ರವನ್ನೂ ಒಪ್ಪಿಕೊಂಡಿರಲಿಲ್ಲ. ಬಹಳಷ್ಟು ಜನ ಚಿತ್ರ ಮಾಡೋಕೆ ಬಂದಿದ್ದರು. ಈ ಬಾರಿ ವಿಭಿನ್ನ ಚಿತ್ರವಷ್ಟೇ ಅಲ್ಲ, ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಬೇಕು ಅಂತಾಸೆ. “ದುರ್ಗಿ’ ಚಿತ್ರದಲ್ಲಿ ಮೊದಲ ಬಾರಿಗೆ ಬಾಯ್‌ಕಟ್‌ನಲ್ಲಿ ಕಾಣಿಸಿಕೊಂಡೆ. ಅಲ್ಲಿಂದ, ಇಲ್ಲಿಯವರೆಗೂ ಒಂದೇ ಹೇರ್‌ಸ್ಟೈಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಹಾಗಾಗಿ ಈ ಬಾರಿ ಗೆಟಪ್‌ ಸಹ ಬದಲಾಗಿದೆ. ಇನ್ನು ಈಗಾಗಲೇ 9 ಕೆಜಿಯಷ್ಟು ತೂಕ ಇಳಿಸಿಕೊಂಡಿದ್ದೇನೆ. ಹಾಗಂತ ಡಯಟಿಂಗ್‌ ಮಾಡಿಲ್ಲ.

ಜನವರಿಯಲ್ಲಿ ಚಿತ್ರ ಪ್ರಾರಂಭವಾಗುವಷ್ಟರಲ್ಲಿ ಇನ್ನೊಂದಿಷ್ಟು ತೂಕ ಕಳೆದುಕೊಂಡಿರುತ್ತೇನೆ’ ಎನ್ನುತ್ತಾರೆ ಮಾಲಾಶ್ರೀ. ಈ ಎರಡು ಚಿತ್ರಗಳ ಪೈಕಿ ಒಂದನ್ನು ರಾಮು ನಿರ್ಮಿಸಿದರೆ, ಇನ್ನೊಂದು ಚಿತ್ರವನ್ನು ಬೇರೆ ನಿರ್ಮಾಪಕರು ನಿರ್ಮಿಸುತ್ತಿದ್ದಾರೆ. ಚಿತ್ರದ ಹೆಸರೇನು, ನಿರ್ದೇಶಕರು ಯಾರು ಎಂಬ ವಿಷಯ ಕೇಳಿದರೆ, ಅವೆಲ್ಲಾ ರಾಮು ಅವರ ಬಾಯಿಂದಲೇ ಬರಲಿ ಎಂದು ತಪ್ಪಿಸಿಕೊಳ್ಳುತ್ತಾರೆ ಮಾಲಾಶ್ರೀ. ಅಂದ ಹಾಗೆ, ಈ ಚಿತ್ರ 2018ರ ಜನವರಿಯಲ್ಲಿ ಪ್ರಾರಂಭವಾಗಲಿದೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.