ಧ್ರುವ ಸರ್ಜಾರಿಂದ “ಸಂಹಾರ’ ಚಿತ್ರದ ಹಾಡುಗಳ ಬಿಡುಗಡೆ
Team Udayavani, Nov 18, 2017, 4:18 PM IST
ಚಿರಂಜೀವಿ ಸರ್ಜಾ ಅಭಿನಯದ “ಸಂಹಾರ’ ಸದ್ಯದಲ್ಲೇ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ ಚಿತ್ರದ ಹಾಡುಗಳನ್ನು ನಟ ಹಾಗೂ ಚಿರಂಜೀವಿ ಸರ್ಜಾ ಅವರ ಸಹೋದರ ಧ್ರುವ ಸರ್ಜಾ ಬಿಡುಗಡೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಚಿರು, ಕಾವ್ಯ ಶೆಟ್ಟಿ, ಚಿಕ್ಕಣ್ಣ, ಸಂಗೀತ ನಿರ್ದೇಶಕ ರವಿ ಬಸ್ರೂರು, ನಿರ್ದೇಶಕ ಗುರು ದೇಶಪಾಂಡೆ ಮುಂತಾದವರು ಹಾಜರಿದ್ದರು.
ಈ ಚಿತ್ರದಲ್ಲಿ ಚಿರು ಅಂಧ ಯುವಕನಾಗಿ ಕಾಣಿಸಿಕೊಂಡಿದ್ದಾರಂತೆ. ಅಂಧನೊಬ್ಬ ಯಾರನ್ನು ಮತ್ತು ಯಾಕೆ “ಸಂಹಾರ’ ಮಾಡುತ್ತಾನೆ ಎನ್ನುವುದೇ ಚಿತ್ರದ ಕಥೆ. ಇನ್ನು ಚಿಕ್ಕಣ್ಣ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಚಿರು ಮತ್ತು ಚಿಕ್ಕಣ್ಣರಷ್ಟೇ ಅಲ್ಲ, “ರುದ್ರ ತಾಂಡವ’ ಚಿತ್ರಕ್ಕೆ ಛಾಯಾಗ್ರಾಹಕರಾಗಿದ್ದ ಜಗದೀಶ್ ವಾಲಿ, ಸಂಕಲನಕಾರ ಕೆ.ಎಂ. ಪ್ರಕಾಶ್ ಇಲ್ಲೂ ಮುಂದುವರೆಯುತ್ತಿದ್ದಾರೆ.
ಸಂಗೀತ ನಿರ್ದೇಶಕ ರವಿ ಬಸ್ರೂರು ಮಾತ್ರ ಹೊಸ ಸೇರ್ಪಡೆ. ಅಂದಹಾಗೆ, ಈ ಚಿತ್ರದಲ್ಲಿ ಚಿರುಗೆ ನಾಯಕಿಯರಾಗಿ ಹರಿಪ್ರಿಯ ಮತ್ತು ಕಾವ್ಯ ಶೆಟ್ಟಿ ಅಭಿನಯಿಸಿದ್ದಾರೆ. ಚಿತ್ರವನ್ನು ವೆಂಕಟೇಶ್ ಮತ್ತು ಸುಂದರ್ ಕಾಮರಾಜ್ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Kannada Cinema: ತೆರೆಗೆ ಬಂತು ಯುವ, ತಾರಿಣಿ
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’