ಕನ್ನಡ ಚಿತ್ರರಂಗಕ್ಕೆ ವಿಷ್ಣು ಒಬ್ಬರೇ ರಾಮಾಚಾರಿ


Team Udayavani, Nov 19, 2017, 5:40 PM IST

yash.jpg

ಯಶ್‌ ಕೆರಿಯರ್‌ನಲ್ಲಿ ಮೊದಲು ಸಿಕ್ಕ ದೊಡ್ಡ ಯಶಸ್ಸು “ಮಿಸ್ಟರ್‌ ಅಂಡ್‌ ಮಿಸಸ್‌ ರಾಮಾಚಾರಿ’ ಚಿತ್ರದ್ದು ಎಂದರೆ ತಪ್ಪಲ್ಲ. ವಿಷ್ಣುವರ್ಧನ್‌ ಅವರನ್ನು ಎದೆಮೇಲೆ ಹಚ್ಚೆಹಾಕಿಸಿಕೊಂಡು ಸಖತ್‌ ರಗಡ್‌ ಆಗಿ ಕಾಣಿಸಿಕೊಂಡ ಯಶ್‌ಗೆ ಆ ಚಿತ್ರ ದೊಡ್ಡ ಮಟ್ಟದ ಯಶಸ್ಸನ್ನು ತಂದುಕೊಟ್ಟಿತು. ಆ ಚಿತ್ರದ ನಂತರ ಯಶ್‌ ಹೋದಲ್ಲೆಲ್ಲಾ ಅಭಿಮಾನಿಗಳು ಅವರನ್ನು “ರಾಮಾಚಾರಿ …’ ಎಂದು ಕೂಗಲಾರಂಭಿಸಿದರು. ಈಗ ಯಶ್‌ “ನಾನು ರಾಮಾಚಾರಿಯಲ್ಲ.

ರಾಮಾಚಾರಿ ಯಾವತ್ತಿದ್ದರೂ ಸಾಹಸ ಸಿಂಹ ವಿಷ್ಣುವರ್ಧನ್‌. ನಾನು ಆ ರಾಮಾಚಾರಿಯ ಅಭಿಮಾನಿಯಷ್ಟೇ. ಕನ್ನಡ ಚಿತ್ರರಂಗಕ್ಕೆ ಒಬ್ಬರೇ ರಾಮಾಚಾರಿ. ಅದು ನಮ್ಮ ಸಾಹಸ ಸಿಂಹ’ ಎಂದಿದ್ದಾರೆ. ಅಷ್ಟಕ್ಕೂ ಈ ಮಾತನ್ನು ಯಶ್‌ ಈಗ ಹೇಳಲು ಕಾರಣವೇನೆಂದು ನೀವು ಕೇಳಿದರೆ ಅದಕ್ಕೆ ಉತ್ತರ “ರಾಜಾಸಿಂಹ’. ಅನಿರುದ್ಧ್ ಅವರು “ರಾಜಾಸಿಂಹ’ ಎಂಬ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ವಿಷ್ಣುವರ್ಧನ್‌ ಅವರ ಪಾತ್ರವನ್ನು ರೀಕ್ರಿಯೇಟ್‌ ಮಾಡಲಾಗಿದೆ.

ಭಾನುವಾರ ನಡೆದ ಈ ಚಿತ್ರದ ಆಡಿಯೋ ಬಿಡುಗಡೆಗೆ ಯಶ್‌ ಅತಿಥಿಯಾಗಿ ಬಂದಿದ್ದರು. ಈ ಸಂದರ್ಭದಲ್ಲಿ ಅವರು “ನಾನು ಯಾವ ಕಾರಣಕ್ಕೂ ರಾಮಾಚಾರಿ ಅಲ್ಲ. ನಾನು ಕೂಡಾ ವಿಷ್ಣುವರ್ಧನ್‌ ಅವರ ಅಭಿಮಾನಿ. ಹಾಗಾಗಿ, “ಮಿಸ್ಟರ್‌ ಅಂಡ್‌ ಮಿಸಸ್‌ ರಾಮಾಚಾರಿ’ಯಲ್ಲಿ ರಾಮಾಚಾರಿಯ ಅಭಿಮಾನಿಯಾಗಿ ಕಾಣಿಸಿಕೊಂಡಿದ್ದೇನೆ’ ಎಂದರು. ಇನ್ನು, ಯಶ್‌ ಅವರಿಗೆ “ಮಿಸ್ಟರ್‌ ಅಂಡ್‌ ಮಿಸಸ್‌ ರಾಮಾಚಾರಿ’ ಚಿತ್ರ ಬಯಸದೇ ಬಂದ ಭಾಗ್ಯವಂತೆ.

“ಆ ತರಹದ ಒಂದು ಸಿನಿಮಾ ಮಾಡುತ್ತೇನೆಂದು ನಾನಂದುಕೊಂಡಿರಲಿಲ್ಲ. ಆದರೆ, ಸಂತೋಷ್‌ ಆನಂದರಾಮ್‌ ಬಂದು ಕಥೆ ಕೇಳಿದಾಗ ರೋಮಾಂಚನವಾಯಿತು. ಹಾಗಾಗಿ, ವಿಷ್ಣುವರ್ಧನ್‌ ಅವರನ್ನು ಎದೆಮೇಲೆ ಹಚ್ಚೆ ಹಾಕಿಸಿಕೊಂಡೆ. ಏಕೆಂದರೆ ಅವರಿರಬೇಕಾದ ಜಾಗ ಅದು. ಆ ಚಿತ್ರವನ್ನು ಜನ ಇಷ್ಟಪಡುವ ಮೂಲಕ ನನಗೂ ದೊಡ್ಡ ಯಶಸ್ಸು ಕೊಟ್ಟಿತು’ ಎಂದು ರಾಮಾಚಾರಿಯ ದಿನಗಳನ್ನು ಮೆಲುಕು ಹಾಕಿದರು ಯಶ್‌. 

ಸ್ಮಾರಕ ಬಿಕ್ಕಟ್ಟು ಬಗೆಹರಿಸಿ: ಸರ್ಕಾರಕ್ಕೆ ಯಶ್‌ ಮನವಿ: ವಿಷ್ಣುವರ್ಧನ್‌ ಅವರ ಸ್ಮಾರಕದ ವಿಷಯದಲ್ಲಿ ಸಾಕಷ್ಟು ಗೊಂದಲಗಳು ನಡೆಯುತ್ತಿರುವುದನ್ನು ಗಮನಿಸಿರುವ ಯಶ್‌, ವಿಷ್ಣುವರ್ಧನ್‌ ಸ್ಮಾರಕ ಬಿಕ್ಕಟ್ಟನ್ನು ಕೂಡಲೇ ಬಗೆಹರಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

“ವಿಷ್ಣುವರ್ಧನ್‌ ಅವರಿಗೆ ಅವರದ್ದೇ ಆದ ಗೌರವವಿದೆ, ದೊಡ್ಡ ಅಭಿಮಾನಿ ವರ್ಗವಿದೆ. ಕೂಡಲೇ ಸರ್ಕಾರ ಗಮನಹರಿಸಿ, ಸ್ಮಾರಕ ವಿಚಾರದಲ್ಲಿನ ಬಿಕ್ಕಟ್ಟನ್ನು ಬಗೆಹರಿಸಿಬೇಕು. ಒಂದು ವೇಳೆ ಆಗಲ್ಲ ಎಂದಾದರೆ ನಾವು ಅಭಿಮಾನಿಗಳು ಸೇರಿ ಮಾಡುತ್ತೇವೆ’ ಎಂದರು. 

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.