ಯಶ್‌ ಹುಟ್ಟುಹಬ್ಬಕ್ಕೆ ಕೆಜಿಎಫ್ ಟೀಸರ್‌


Team Udayavani, Nov 22, 2017, 10:53 AM IST

KGF-2.jpg

ಕನ್ನಡದಲ್ಲಿ ಈಗಲೇ ನಿರೀಕ್ಷೆ ಹುಟ್ಟಿಸಿರುವ ಯಶ್‌ ಅಭಿನಯದ “ಕೆಜಿಎಫ್’ ಚಿತ್ರವು ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಡಿಸೆಂಬರ್‌ ಕೊನೆಯ ವಾರದಲ್ಲಿ ಬಿಡುಗಡೆಯಾಗಬೇಕಿತ್ತು. ಚಿತ್ರದ ಚಿತ್ರೀಕರಣವೇ ಇನ್ನೂ ಮುಕ್ತಾಯವಾಗದ ಕಾರಣ, ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ. ಸದ್ಯದ ಮಟ್ಟಿಗೆ ಹೇಳುವುದಾದರೆ, ಚಿತ್ರದ ಬಿಡುಗಡೆ ಏನಿದ್ದರೂ ಮುಂದಿನ ವರ್ಷ ಯುಗಾದಿ ಹಬ್ಬದ ಸಂದರ್ಭದಲ್ಲೇ.

ಅಲ್ಲಿಗೆ ಈ ವರ್ಷ ಯಶ್‌ ಅಭಿನಯದ ಯಾವೊಂದು ಚಿತ್ರ ಸಹ ಬಿಡುಗಡೆಯಾಗುತ್ತಿಲ್ಲ. ಈ ಮಧ್ಯೆ ಬಂದಿರುವ ಸುದ್ದಿಯ ಪ್ರಕಾರ, “ಕೆಜಿಎಫ್’ ಚಿತ್ರದ ಟೀಸರ್‌ ಯಶ್‌ ಅವರ ಹುಟ್ಟುಹಬ್ಬದಂದು ಬಿಡುಗಡೆಯಾಗಲಿರುವುದು. ಯಶ್‌ ಜನವರಿ ಎಂಟರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅಂದು “ಕೆಜಿಎಫ್’ ಚಿತ್ರದ ಮೊದಲ ಟೀಸರ್‌ ಬಿಡುಗಡೆಯಾಗಲಿದೆ.

ಇಲ್ಲಿಯವರೆಗೂ ಚಿತ್ರದ ಎರಡು ಪೋಸ್ಟರ್‌ಗಳು ಮಾತ್ರ ಬಿಡುಗಡೆಯಾಗಿದ್ದು, ಚಿತ್ರದ ಕುರಿತು ಯಾವುದೇ ರೀತಿಯ ಮಾಹಿತಿಗಳು ಸಿಕ್ಕಿಲ್ಲ. ಹಾಗಾಗಿ ಚಿತ್ರದಲ್ಲಿ ಏನಿರಬಹುದು ಎಂಬ ಕುತೂಹಲವು ಯಶ್‌ ಅಭಿಮಾನಿಗಳಿಗೆ ಸೇರಿದಂತೆ ಎಲ್ಲರಿಗೂ ಇದೆ. ಅದು ಯಶ್‌ ಅವರ ಹುಟ್ಟುಹಬ್ಬಕ್ಕೆ ತಣಿಯುವ ಸಾಧ್ಯತೆ ಇದೆ. ಅಂದಹಾಗೆ, ನಿರ್ದೇಶಕ ಪ್ರಶಾಂತ್‌ ನೀಲ್‌ ಈ ಚಿತ್ರವನ್ನು ನಾಲ್ಕು ಭಾಷೆಯಲ್ಲಿ ಮಾಡುತ್ತಿದ್ದಾರೆ.

ಅಂತೆಯೇ ಪೋಸ್ಟರ್‌ನಲ್ಲೂ ಕೂಡ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಶೀರ್ಷಿಕೆ ಹಾಕಿ ಬಿಡುಗಡೆ ಮಾಡಲಾಗಿದೆ. ಸದ್ಯಕ್ಕೆ ಇದು ಎರಡನೇ ಪೋಸ್ಟರ್‌ ರಿಲೀಸ್‌ ಆಗಿದ್ದು, ಸಿನಿಮಾದ ಚಿತ್ರೀಕರಣ ಜೋರಾಗಿಯೇ ಸಾಗುತ್ತಿದೆ. ಇನ್ನು, “ಕೆಜಿಎಫ್’ ಮೂಲಕ ಶ್ರೀನಿಧಿ ಶೆಟ್ಟಿ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.  

ಮೂಲತಃ ಮಂಗಳೂರಿನ ಬೆಡಗಿಯಾಗಿರುವ ಶ್ರೀನಿಧಿ ಶೆಟ್ಟಿ, 2015 ರಲ್ಲಿ ಮಣಪ್ಪುರಂ ಮಿಸ್‌ ಸೌತ್‌ ಇಂಡಿಯಾ ಬ್ಯೂಟಿ ಕಾಂಟೆಸ್ಟ್‌ ಆಗಿ ಭಾಗವಹಿಸಿ ಮಿಸ್‌ ಕರ್ನಾಟಕ ಮತ್ತು ಮಿಸ್‌ಬ್ಯೂಟಿಫ‌ುಲ್ ಸ್ಮೈಲ್ ಪ್ರಶಸ್ತಿ ಗೆದ್ದಿದ್ದರು. ಇನ್ನು, ವಿಜಯ್‌ ಕಿರಗಂದೂರು ಚಿತ್ರದ ನಿರ್ಮಾಪಕರು. ಈಗಾಗಲೇ ವಿಜಯ್‌ಕಿರಗಂದೂರು ಕೂಡ ಯಶಸ್ವಿ ನಿರ್ಮಾಪಕರೆನಿಸಿಕೊಂಡಿದ್ದಾರೆ.

ರವಿ ಬಸ್ರೂರ್‌ ಸಂಗೀತವಿದೆ. ಸ್ಥಿರಚಿತ್ರ ಛಾಯಾಗ್ರಾಹಕ ಭುವನ್‌ ಗೌಡ ಛಾಯಾಗ್ರಹಣ ಮಾಡುತ್ತಿದ್ದಾರೆ. ಉಳಿದಂತೆ, ರವಿ ಸಂತೇಹಕ್ಲು ಮತ್ತು ಸುರೇಶ್‌ ದೊಡ್ಡಮನಿ ಕಲಾ ನಿರ್ದೇಶನವಿದೆ. ರವಿವರ್ಮ ಸಾಹಸ ಸಂಯೋಜನೆ, ರಾಮರಾವ್‌ ಮತ್ತು ಕಾರ್ತಿಕ್‌ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.