ಹಿಮಾಲಯನ್‌ ಟ್ರಿಪ್‌ ಹೊರಟ ಮಕ್ಕಳು


Team Udayavani, Nov 15, 2017, 10:27 AM IST

himalayan.jpg

ಕನ್ನಡದಲ್ಲಿ ಮಕ್ಕಳ ಚಿತ್ರಗಳಿಗೆ ಬರವಿಲ್ಲ. ಹೊಸ ಚಿತ್ರಗಳು ಸೆಟ್ಟೇರುತ್ತಲೇ ಇವೆ. ಆ ಸಾಲಿಗೆ ಈಗ “ದಿ ಗ್ರೇಟ್‌ ಹಿಮಾಲಯನ್‌ ಟ್ರಿಪ್‌’ ಎಂಬ ಹೊಸ ಚಿತ್ರವೂ ಸೇರಿದೆ. ಇದು ಶಾಲೆಯೊಂದರ 40 ಮಕ್ಕಳ ಸಾಹಸದ ಕಥೆ ಹೊಂದಿರುವ ಚಿತ್ರ. ಈಗಾಗಲೇ ಚಿತ್ರಕ್ಕೆ ಮುಹೂರ್ತ ನಡೆದು, ಚಿತ್ರೀಕರಣ ಜೋರಾಗಿಯೇ ನಡೆಯುತ್ತಿದೆ.

ಇತ್ತೀಚೆಗೆ ನಡೆದ ಮುಹೂರ್ತದಲ್ಲಿ ಕುಮಾರಿ ನಿವೇದಿತಾ ಕ್ಲಾಪ್‌ ಮಾಡಿದರೆ, ಚಂದ್ರಕಲಾ ನಟರಾಜ್‌ ಅವರು ಚಿತ್ರಕ್ಕೆ ಚಾಲನೆ ನೀಡಿದರು. ಉದಿತ್‌ ಕ್ಯಾಮೆರಾಗೆ ಚಾಲನೆ ನೀಡಿದರು. ಈ ಚಿತ್ರಕ್ಕೆ “ಭಾರತ ದರ್ಶನ ಮಕ್ಕಳ ಶೈಕ್ಷಣಿಕ ಪ್ರವಾಸ’ ಎಂಬ ಅಡಿಬರಹವಿದೆ. ಅಲ್ಲಿಗೆ ಇದು ಶೈಕ್ಷಣಿಕ ಪ್ರವಾಸದಲ್ಲಾಗುವ ಘಟನೆಗಳನ್ನು ಹೊಂದಿರುವ ಕಥೆ ಎಂಬುದನ್ನು ಪ್ರತ್ಯೇಕವಾಗಿ ಹೇಳುವಂತಿಲ್ಲ. 

ಈ ಚಿತ್ರಕ್ಕೆ ಕೆ.ಈಶ್ವರ್‌ ಎಲೆಕೊಪ್ಪ ನಿರ್ದೇಶಕರು. ಕಥೆ, ಚಿತ್ರಕಥೆ ಅವರದೇ. ಸಿ.ನಾಗೇಶ್‌(ಸಿಂಗಸಂದ್ರ) ಮತ್ತು ಕೆ. ಈಶ್ವರ್‌ ಚಿತ್ರದ ನಿರ್ಮಾಪಕರು. ಈ ಚಿತ್ರದ ಬಗ್ಗೆ ಹೇಳುವುದಾದರೆ, ಶಾಲೆಯೊಂದರ 40 ಜನ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸದ ಮೂಲಕ ಭಾರತದ ಪ್ರಮುಖ ಪ್ರವಾಸಿ ತಾಣ ವೀಕ್ಷಿಸಲು ಹೊರಡುತ್ತಾರೆ. ಒಂದು ಬಸ್‌ ಮೂಲಕ ಪ್ರವಾಸ ಹೊರಡುವ ಮಕ್ಕಳು ಕೊನೆಗೆ ಹಿಮಾಲಯ ತಲುಪುತ್ತಾರೆ.

ಅಲ್ಲಿಂದ ಬರುವಾಗ ಮಕ್ಕಳಿದ್ದ ಬಸ್‌ ಅಪಾಯಕ್ಕೆ ಸಿಲುಕುತ್ತದೆ. ಅಲ್ಲಿ ಆರು ಜನ  ಮಕ್ಕಳು ತಮ್ಮ ಬುದ್ದಿ ಸಾಮರ್ಥ್ಯದಿಂದ ಆ ಬಸ್‌ನಲ್ಲಿದ್ದ  ಎಲ್ಲರನ್ನು ಹೇಗೆ ಕಾಪಾಡುತ್ತಾರೆ ಎಂಬುದು ಕಥೆ. ಮೈಸೂರು, ಗುರುವಾಯೂರು, ಮಧುರೈ ಸೇರಿದಂತೆ ಭಾರತದ ಎಲ್ಲಾ ರಾಜ್ಯಗಳಲ್ಲಿ ಸುಮಾರು 30 ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ಮಾಡುವ ಯೋಜನೆ ನಿರ್ದೇಶಕರದ್ದು. ಚಿತ್ರಕ್ಕೆ ಸಂತೋಷ್‌ ಛಾಯಾಗ್ರಾಹಕರು.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.